AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕ್ಸಿಟ್​ ಪೋಲ್​ಗಳು ಚುನಾವಣಾ ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ: ರಾಜೀವ್ ಕುಮಾರ್

ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ನೀಡುವ ಎಕ್ಸಿಟ್ ಪೋಲ್​ಗಳು ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಮೊದಲು ನೀವು ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲಿ ಸಮೀಕ್ಷೆ ನಡೆಸಿದ್ದೀರ, ಎರಡನೆಯದಾಗಿ ಮತ ಎಣಿಕೆ ದಿನ ಚುನಾವಣಾ ಆಯೋಗ ಮಾಹಿತಿ ನೀಡುವ ಮುನ್ನವೇ ಮತ ಎಣಿಕೆ ಆರಂಭವಾಗಿ ಕೇವಲ 20 ನಿಮಿಷಗಳಲ್ಲಿ ಹಿನ್ನೆಡೆ, ಮುನ್ನಡೆ ನೀಡುವುದು ಜತೆಗೆ ಮೊದಲೇ ರೌಂಡ್​ ಮುಕ್ತಾಯದ ಬಗ್ಗೆ ಮಾಹಿತಿ ನೀಡುವುದು ತಪ್ಪು.

ಎಕ್ಸಿಟ್​ ಪೋಲ್​ಗಳು ಚುನಾವಣಾ ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ: ರಾಜೀವ್ ಕುಮಾರ್
ರಾಜೀವ್ ಕುಮಾರ್ Image Credit source: All India Radia
ನಯನಾ ರಾಜೀವ್
|

Updated on: Oct 15, 2024 | 5:08 PM

Share

ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ನೀಡುವ ಎಕ್ಸಿಟ್ ಪೋಲ್​ಗಳು ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಮೊದಲು ನೀವು ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲಿ ಸಮೀಕ್ಷೆ ನಡೆಸಿದ್ದೀರ, ಎರಡನೆಯದಾಗಿ ಮತ ಎಣಿಕೆ ದಿನ ಚುನಾವಣಾ ಆಯೋಗ ಮಾಹಿತಿ ನೀಡುವ ಮುನ್ನವೇ ಮತ ಎಣಿಕೆ ಆರಂಭವಾಗಿ ಕೇವಲ 20 ನಿಮಿಷಗಳಲ್ಲಿ ಹಿನ್ನೆಡೆ, ಮುನ್ನಡೆ ನೀಡುವುದು ಜತೆಗೆ ಮೊದಲೇ ರೌಂಡ್​ ಮುಕ್ತಾಯದ ಬಗ್ಗೆ ಮಾಹಿತಿ ನೀಡುವುದು ತಪ್ಪು.

ಒಂದು ಗಂಟೆಯ ಒಳಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗುವುದಿಲ್ಲ, ನಾವು ಹಾಗಾಗಿಯೇ ಮತ ಎಣಿಕೆ ಆರಂಭವಾಗಿ ಒಂದು ಗಂಟೆಯ ನಂತರ ಅಂದರೆ 9.30ಕ್ಕೆ ಅದಾದ ಬಳಿಕ 11.30 ನಂತರ 1.30ಕ್ಕೆ ವೆಬ್​ಸೈಟ್​ನಲ್ಲಿ ಅಧಿಕೃತ ಮಾಹಿತಿ ನೀಡುತ್ತೇವೆ. ಮಾಹಿತಿ ನೀಡುವ ಮುನ್ನವೂ ಕೂಡ ಹಲವಾರು ಪ್ರೋಸೆಸ್​ಗಳು ಇರಲಿವೆ. ಆದರೆ ಯಾವುದೇ ವೈಜ್ಞಾನಿಕ ಆಧಾರವಿಲ್ಲದೆ ನೀವು ಅದ್ಹೇಗೆ ಮಾಹಿತಿ ನೀಡುತ್ತೀರಿ ಎಂದು ಪ್ರಶ್ನಿಸಿದರು.

ಮೊದಲು ನೀವು ನೀಡಿರುವ ಎಕ್ಸಿಟ್​ ಪೋಲ್​ಗೆ ಈಗಿನ ಫಲಿತಾಂಶವನ್ನು ಮ್ಯಾಚ್​ ಮಾಡಲು ಶುರು ಮಾಡುತ್ತೀರಿ, ಅದಾದ ಬಳಿಕ ನಿಜವಾದ ಟ್ರೆಂಡ್ ನೀಡುತ್ತೀರಿ ಅದು ಮಿಸ್​ಮ್ಯಾಚ್​ ಆಗುತ್ತದೆ ಎಂದರು. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಇದರೊಂದಿಗೆ ಒಟ್ಟು 49 ವಿಧಾನಸಭಾ ಮತ್ತು ಲೋಕಸಭೆ ಸ್ಥಾನಗಳಿಗೆ ಉಪಚುನಾವಣೆಯೂ ಘೋಷಣೆಯಾಗಿದೆ.

ಮತ್ತಷ್ಟು ಓದಿ: Assembly Election 2024: ಮಹಾರಾಷ್ಟ್ರ, ಜಾರ್ಖಂಡ್​ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡುವ ಸಂದರ್ಭದಲ್ಲಿ ಚುನಾವಣಾ ಆಯೋಗ ಮತ್ತೊಂದು ಮಹತ್ವದ ಹೇಳಿಕೆ ನೀಡಿದ್ದು, ಚರ್ಚೆಯಾಗುತ್ತಿದೆ. ವೇಳಾಪಟ್ಟಿಯನ್ನು ನೀಡಿದ ನಂತರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಎಕ್ಸಿಟ್ ಪೋಲ್ ಮತ್ತು ಎಣಿಕೆಯ ದಿನದಂದು ಬೆಳಗ್ಗೆಯಿಂದ ಮಾಧ್ಯಮಗಳಲ್ಲಿ ತೋರಿದ ಪ್ರವೃತ್ತಿಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು.

ಎಕ್ಸಿಟ್‌ಪೋಲ್‌ಗಳು ಒಂದನ್ನು ಹೇಳುತ್ತವೆ ಫಲಿತಾಂಶವು ಅದಕ್ಕಿಂತ ಭಿನ್ನವಾಗಿ ಬರುವುದನ್ನು ಕಂಡಿದ್ದೇವೆ. ಮಾಧ್ಯಮಗಳು ಟ್ರೆಂಡ್‌ಗಳನ್ನು ತೋರಿಸುವುದರಲ್ಲಿ ಆತುರ ತೋರುತ್ತಿವೆ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ.  ಹರ್ಯಾಣ ಚುನಾವಣೆಯ ಫಲಿತಾಂಶದ ನಂತರ, ಇವಿಎಂಗಳ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳಲಾರಂಭಿಸಿದವು. ಇಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಎಕ್ಸಿಟ್ ಪೋಲ್‌ಗಳಲ್ಲಿ ಕಾಂಗ್ರೆಸ್‌ನ ದೊಡ್ಡ ಗೆಲುವಿನ ಮುನ್ಸೂಚನೆ ನೀಡಲಾಗಿತ್ತು.

ಆದರೆ ಚುನಾವಣಾ ಫಲಿತಾಂಶಗಳು ನಿಖರವಾಗಿ ವಿರುದ್ಧವಾಗಿ ಹೊರಹೊಮ್ಮಿದವು ಮತ್ತು ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಇಲ್ಲಿ ಬಳಸಲಾದ ಇವಿಎಂ ಬ್ಯಾಟರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿತ್ತು. ಮಂಗಳವಾರ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಯ ದಿನಾಂಕಗಳನ್ನು ಘೋಷಿಸುವುದರ ಜೊತೆಗೆ, ಚುನಾವಣಾ ಆಯೋಗವು ಈ ಪ್ರಶ್ನೆಗಳಿಗೆ ಉತ್ತರವನ್ನೂ ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ