AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chief Election Commissioner: ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ರಾಜೀವ್ ಕುಮಾರ್

Chief Election Commissioner:ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ಮೇ 14 ರಂದು ಸುಶೀಲ್ ಚಂದ್ರ ಅವರು ಅಧಿಕಾರದಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು.

Chief Election Commissioner: ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ರಾಜೀವ್ ಕುಮಾರ್
Rajiv Kumar
TV9 Web
| Edited By: |

Updated on:May 15, 2022 | 4:24 PM

Share

ನವದೆಹಲಿ: ದೇಶದ 25ನೇ ಮುಖ್ಯ ಚುನಾವಣಾ ಆಯುಕ್ತ(Chief Election Commissioner)ರಾಗಿರಾಜೀವ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಮೇ 14 ರಂದು ಸುಶೀಲ್ ಚಂದ್ರ ಅವರು ಅಧಿಕಾರದಿಂದ ನಿರ್ಗಮಿಸಿದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಮೇ 15 ರಿಂದ ಅನ್ವಯವಾಗುವಂತೆ ರಾಜೀವ್ ಕುಮಾರ್ ಅವರನ್ನು ದೇಶದ ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿರುವುದಾಗಿ ನೋಟಿಫಿಕೇಷನ್​ನಲ್ಲಿ ತಿಳಿಸಲಾಗಿತ್ತು.

1984ರ ಬ್ಯಾಚ್​ನ ಬಿಹಾರ್/ ಜಾರ್ಖಂಡ್ ಕೇಡರ್ ನ ಐಐಎಸ್ ಅಧಿಕಾರಿಯಾಗಿರುವ ರಾಜೀವ್ ಕುಮಾರ್, ಸಾರ್ವಜನಿಕ ಉದ್ಯಮ ಆಯ್ಕೆ ಮಂಡಳಿ ಮುಖ್ಯಸ್ಥ ಸೇರಿದಂತೆ ಹಲವು ಪ್ರಮುಖ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಫೆಬ್ರವರಿ 2025ರವರೆಗೂ ಕುಮಾರ್ ಅವರ ಅಧಿಕಾರಾವಧಿ ಇರುವ ಸಾಧ್ಯತೆಯಿದೆ. 2024ರ ಲೋಕಸಭಾ ಚುನಾವಣೆ, ರಾಷ್ಟ್ರಪತಿ ಚುನಾವಣೆ, ಉಪ ರಾಷ್ಟ್ರಪತಿ ಚುನಾವಣೆ ಸೇರಿದಂತೆ ಅನೇಕ ರಾಜ್ಯಗಳ ವಿಧಾನಸಭಾ ಚುನಾವಣೆಯ ಮೇಲ್ವಿಚಾರಣೆ ಮಾಡಲಿದ್ದಾರೆ.

ಸಾರ್ವಜನಿಕ ಉದ್ಯಮಗಳ ಮಂಡಳಿ, ಜಾರ್ಖಂಡ್‌ ಆಡಳಿತಾತ್ಮಕ ಸೇವೆ, ಕೇಂದ್ರ ಹಣಕಾಸು ಸಚಿವಾಲಯದ ಪ್ರಮುಖ ಹುದ್ದೆಗಳಲ್ಲಿಕೆಲಸ ಮಾಡಿದ್ದಾರೆ. ಸಾರ್ವಜನಿಕ ಉದ್ಯಮಗಳ ಆಯ್ಕೆ ಸಮಿತಿ(ಪಿಇಎಸ್‌ಬಿ) ಯ ಅಧ್ಯಕ್ಷರಾಗಿಯೂ ಗಮನ ಸೇವೆ ಸಲ್ಲಿಸಿದ್ದಾರೆ.

ನೂತನ ಮುಖ್ಯ ಚುನಾವಣಾ ಆಯುಕ್ತರ ಮುಂದೆ ಸಾಲು ಸಾಲು ಚುನಾವಣೆಗಳನ್ನು ನಡೆಸುವ ಸವಾಲು ಇದೆ. ಈ ವರ್ಷಾಂತ್ಯ ಹಾಗೂ ಮುಂಬರುವ ವರ್ಷಗಳಲ್ಲಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ, ಜೂನ್‌ನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಗಳನ್ನು ನಡೆಸುವ ಅವರ ಮುಂದಿದೆ.

ಇದೇ ವರ್ಷದ ಅಂತ್ಯದಲ್ಲಿ ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆಯ ಚುನಾವಣೆ ಇದ್ದು, 2023ರಲ್ಲಿ  ಛತ್ತೀಸ್‌ಘಡ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ, ನಾಗಾಲ್ಯಾಂಡ್‌, ಮೇಘಾಲಯ, ತ್ರಿಪುರ, ಕರ್ನಾಟಕ,  ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಇನ್ನು, 2024ರ ಲೋಕಸಭಾ ಚುನಾವಣೆಯ ನಂತರ ಸಿಕ್ಕಿಂ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ, ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ, ದಿಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅವುಗಳೆಲ್ಲವನ್ನೂ ನಿರ್ವಹಿಸುವ ಸವಾಲು ನೂತನ ಚುನಾವಣಾ ಆಯುಕ್ತರಿಗೆ ಇದೆ.

ಹೆಚ್ಚಿನ ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Sun, 15 May 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?