AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕೋಟ್ ಅಗ್ನಿ ದುರಂತದಲ್ಲಿ​ ಗೇಮ್​ ಝೋನ್​ ಮಾಲೀಕ ಕೂಡ ಸಾವು, ತಾಯಿಯ ಡಿಎನ್​ಎ ಜತೆ ಮ್ಯಾಚ್​

ರಾಜ್​ಕೋಟ್​ನ ಟಿಆರ್​ಪಿ ಗೇಮ್​ ಝೋನ್​ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 28 ಮಂದಿ ಸುಟ್ಟು ಕರಕಲಾದರು. ಈ ದುರಂತದಲ್ಲಿ ಗೇಮ್​ ಝೋನ್ ಮಾಲೀಕ ಪ್ರಕಾಶ್​ ಕೂಡ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೃತರ ದೇಹಗಳು ಗುರುತು ಸಿಗದಷ್ಟು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು, ಇದೀಗ ಪ್ರಕಾಶ್​ ಅವರ ತಾಯಿಯ ಡಿಎನ್​ಎ ಜತೆಗೆ ಶವದ ಡಿಎನ್​ಎ ಮ್ಯಾಚ್​ ಆಗಿದ್ದು, ಆ ಮೃತದೇಹ ಮಾಲೀಕ ಪ್ರಕಾಶ್​ರದ್ದೇ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್​ಕೋಟ್ ಅಗ್ನಿ ದುರಂತದಲ್ಲಿ​ ಗೇಮ್​ ಝೋನ್​ ಮಾಲೀಕ ಕೂಡ ಸಾವು, ತಾಯಿಯ ಡಿಎನ್​ಎ ಜತೆ ಮ್ಯಾಚ್​
ರಾಜ್​ಕೋಟ್​
ನಯನಾ ರಾಜೀವ್
|

Updated on: May 29, 2024 | 8:49 AM

Share

ರಾಜ್​ಕೋಟ್​ ಟಿಆರ್​ಪಿ ಗೇಮ್​ ಝೋನ್​ನ ಮಾಲೀಕ ಪ್ರಕಾಶ್​ ಹಿರಾನ್​ ಕೂಡ ಅಗ್ನಿ ದುರಂತ(Fire Accident)ದಲ್ಲಿ ಸಾವನ್ನಪ್ಪಿದ್ದಾರೆ. ಆಟದ ವಲಯದಲ್ಲಿ ಪತ್ತೆಯಾದ ಅವಶೇಷಗಳಿಂದ ತೆಗೆದ ಡಿಎನ್ಎ ಮಾದರಿಯು ಪ್ರಕಾಶ್​ ಅವರ ತಾಯಿಯ ಡಿಎನ್​ಎ ಜತೆ ಹೊಂದಿಕೆಯಾಗಿದೆ.

ಪ್ರಕಾಶ್​ ಹಿರನ್ ಅವರು ಬೆಂಕಿ ಹೊತ್ತಿಕೊಂಡ ಸಂದರ್ಭದಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದಾರೆ. ಪ್ರಕಾಶ್ ಸಹೋದರ ಜಿತೇಂದ್ರ ಪೊಲೀಸರಿಗೆ ಮನವಿ ಮಾಡಿದ್ದರು. ಬೆಂಕಿ ಅವಘಡದ ನಂತರ ಪ್ರಕಾಶ್​ ಹಾಗೂ ತಮ್ಮ ಕುಟುಂಬಕ್ಕೆ ಯಾವುದೇ ಸಂಪರ್ಕವಿರಲಿಲ್ಲ, ಎಲ್ಲಾ ಫೋನ್​ ಸ್ವಿಚ್ಡ್​ ಆಫ್​ ಬರುತ್ತಿದೆ, ಘಟನೆ ನಡೆದ ಸ್ಥಳದಲ್ಲಿ ಪ್ರಕಾಶ್​ ಅವರ ಕಾರು ಕೂಡ ಇದೆ ಎಂದು ಹೇಳಿದ್ದರು.

ಪ್ರಕಾಶ್ ಸಹೋದರನ ಮನವಿ ಮೇರೆಗೆ ಕುಟುಂಬದಿಂದ ಡಿಎನ್​ಎ ಮಾದರಿಯನ್ನು ತೆಗೆದುಕೊಳ್ಳಲಾಗಿತ್ತು. ಮೃತದೇಹ ಪ್ರಕಾಶ್​ ಅವರದ್ದೇ ಎಂದು ಡಿಎನ್​ಎ ಪರೀಕ್ಷೆ ಮೂಲಕ ತಿಳಿದುಬಂದಿದೆ.

ಮತ್ತಷ್ಟು ಓದಿ: ರಾಜ್​ಕೋಟ್​ ಗೇಮ್​ ಝೋನ್​ಗೆ​ ಬೆಂಕಿ ಹೊತ್ತಿಕೊಂಡಿದ್ದು ಹೇಗೆ? ವಿಡಿಯೋ ನೋಡಿ

ಕಳೆದ ಶನಿವಾರ ರಾಜ್​ಕೋಟ್​ನ ಟಿಆರ್​ಪಿ ಗೇಮ್​ ಝೋನ್​ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮೃತಪಟ್ಟವರಲ್ಲಿ 12 ಮಕ್ಕಳೂ ಸೇರಿದ್ದಾರೆ. ಮೃತದೇಹಗಳೆಲ್ಲಾ ಸುಟ್ಟು ಕರಕಲಾಗಿದ್ದು, ಗುರುತು ಪತ್ತೆ ಹೆಚ್ಚುವುದು ಕೂಡ ಕಷ್ಟಕರವಾಗಿತ್ತು. ಹೀಗಿರುವಾಗ ಗೇಮ್ ಝೋನ್ ಮಾಲೀಕರೊಬ್ಬರು ಸುಟ್ಟು ಕರಕಲಾಗಿದ್ದಾರೆ.

ಕೇಂದ್ರ ಸಚಿವ ಮತ್ತು ಬಿಜೆಪಿ ರಾಜ್‌ಕೋಟ್ ಲೋಕಸಭಾ ಅಭ್ಯರ್ಥಿ ಪರಶೋತ್ತಮ್ ರೂಪಾಲಾ ಅವರು ಮಂಗಳವಾರ ಮಧ್ಯಾಹ್ನ ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ರಾಜ್ಯಸಭಾ ಸಂಸದ ರಂಭಾಯ್ ಮೊಕರಿಯಾ ಅವರೊಂದಿಗೆ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು