AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು. ಈ ವಿಚಾರವನ್ನ ಆ ಕೈದಿ ಜೈಲರ್​ […]

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ
KUSHAL V
| Updated By: ಸಾಧು ಶ್ರೀನಾಥ್​|

Updated on:Jul 21, 2020 | 12:14 PM

Share

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು.

ಈ ವಿಚಾರವನ್ನ ಆ ಕೈದಿ ಜೈಲರ್​ ಗಮನಕ್ಕೆ ತಂದಿದ್ದ ಕಾರಣದಿಂದ ಮನನೊಂದ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪುಗಳೇಂದಿ ಮಾಹಿತಿ ನೀಡಿದ್ದಾರೆ.

ನನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಿ ಜೊತೆಗೆ, ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ. ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು ತನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಬೇಕೆಂಬ ಮನವಿ ಮಾಡಿಕೊಂಡಿದ್ದಾರಂತೆ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್​​ ಸೇರಿ ಏಳು ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Published On - 10:44 am, Tue, 21 July 20

ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!