AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು. ಈ ವಿಚಾರವನ್ನ ಆ ಕೈದಿ ಜೈಲರ್​ […]

ಕೈದಿ ಜೊತೆ ಜಗಳ? ವೆಲ್ಲೂರು ಜೈಲಿನಲ್ಲಿ ರಾಜೀವ್​ ಗಾಂಧಿ ಹಂತಕಿ ಆತ್ಮಹತ್ಯೆಗೆ ಯತ್ನ
KUSHAL V
| Updated By: ಸಾಧು ಶ್ರೀನಾಥ್​|

Updated on:Jul 21, 2020 | 12:14 PM

Share

ಚೆನ್ನೈ: ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯಾಕಾಂಡದ ಪ್ರಮುಖ ಆರೋಪಿ ನಳಿನಿ ಶ್ರೀಹರನ್​ ವೆಲ್ಲೂರು ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿದ್ದರು. ನಳಿನಿ ಪರ ವಕೀಲೆ ಪುಗಳೇಂದಿ ಹೇಳುವ ಪ್ರಕಾರ ನಳಿನಿ ಹಾಗೂ ಮತ್ತೋರ್ವ ಜೀವಾವಧಿ ಶಿಕ್ಷೆ ಪಡೆದಿರುವ ಮಹಿಳಾ ಕೈದಿ ಮಧ್ಯೆ ಜಗಳ ಶುರುವಾಗಿತ್ತು.

ಈ ವಿಚಾರವನ್ನ ಆ ಕೈದಿ ಜೈಲರ್​ ಗಮನಕ್ಕೆ ತಂದಿದ್ದ ಕಾರಣದಿಂದ ಮನನೊಂದ ನಳಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪುಗಳೇಂದಿ ಮಾಹಿತಿ ನೀಡಿದ್ದಾರೆ.

ನನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಿ ಜೊತೆಗೆ, ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ. ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು ತನ್ನ ಪತ್ನಿಯನ್ನ ಬೇರೆ ಜೈಲಿಗೆ ವರ್ಗಾಯಿಸಬೇಕೆಂಬ ಮನವಿ ಮಾಡಿಕೊಂಡಿದ್ದಾರಂತೆ.

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್​​ ಸೇರಿ ಏಳು ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Published On - 10:44 am, Tue, 21 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!