AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ. ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ […]

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 31, 2020 | 5:14 PM

ದೆಹಲಿ: ಹಿರಿಯ ವಕೀಲರಾದ ಪ್ರಶಾಂತ್ ಭೂಷಣ್ ಅವರು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿಯಾಗಿ ಸುಪ್ರೀಂಕೋರ್ಟ್ ನಿಂದ ಇಂದು 1 ರೂ ದಂಡನಾರ್ಹ ಶಿಕ್ಷೆಗೊಳಗಾದರು. ಸೆ. 15ರೊಳಗೆ ಆ 1 ರೂ ದಂಡ ಕಟ್ಟುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತಾದರೂ, ಪ್ರಶಾಂತ್ ಭೂಷಣ್ ಅವರ ಪರ ವಕೀಲರು ತಕ್ಷಣವೇ ಕೋರ್ಟ್​ಗೆ 1 ರೂ ದಂಡ ಕಟ್ಟಿದ್ದಾರೆ.

ದಂಡ ಕಟ್ಟಿದ ತಮ್ಮ ಸಹೋದ್ಯೋಗಿಗೆ ವಕೀಲ ಪ್ರಶಾಂತ್ ಭೂಷಣ್ ಕೃತಜ್ಞತೆ ತಿಳಿಸಿದ್ದಾರೆ. ಇಂದು ನನಗೆ ಸುಪ್ರೀಂಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದ್ದಾಗ ನನ್ನ ವಕೀಲ ಮತ್ತು ಹಿರಿಯ ಸಹೋದ್ಯೋಗಿ ರಾಜೀವ್ ಧವನ್ ಅವರು ತಕ್ಷಣ 1 ರೂ ನೀಡಿ ಸಹಾಯ ಮಾಡಿದ್ದಾರೆ. ಅದನ್ನು ನಾನು ಕೃತಜ್ಞತೆಯಿಂದ ಅಂಗೀಕರಿಸಿದ್ದೇನೆ ಎಂದು ಹೇಳಿದ್ರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆ ‌ಎಸ್.ಎ. ಬೊಬ್ಡೆ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನಕಾರಿ ಫೋಸ್ಟ್​ ಮಾಡಿದ್ದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಕೀಲ ಪ್ರಶಾಂತ್ ಭೂಷಣ್ ದೋಷಿಯಾಗಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರಶಾಂತ್ ಭೂಷಣ್​ಗೆ ಸುಪ್ರೀಂಕೋರ್ಟ್ ಸಾಂಕೇತಿಕವಾಗಿ ಒಂದು ರೂಪಾಯಿ ದಂಡ ವಿಧಿಸಿದೆ.

1 ರೂ. ದಂಡ ಪಾವತಿಸದಿದ್ದರೆ 3 ತಿಂಗಳು ಜೈಲು ಶಿಕ್ಷೆ ಹಾಗೂ 3 ವರ್ಷ ಕೋರ್ಟ್​ನಲ್ಲಿ ವಾದ ಮಾಡಬಾರದು ಎಂದೂ ಸಹ ಇಂದು ಬೆಳಗ್ಗೆ ತೀರ್ಪು ನೀಡಿತ್ತು.

ಇದನ್ನೂ ಓದಿ: ಸೆ. 15ರೊಳಗೆ ಸಾಂಕೇತಿಕವಾಗಿ 1 ರೂ ದಂಡ ಕಟ್ಟುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್

Published On - 3:05 pm, Mon, 31 August 20

ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ