AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು. ಈ ವಿಚಾರವನ್ನ ಆ ಕೈದಿ ಜೈಲರ್​ […]

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ
KUSHAL V
| Edited By: ಸಾಧು ಶ್ರೀನಾಥ್​|

Updated on:Jul 21, 2020 | 12:14 PM

Share

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು.

ಈ ವಿಚಾರವನ್ನ ಆ ಕೈದಿ ಜೈಲರ್​ ಗಮನಕ್ಕೆ ತಂದಿದ್ದ ಕಾರಣದಿಂದ ಮನನೊಂದ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪುಗಳೇಂದಿ ಮಾಹಿತಿ ನೀಡಿದ್ದಾರೆ.

ನನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಿ ಜೊತೆಗೆ, ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ. ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು ತನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಬೇಕೆಂಬ ಮನವಿ ಮಾಡಿಕೊಂಡಿದ್ದಾರಂತೆ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್​​ ಸೇರಿ ಏಳು ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Published On - 10:44 am, Tue, 21 July 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ