AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajouri Terror Attack: ರಜೌರಿಯಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಜಮ್ಮು ಕಾಶ್ಮೀರದ ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ.

Rajouri Terror Attack: ರಜೌರಿಯಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ
ಸೇನಾ ಕಾರ್ಯಾಚರಣೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jan 02, 2023 | 9:23 AM

Share

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಭಯೋತ್ಪಾದಕ ದಾಳಿಯಲ್ಲಿ (Terrorist Attack) ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಮಾಡಿದ ಇಬ್ಬರು ಉಗ್ರರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು (Security Forces) ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ವರದಿ ಮಾಡಿದ್ದಾರೆ. ಇಬ್ಬರು ಗಾಯಾಳುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿಗೆ ವಿಮಾನದಲ್ಲಿ ರವಾನಿಸಲಾಯಿತು.

ಇದನ್ನೂ ಓದಿ: Jammu Encounter: ಜಮ್ಮು ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಎನ್​ಕೌಂಟರ್; ಮೂವರು ಉಗ್ರರ ಹತ್ಯೆ

ಮಾಹಿತಿಯ ಪ್ರಕಾರ, ಇಬ್ಬರು ಭಯೋತ್ಪಾದಕರು ಅಪ್ಪರ್ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಉಗ್ರರಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಸೇನಾ ಪಡೆಗಳು ಆ ಪ್ರದೇಶವನ್ನು ಸುತ್ತುವರಿದಿವೆ. ಶೀಘ್ರದಲ್ಲೇ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಹೇಳಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ ಇತರ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ “ತುಂಬಾ ಗಂಭೀರವಾಗಿದೆ” ಎಂದು ರಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ. ನಿನ್ನೆ ಸಂಜೆ ಡ್ಯಾಂಗ್ರಿ ಗ್ರಾಮದಲ್ಲಿ ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರು 3 ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ರಜೌರಿಯ ರಾಮ ಮಂದಿರ ಬಳಿ ಶಂಕಿತ ಉಗ್ರರ ದಾಳಿ; 2 ಸಾವು, 4 ಮಂದಿಗೆ ಗಾಯ

ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್, ಪ್ರೀತಮ್ ಲಾಲ್ ಮತ್ತು ಶಿವಪಾಲ್ ಎಂದು ಗುರುತಿಸಲಾಗಿದೆ. ಡಿಸೆಂಬರ್ 16ರಂದು ಸೇನಾ ಶಿಬಿರದ ಹೊರಗೆ ಇಬ್ಬರು ಸಾವನ್ನಪ್ಪಿದ ನಂತರ ಕಳೆದ 2 ವಾರಗಳಲ್ಲಿ ರಜೌರಿ ಜಿಲ್ಲೆಯಲ್ಲಿ ನಡೆದ ನಾಗರಿಕ ಹತ್ಯೆಗಳ ಎರಡನೇ ಘಟನೆ ಇದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 am, Mon, 2 January 23

Follow Us
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಉದ್ಧವ್ ಠಾಕ್ರೆ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಸುವರ್ಣಸೌಧದಲ್ಲಿ ಯೋಗ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ