AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೀಡಿಯಾಕ್ಕೆ ಬೈಟ್​ ಕೊಡುತ್ತಿದ್ದ ಟಿಎಂಸಿ ಸಂಸದನಿಗೆ ಹಿಂದಿನಿಂದ ಬಂದ ರಾಜನಾಥ್​ ಸಿಂಗ್​ ಮಾಡಿದ್ದೇನು? ಇದು ಸ್ಪೆಶಲ್​ ವಿಡಿಯೋ !

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಅದಕ್ಕೂ ಮೊದಲು ಕಾಂಗ್ರೆಸ್ ಪ್ರತಿಪಕ್ಷಗಳ ಸಭೆ ಕರೆದಿತ್ತು. ಆದರೆ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದ ಪ್ರತಿಪಕ್ಷಗಳ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಾಲ್ಗೊಳ್ಳುವುದಿಲ್ಲ ಎಂದು ಸುದೀಪ್​ ಬಂಡೋಪಾಧ್ಯಾಯ ಹೇಳಿದ್ದರು.

Video: ಮೀಡಿಯಾಕ್ಕೆ ಬೈಟ್​ ಕೊಡುತ್ತಿದ್ದ ಟಿಎಂಸಿ ಸಂಸದನಿಗೆ ಹಿಂದಿನಿಂದ ಬಂದ ರಾಜನಾಥ್​ ಸಿಂಗ್​ ಮಾಡಿದ್ದೇನು? ಇದು ಸ್ಪೆಶಲ್​ ವಿಡಿಯೋ !
ಸುದೀಪ್​ ಬಂಡೋಪಾಧ್ಯಾಯ ಮತ್ತು ರಾಜನಾಥ್​ ಸಿಂಗ್​
TV9 Web
| Updated By: Lakshmi Hegde|

Updated on:Nov 29, 2021 | 7:29 PM

Share

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಮತ್ತು ತೃಣಮೂಲ ಕಾಂಗ್ರೆಸ್​ ಸಂಸದ ಸುದೀಪ್​ ಬಂಡೋಪಾಧ್ಯಾಯ ಅವರ ಒಂದು ವಿಶೇಷ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗ್ತಿದೆ. ಇಬ್ಬರೂ ರಾಜಕಾರಣಿಗಳು ಒಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ..ಮತ್ತು ಮನಸುಪೂರ್ತಿಯಾಗಿ ನಕ್ಕಿದ್ದಾರೆ.  ಆಗಿದ್ದಿಷ್ಟೇ, ಇಂದು ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾಗಿತ್ತು. ಅದು ಮುಗಿಯುತ್ತಿದ್ದಂತೆ ಹೊರಗೆ ಸುದೀಪ್ ಬಂಡೋಪಾಧ್ಯಾಯ ಮಾಧ್ಯಮದವರೊಟ್ಟಿಗೆ, ಪೆಟ್ರೋಲ್​ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿದ್ದರು. ಅಷ್ಟರಲ್ಲಿ ಹಿಂದಿನಿಂದ ತಮ್ಮ ಸಿಬ್ಬಂದಿಯೊಂದಿಗೆ ಬಂದ ರಾಜನಾಥ್​ ಸಿಂಗ್​, ಸುದೀಪ್​ ಬಂಡೋಪಾಧ್ಯಾಯ ಅವರ ಎರಡೂ ಭುಜಗಳನ್ನು ಹಿಡಿದಿದ್ದಾರೆ. ಸುದೀಪ್ ಹಿಂದಿರುಗಿ ನೋಡಿ ನಕ್ಕಿದ್ದಾರೆ. ನಂತರ ರಾಜನಾಥ್​ ಸಿಂಗ್​, ನೀವು ಮುಂದುವರಿಸಿ ಎನ್ನುತ್ತ ಅಲ್ಲಿಂದ ಹೋಗಿದ್ದನ್ನು ವಿಡಿಯೋದಲ್ಲ ನೋಡಬಹುದು. 

ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ. ಎರಡು ಬೇರೆಬೇರೆ ಪಕ್ಷಗಳ ನಾಯಕರ ಮಧ್ಯೆ ಎಷ್ಟೇ ಸ್ನೇಹವಿದ್ದರೂ ಅದನ್ನು ಬಹಿರಂಗವಾಗಿ ತೋರಿಸುವುದು ವಿರಳ. ಅದರಲ್ಲೂ ಬಿಜೆಪಿ-ಟಿಎಂಸಿ ಬದ್ಧ ವೈರಿಗಳಂತೆ ಇರುತ್ತವೆ. ಅಂಥದ್ದರಲ್ಲಿ ಇಬ್ಬರು ಹಿರಿಯ ನಾಯಕರ ಈ ಸಣ್ಣ ಕೀಟಲೆಯ ವಿಡಿಯೋ ಸಖತ್​ ಸದ್ದು ಮಾಡುತ್ತಿದೆ.

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಅದಕ್ಕೂ ಮೊದಲು ಕಾಂಗ್ರೆಸ್ ಪ್ರತಿಪಕ್ಷಗಳ ಸಭೆ ಕರೆದಿತ್ತು. ಆದರೆ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಾಲ್ಗೊಳ್ಳುವುದಿಲ್ಲ ಎಂದು ಸುದೀಪ್​ ಬಂಡೋಪಾಧ್ಯಾಯ ತಿಳಿಸಿದ್ದರು.

ಇದನ್ನೂ ಓದಿ: ರಸ್ತೆಮೇಲೆಯೇ ಮೊಬೈಲ್​ ಬೀಳಿಸಿಕೊಂಡ ಕತ್ರಿನಾ ತಾಯಿ; ನಿಮ್ಮ ವಾಟ್ಸಾಪ್​ ಚೆಕ್​ ಮಾಡುತ್ತೇವೆ ಎಂದ ಫ್ಯಾನ್ಸ್​

Published On - 7:29 pm, Mon, 29 November 21

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?