AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನಾ ನಿಗ್ರಹ ತರಬೇತಿ ಪಡೆಯಲು ರಷ್ಯಾಕ್ಕೆ ತೆರಳಿದ ರಜಪೂತಾನ ರೈಫಲ್ಸ್ ಬೆಟಾಲಿಯನ್‌

ರಜಪೂತಾನ ರೈಫಲ್ಸ್ ಬೆಟಾಲಿಯನ್‌ನ 32 ಸಿಬ್ಬಂದಿಯನ್ನು ಒಳಗೊಂಡ ಭಾರತೀಯ ಸೇನಾ ತುಕಡಿಯು ಸೆಪ್ಟೆಂಬರ್ 25 ರಿಂದ 30 ರವರೆಗೆ ರಷ್ಯಾದಲ್ಲಿ ನಡೆಯಲಿರುವ ಭಯೋತ್ಪಾದನಾ ನಿಗ್ರಹ ತರಬೇತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಇಂದು (ಸೆ.23) ತಿಳಿಸಿದೆ.

ಭಯೋತ್ಪಾದನಾ ನಿಗ್ರಹ ತರಬೇತಿ ಪಡೆಯಲು ರಷ್ಯಾಕ್ಕೆ ತೆರಳಿದ ರಜಪೂತಾನ ರೈಫಲ್ಸ್ ಬೆಟಾಲಿಯನ್‌
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 23, 2023 | 5:50 PM

Share

ದೆಹಲಿ, ಸೆ.23: ರಜಪೂತಾನ ರೈಫಲ್ಸ್ ಬೆಟಾಲಿಯನ್‌(Rajputana Rifles Battalion) 32 ಸಿಬ್ಬಂದಿಯನ್ನು ಒಳಗೊಂಡ ಭಾರತೀಯ ಸೇನಾ ತುಕಡಿಯು ಸೆಪ್ಟೆಂಬರ್ 25 ರಿಂದ 30 ರವರೆಗೆ ರಷ್ಯಾದಲ್ಲಿ ನಡೆಯಲಿರುವ ಭಯೋತ್ಪಾದನಾ ನಿಗ್ರಹ ತರಬೇತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಇಂದು (ಸೆ.23) ತಿಳಿಸಿದೆ. ರಷ್ಯಾ ಆಯೋಜಿಸುತ್ತಿರುವ ಬಹುರಾಷ್ಟ್ರೀಯ ಜಂಟಿ ಮಿಲಿಟರಿ ಸಮರಾಭ್ಯಾಸವನ್ನು ಏಷ್ಯಾನ್​​​ ರಕ್ಷಣಾ ಮಂತ್ರಿಗಳ ಸಭೆಯ ಜೊತೆಗೆ ನಡೆಸಲಾಗುವುದು. ಇದರಲ್ಲಿ ಭಯೋತ್ಪಾದನೆ ನಿಗ್ರಹದ ಕುರಿತಾದ ತಜ್ಞರ ಸಲಹೆ ಮತ್ತು ತರಬೇತಿಯನ್ನು ನೀಡಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಷ್ಯಾ EWG ವಹಿಸಿಕೊಂಡಿದೆ.

2017 ರಿಂದ, ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ASEAN) ಮತ್ತು ಇತರ ದೇಶಗಳ ನಡುವೆ ಸಂವಾದ ಮತ್ತು ಸಹಾಕಾರವನ್ನು ಗಟ್ಟಿಗೊಳಿಸುವ ಸಲುವಾಗಿ ಈ ಕಾರ್ಯಕ್ರವವನ್ನು ಮಾಡಲಾಗುತ್ತದೆ. ಈ ಸಮರ ಅಭ್ಯಾಸವು ದೇಶಗಳ ಗಡಿ ಭಾಗಗಳ ಸುರಕ್ಷತೆ ಮತ್ತು ಭಯೋತ್ಪಾದಕ ಗುಂಪುಗಳನ್ನು ನಾಶಪಡಿಸುವ ತಂತ್ರಗಳು ಈ ತರಬೇತಿಯಲ್ಲಿ ಇರುತ್ತದೆ.

ಇದನ್ನೂ ಓದಿ: ಶತ್ರು ರಾಷ್ಟ್ರಗಳ ಡ್ರೋನ್‌ ಹೊಡೆದುರುಳಿಸಲು ‘ಅರ್ಜುನ್’ಗೆ ತರಬೇತಿ

ಇನ್ನು ಈ ಅಭ್ಯಾಸದಲ್ಲಿ ಭಯೋತ್ಪಾದನೆ ನಿಗ್ರಹ ಕ್ಷೇತ್ರದಲ್ಲಿ ಪ್ರಾದೇಶಿಕ ಸಹಕಾರವನ್ನು ಬಲಪಡಿಸುವುದು ಮತ್ತು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸದಸ್ಯ ರಾಷ್ಟ್ರಗಳ ಸೈನ್ಯವನ್ನು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಹೆಚ್ಚು ಪರಿಣಿತಿಯನ್ನು ಹೊಂದಲು ಮತ್ತು ಉತ್ತಮ ತರಬೇತಿಯನ್ನು ನೀಡಲು ಈ ಕಾರ್ಯಯೋಜನೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಭಾರತೀಯ ಸೇನೆಗಳು ಅಭ್ಯಾಸದಲ್ಲಿ ಒಳ್ಳೆಯ ತರಬೇತಿಯನ್ನು ಪಡೆಯಲಿದೆ ಎಂದು ಸೇನೆ ಹೇಳಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!