AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ. ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ […]

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 31, 2020 | 5:14 PM

Share

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ.

ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ ಮತ್ತು ಹಿರಿಯ ಸಹೋದ್ಯೋಗಿ ರಾಜೀವ್ ಧವನ್ ಅವರು ತಕ್ಷಣ 1 ರೂ ನೀಡಿ ಸಹಾಯ ಮಾಡಿದ್ದಾರೆ. ಅದನ್ನು ನಾನು ಕೃತಜ್ಞತೆಯಿಂದ ಅಂಗೀಕರಿಸಿದ್ದೇನೆ ಎಂದು ಹೇಳಿದ್ರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ. ಬೊಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ.

1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡಬಾರದು ಎಂದೂ ಸಹ ಇಂದು ಬೆಳಗ್ಗೆ ತೀರ್ಪು ನೀಡಿತ್ತು.

ಇದನ್ನೂ ಓದಿ: ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

Published On - 3:05 pm, Mon, 31 August 20

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್