AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇರರಿವಾಲನ್​​ನಂತೆ ಬಿಡುಗಡೆ ಮಾಡಿ; ರಾಜೀವ್ ಗಾಂಧಿ ಹಂತಕ ರವಿಚಂದ್ರನ್​​ನಿಂದ ಸುಪ್ರೀಂಗೆ ಮೊರೆ 

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಪೇರರಿವಾಲನ್​​ನಂತೆ ನನ್ನನ್ನೂ ಬಿಡುಗಡೆ ಮಾಡಿ  ಎಂದು  ರಾಜೀವ್ ಗಾಂಧಿ ಹಂತಕ ರವಿಚಂದ್ರನ್  ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದಾರೆ .

ಪೇರರಿವಾಲನ್​​ನಂತೆ ಬಿಡುಗಡೆ ಮಾಡಿ; ರಾಜೀವ್ ಗಾಂಧಿ ಹಂತಕ ರವಿಚಂದ್ರನ್​​ನಿಂದ ಸುಪ್ರೀಂಗೆ ಮೊರೆ 
ಸುಪ್ರೀಂಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 11, 2022 | 6:24 PM

Share

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಅಪರಾಧಿ ಪಿ ರವಿಚಂದ್ರನ್ (P Ravichandran) ಸೋಮವಾರ ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಿದ್ದಾರೆ. ತನ್ನನ್ನು ಎಜಿ ಪೇರರಿವಾಲನ್ ಅವರಂತೆಯೇ ಬಿಡುಗಡೆ ಮಾಡಬೇಕು ಎಂದು ರವಿಚಂದ್ರನ್ ಮನವಿ ಮಾಡಿದ್ದಾರೆ. 30 ವರ್ಷಗಳಿಂದ ಜೈಲಿನಲ್ಲಿರುವ ರವಿಚಂದ್ರನ್ ತಮ್ಮ ಪ್ರಕರಣದ ವಿಚಾರಣೆ ನಡೆದು ಬಿಡುಗಡೆ ಆದೇಶ ಬರುವವರೆಗೂ ಮಧ್ಯಂತರ  ಜಾಮೀನು ನೀಡಬೇಕು ಎಂದು ಕೇಳಿದ್ದಾರೆ. ಮೇ 18ರಂದು ಸುಪ್ರೀಂಕೋರ್ಟ್ ಪೇರರಿವಾಲನ್ ಬಿಡುಗಡೆಗೆ ಆದೇಶಿದ್ದು , ಈ ಪ್ರಕರಣದಲ್ಲಿ ಇನ್ನೂ 6 ಮಂದಿ ಜೈಲಿನಲ್ಲಿದ್ದಾರೆ. ಇದನ್ನು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ ರವಿಚಂದ್ರನ್, ವಕೀಲ ಆನಂದ ಸೆಲ್ವನ್ ಮೂಲಕ ಮನವಿ ಸಲ್ಲಿಸಿದ್ದಾರೆ. ರವಿಚಂದ್ರನ್ ಜೈಲಿನಲ್ಲಿ ಮಾಡಿದ ಕೆಲಸದ ಸಂಪಾದನೆಯಿಂದ ₹ 20,000ವನ್ನು ಅಮೆರಿಕದ ಹಾರ್ವರ್ಡ್ ಯುನಿವರ್ಸಿಟಿಯ ತಮಿಳು ವಿಭಾಗಕ್ಕೆ ಕೊಟ್ಟಿದ್ದಾರೆ. ಇದು ಅವರೊಬ್ಬ ಸಾಮಾಜಿಕ ಕಳಕಳಿಯುಳ್ಳ ವ್ಯಕ್ತಿ ಎಂಬುದನ್ನು ತೋರಿಸುತ್ತದೆ. ಆತನನ್ನು ಬಿಡುಗಡೆ ಮಾಡಿದರೆ ಜನರಿಗೆ ಯಾವುದೇ ಅಪಾಯವಿಲ್ಲ. 2016ರಿಂದ 2017ರ ವರೆಗೆ ಅವರು ಜೈಲಿನಲ್ಲಿ ದುಡಿದು ಹಣ ಸಂಪಾದಿಸಿದ್ದಾರೆ. ಅವರು ಸಾಮಾಜದಲ್ಲಿ ಕೆಚ್ಚ ಶಕ್ತಿಯಾಗಿರುವುದಿಲ್ಲ ಎಂದು ಮನವಿಯಲ್ಲಿ ಹೇಳಿದೆ.

ರವಿಚಂದ್ರನ್ ಈ ಹಿಂದೆ ತಾನೂ ಸೇರಿದಂತ ಜೈಲಿನಲ್ಲಿರುವ ಇತರ ದೋಷಿಗಳನ್ನು (ರಾಜೀವ್ ಗಾಂಧಿ ಹತ್ಯೆ ಪ್ರಕರಣ) ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದರು.

Published On - 5:37 pm, Mon, 11 July 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ