AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ರಾಜ್ಯಸಭಾ ಅಧಿವೇಶನ 1 ಗಂಟೆಗೆ ಮುಂದೂಡಿಕೆ

Rajya Sabha Parliament Budget Session: ಇಂಧನ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ರಾಜ್ಯಸಭಾ ಅಧಿವೇಶನ 1 ಗಂಟೆಗೆ ಮುಂದೂಡಿಕೆ
ರಾಜ್ಯಸಭಾ ಅಧಿವೇಷನ
Follow us
TV9 Web
| Updated By: ganapathi bhat

Updated on:Apr 06, 2022 | 7:22 PM

ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುತ್ತಿದೆ. ಪೆಟ್ರೋಲ್ ಲೀಟರ್​ಗೆ ನೂರು ರೂಪಾಯಿಯಷ್ಟಾಗಿದೆ. ಡೀಸೆಲ್ 80 ರೂಪಾಯಿ ತಲುಪಿದೆ. ಅಡುಗೆ ಅನಿಲ (ಗ್ಯಾಸ್ ಸಿಲಿಂಡರ್) ಬೆಲೆ ಕೂಡ ಹೆಚ್ಚಳವಾಗಿದೆ. ಸುಮಾರು 21 ಲಕ್ಷ ಕೋಟಿ ರೂಪಾಯಿಗಳಷ್ಟು ಹಣ ಅಬಕಾರಿ ಸುಂಕ ಮತ್ತು ತೆರಿಗೆ ಹಾಕಿ ಸಂಗ್ರಹಿಸಲಾಗಿದೆ. ಈ ಎಲ್ಲಾ ಕಾರಣದಿಂದ ದೇಶ ಹಾಗೂ ದೇಶದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಬಜೆಟ್ ಅಧಿವೇಶನದ ಎರಡನೇ ಹಂತ ಇಂದು (ಮಾರ್ಚ್ 8) ಆರಂಭವಾಗಿದೆ. ಅಧಿವೇಶನದ ಆರಂಭದಲ್ಲೇ ಕೈ ನಾಯಕರು ಬೆಲೆ ಏರಿಕೆ ವಿರುದ್ಧ ಸಿಡಿದು ನಿಂತಿದ್ದಾರೆ.

ಇಂಧನ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ವಿರೋಧ ಪಕ್ಷದ ನಾಯಕರು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯಸಭಾ ಅಧಿವೇಶನದ ಮೊದಲಾರ್ಧದಲ್ಲೇ ಸದನದಲ್ಲಿ ಗದ್ದಲ ಏರ್ಪಟ್ಟಿದೆ. ಹಾಗಾಗಿ, ರಾಜ್ಯಸಭಾ ಅಧಿವೇಶನವನ್ನು ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಲಾಗಿದೆ.

ಬೆಳಗ್ಗೆ ಅಧಿವೇಶನ ಆರಂಭವಾದಾಗಲೇ ಸದನದಲ್ಲಿ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ ಶುರುವಾಗಿತ್ತು. ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ವಿರುದ್ಧ ಸದಸ್ಯರು ದನಿ ಎತ್ತಿದ್ದರು. ಆಡಳಿತ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಿದ್ದರು. ಹಾಗಾಗಿ, ಮೊದಲು ಅಧಿವೇಶನವನ್ನು 11 ಗಂಟೆಯವರೆಗೆ ಮುಂದೂಡಲಾಗಿತ್ತು. ಮತ್ತೆ ಗದ್ದಲ, ಪ್ರತಿಭಟನೆ ಕಂಡುಬಂದ ಕಾರಣ ಸದನವನ್ನು ಮತ್ತೆ ಎರಡನೇ ಬಾರಿಗೆ ಮಧ್ಯಾಹ್ನ 1 ಗಂಟೆಯವರೆಗೆ ಮುಂದೂಡಲಾಯಿತು.

ಕೈ ಪಾಳಯದ ನಾಯಕರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಇಂಧನ ದರ ಏರಿಕೆ ಬಗ್ಗೆ ಚರ್ಚೆಯಾಗಬೇಕು ಎಂದು ಒತ್ತಾಯಿಸಿದರು. ಆದರೆ, ರಾಜ್ಯಸಭಾ ಅಧಿವೇಶನದ ಮೊದಲ ದಿನವೇ ಕಠಿಣ ಕ್ರಮ ಕೈಗೊಳ್ಳಲು ನಾನು ಬಯಸುವುದಿಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ತಿಳಿಸಿದರು.

ರಾಜ್ಯಸಭಾ ವಿರೋಧ ಪಕ್ಷದ ನಾಯಕನಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅಭಿನಂದಿಸಿದರು. ಖರ್ಗೆ ಬಹುದೀರ್ಘ ಅನುಭವವುಳ್ಳ ನಾಯಕ ಎಂದು ತಿಳಿಸಿದರು.

ಇದನ್ನೂ ಓದಿ: Petrol Diesel Price | ವಾಹನ ಸವಾರರಿಗೆ ಕೊಂಚ ರಿಲೀಫ್, ದೇಶದಲ್ಲಿ ಹೀಗಿದೆ ಪೆಟ್ರೋಲ್​, ಡೀಸೆಲ್​ ದರ!

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಮಮತಾ ಬ್ಯಾನರ್ಜಿ ಪಾದಯಾತ್ರೆ; ಮೋದಿ ವಿರುದ್ಧ ವಾಗ್ದಾಳಿ

Published On - 11:53 am, Mon, 8 March 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ