AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಗುಂಪು ಹತ್ಯೆಯ ಪಿತಾಮಹ; ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2014ರ ಮೊದಲು, 'ಲಿಂಚಿಂಗ್ (ಹತ್ಯೆ)' ಎಂಬ ಪದವನ್ನು ಪ್ರಾಯೋಗಿಕವಾಗಿ ನಾವು ಯಾರೂ ಕೇಳಿರಲಿಲ್ಲ. ಧನ್ಯವಾದಗಳು ಮೋದಿಜೀ ಎಂದು ಟ್ವೀಟ್ ಮೂಲಕ ಲೇವಡಿ ಮಾಡಿದ್ದರು.

ರಾಜೀವ್ ಗಾಂಧಿ ಗುಂಪು ಹತ್ಯೆಯ ಪಿತಾಮಹ; ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು
ರಾಜೀವ್ ಗಾಂಧಿ
TV9 Web
| Edited By: |

Updated on:Dec 21, 2021 | 6:43 PM

Share

ನವದೆಹಲಿ: ಇತ್ತೀಚೆಗೆ ಹೆಚ್ಚಾಗಿರುವ ಗುಂಪು ಹತ್ಯೆಯ (Mob Lynching) ಕುರಿತು ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ (Rajiv Gandhi) ವಿರುದ್ಧ ಬಿಜೆಪಿ ನಾಯಕರು ದಾಳಿ ನಡೆಸಿದ್ದಾರೆ. ರಾಜೀವ್ ಗಾಂಧಿ ಗುಂಪು ಹತ್ಯೆಯ ಪಿತಾಮಹ ಎಂದು ಬಿಜೆಪಿ ನಾಯಕರು ಜರಿದಿದ್ದಾರೆ. 

ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಇಂದಿರಾ ಗಾಂಧಿಯವರ ಹತ್ಯೆಯ ನಂತರ ಸಿಖ್ಖರ “ಹತ್ಯಾಕಾಂಡ”ವನ್ನು ಕಾಂಗ್ರೆಸ್ ಸಮರ್ಥಿಸುತ್ತಿದೆ ಎಂದು ಆರೋಪಿಸಿದರು. ಅವರು ಆ ವರ್ಷ ರಾಜೀವ್ ಗಾಂಧಿಯವರ ಭಾಷಣದ ಆಯ್ದ ಭಾಗವಾದ ‘ಜಬ್ ಭೀ ಬಡಾ ಪೆಡ್ ಗಿರ್ತಾ ಹೈ, ಧರ್ತಿ ಹಿಲ್ತಿ ಹೈ’ ಅಥವಾ ‘ದೊಡ್ಡ ಮರ ಬಿದ್ದಾಗ ಭೂಮಿ ನಡುಗುತ್ತದೆ’ ಎಂದು ಪೋಸ್ಟ್ ಮಾಡಿದ್ದಾರೆ

1969 ಮತ್ತು 1993ರ ನಡುವೆ ಕಾಂಗ್ರೆಸ್ ಆಡಳಿತದಲ್ಲಿ ನಡೆದ ಗಲಭೆಗಳ ಬಗ್ಗೆಯೂ ಮಾಳವಿಯಾ ಪೋಸ್ಟ್ ಮಾಡಿದ್ದಾರೆ. ಅಹಮದಾಬಾದ್ (1969), ಜಲಗಾಂವ್ (1970), ಮೊರಾದಾಬಾದ್ (1980), ನೆಲ್ಲಿ (1983), ಭಿವಂಡಿ (1984), ದೆಹಲಿ (1984), ಅಹಮದಾಬಾದ್ (1985), ಭಾಗಲ್ಪುರ್ (1989), ಹೈದರಾಬಾದ್ (1990), ಕಾನ್ಪುರ (1992) , ಮುಂಬೈ (1993) ಹೀಗೆ ಕಾಂಗ್ರೆಸ್ ಅವಧಿಯಲ್ಲಿ ಅದೆಷ್ಟೋ ಹತ್ಯಾಕಾಂಡಗಳಾಗಿವೆ. ಇದು ನೆಹರೂ-ಗಾಂಧಿ ಪರಿವಾರದ ಮೇಲ್ವಿಚಾರಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಒಂದು ಸಣ್ಣ ಪಟ್ಟಿ ಎಂದು ಅವರು ಬರೆದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2014ರ ಮೊದಲು, ‘ಲಿಂಚಿಂಗ್ (ಹತ್ಯೆ)’ ಎಂಬ ಪದವನ್ನು ಪ್ರಾಯೋಗಿಕವಾಗಿ ನಾವು ಯಾರೂ ಕೇಳಿರಲಿಲ್ಲ. ನಿಮ್ಮ ಅವಧಿಯಲ್ಲಿ ಈ ಪದ ಎಲ್ಲರಿಗೂ ಪರಿಚಿತವಾಗಿದೆ. ಧನ್ಯವಾದಗಳು ಮೋದಿಜೀ ಎಂದು ಟ್ವೀಟ್ ಮೂಲಕ ಲೇವಡಿ ಮಾಡಿದ್ದರು. ಆ ಟ್ವೀಟ್​ಗೆ ಪ್ರತಿಕ್ರಿಯೆಯಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ನಡೆದ ಹತ್ಯಾಕಾಂಡಗಳ ಪಟ್ಟಿಯನ್ನು ನೀಡಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಅಮರಿಂದರ್ ಸಿಂಗ್ ದುರಹಂಕಾರಿ ರಾಜ; ಪಂಜಾಬ್ ಲೋಕ ಕಾಂಗ್ರೆಸ್-ಬಿಜೆಪಿ ಮೈತ್ರಿ ಬಗ್ಗೆ ನವಜೋತ್ ಸಿಂಗ್ ಸಿಧು ವಾಗ್ದಾಳಿ

ಗಂಗಾನದಿಯಲ್ಲಿ ಏಕಾಂಗಿಯಾಗಿ ಪವಿತ್ರ ಸ್ನಾನ ಮಾಡುವವರು ಹಿಂದುತ್ವವಾದಿ; ರಾಹುಲ್ ಗಾಂಧಿ ಹೊಸ ವ್ಯಾಖ್ಯಾನ

Published On - 6:40 pm, Tue, 21 December 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ