AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೀಡಿಯಾಕ್ಕೆ ಬೈಟ್​ ಕೊಡುತ್ತಿದ್ದ ಟಿಎಂಸಿ ಸಂಸದನಿಗೆ ಹಿಂದಿನಿಂದ ಬಂದ ರಾಜನಾಥ್​ ಸಿಂಗ್​ ಮಾಡಿದ್ದೇನು? ಇದು ಸ್ಪೆಶಲ್​ ವಿಡಿಯೋ !

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಅದಕ್ಕೂ ಮೊದಲು ಕಾಂಗ್ರೆಸ್ ಪ್ರತಿಪಕ್ಷಗಳ ಸಭೆ ಕರೆದಿತ್ತು. ಆದರೆ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದ ಪ್ರತಿಪಕ್ಷಗಳ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಾಲ್ಗೊಳ್ಳುವುದಿಲ್ಲ ಎಂದು ಸುದೀಪ್​ ಬಂಡೋಪಾಧ್ಯಾಯ ಹೇಳಿದ್ದರು.

Video: ಮೀಡಿಯಾಕ್ಕೆ ಬೈಟ್​ ಕೊಡುತ್ತಿದ್ದ ಟಿಎಂಸಿ ಸಂಸದನಿಗೆ ಹಿಂದಿನಿಂದ ಬಂದ ರಾಜನಾಥ್​ ಸಿಂಗ್​ ಮಾಡಿದ್ದೇನು? ಇದು ಸ್ಪೆಶಲ್​ ವಿಡಿಯೋ !
ಸುದೀಪ್​ ಬಂಡೋಪಾಧ್ಯಾಯ ಮತ್ತು ರಾಜನಾಥ್​ ಸಿಂಗ್​
TV9 Web
| Updated By: Lakshmi Hegde|

Updated on:Nov 29, 2021 | 7:29 PM

Share

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಮತ್ತು ತೃಣಮೂಲ ಕಾಂಗ್ರೆಸ್​ ಸಂಸದ ಸುದೀಪ್​ ಬಂಡೋಪಾಧ್ಯಾಯ ಅವರ ಒಂದು ವಿಶೇಷ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗ್ತಿದೆ. ಇಬ್ಬರೂ ರಾಜಕಾರಣಿಗಳು ಒಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ..ಮತ್ತು ಮನಸುಪೂರ್ತಿಯಾಗಿ ನಕ್ಕಿದ್ದಾರೆ.  ಆಗಿದ್ದಿಷ್ಟೇ, ಇಂದು ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾಗಿತ್ತು. ಅದು ಮುಗಿಯುತ್ತಿದ್ದಂತೆ ಹೊರಗೆ ಸುದೀಪ್ ಬಂಡೋಪಾಧ್ಯಾಯ ಮಾಧ್ಯಮದವರೊಟ್ಟಿಗೆ, ಪೆಟ್ರೋಲ್​ ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿದ್ದರು. ಅಷ್ಟರಲ್ಲಿ ಹಿಂದಿನಿಂದ ತಮ್ಮ ಸಿಬ್ಬಂದಿಯೊಂದಿಗೆ ಬಂದ ರಾಜನಾಥ್​ ಸಿಂಗ್​, ಸುದೀಪ್​ ಬಂಡೋಪಾಧ್ಯಾಯ ಅವರ ಎರಡೂ ಭುಜಗಳನ್ನು ಹಿಡಿದಿದ್ದಾರೆ. ಸುದೀಪ್ ಹಿಂದಿರುಗಿ ನೋಡಿ ನಕ್ಕಿದ್ದಾರೆ. ನಂತರ ರಾಜನಾಥ್​ ಸಿಂಗ್​, ನೀವು ಮುಂದುವರಿಸಿ ಎನ್ನುತ್ತ ಅಲ್ಲಿಂದ ಹೋಗಿದ್ದನ್ನು ವಿಡಿಯೋದಲ್ಲ ನೋಡಬಹುದು. 

ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ. ಎರಡು ಬೇರೆಬೇರೆ ಪಕ್ಷಗಳ ನಾಯಕರ ಮಧ್ಯೆ ಎಷ್ಟೇ ಸ್ನೇಹವಿದ್ದರೂ ಅದನ್ನು ಬಹಿರಂಗವಾಗಿ ತೋರಿಸುವುದು ವಿರಳ. ಅದರಲ್ಲೂ ಬಿಜೆಪಿ-ಟಿಎಂಸಿ ಬದ್ಧ ವೈರಿಗಳಂತೆ ಇರುತ್ತವೆ. ಅಂಥದ್ದರಲ್ಲಿ ಇಬ್ಬರು ಹಿರಿಯ ನಾಯಕರ ಈ ಸಣ್ಣ ಕೀಟಲೆಯ ವಿಡಿಯೋ ಸಖತ್​ ಸದ್ದು ಮಾಡುತ್ತಿದೆ.

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಅದಕ್ಕೂ ಮೊದಲು ಕಾಂಗ್ರೆಸ್ ಪ್ರತಿಪಕ್ಷಗಳ ಸಭೆ ಕರೆದಿತ್ತು. ಆದರೆ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆದಿರುವ ಪ್ರತಿಪಕ್ಷಗಳ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಾಲ್ಗೊಳ್ಳುವುದಿಲ್ಲ ಎಂದು ಸುದೀಪ್​ ಬಂಡೋಪಾಧ್ಯಾಯ ತಿಳಿಸಿದ್ದರು.

ಇದನ್ನೂ ಓದಿ: ರಸ್ತೆಮೇಲೆಯೇ ಮೊಬೈಲ್​ ಬೀಳಿಸಿಕೊಂಡ ಕತ್ರಿನಾ ತಾಯಿ; ನಿಮ್ಮ ವಾಟ್ಸಾಪ್​ ಚೆಕ್​ ಮಾಡುತ್ತೇವೆ ಎಂದ ಫ್ಯಾನ್ಸ್​

Published On - 7:29 pm, Mon, 29 November 21

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ