AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Poll: ಕೈ ಹಿಡಿಯದ ಅದೃಷ್ಟ; ಹಿಮಾಚಲದಲ್ಲಿ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು

ಹಿಮಾಚಲ ಪ್ರದೇಶದಲ್ಲಿಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಒಟ್ಟು 68 ಮತಗಳ ಪೈಕಿ 34 ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಪರವಾಗಿದ್ದರೆ, ಉಳಿದ 34 ಮತಗಳು ಬಿಜೆಪಿಯ ಹರ್ಷ್ ಮಹಾಜನ್ ಪರವಾಗಿತ್ತು. ಮತ ಎಣಿಕೆಯ ನಂತರ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಚೀಟಿಯಲ್ಲಿ ಬರೆದು ಆಯ್ಕೆ ಮಾಡಲಾಗಿದೆ. ಚೀಟಿ ಎತ್ತಿದಾಗ ಅದರಲ್ಲಿ ಹರ್ಷ್ ಮಹಾಜನ್ ಹೆಸರಿದ್ದು , ಅವರನ್ನು ವಿಜೇತರೆಂದು ಘೋಷಿಸಲಾಯಿತು.

Rajya Sabha Poll: ಕೈ ಹಿಡಿಯದ ಅದೃಷ್ಟ; ಹಿಮಾಚಲದಲ್ಲಿ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು
ಅಭಿಷೇಕ್ ಮನು ಸಿಂಘ್ವಿ
ರಶ್ಮಿ ಕಲ್ಲಕಟ್ಟ
|

Updated on: Feb 27, 2024 | 9:06 PM

Share

ದೆಹಲಿ ಫೆಬ್ರವರಿ 27: ಹಿಮಾಚಲ ಪ್ರದೇಶದಲ್ಲಿ(Himachal Pradesh) ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha election) ಬಿಜೆಪಿಯ ಹರ್ಷ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ವಿರುದ್ಧ ವಿಜಯಶಾಲಿಯಾಗಿದ್ದಾರೆ. ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಫಲಿತಾಂಶ ಘೋಷಿಸಿದ್ದಾರೆ. ಚುನಾವಣಾ ಫಲಿತಾಂಶದ ನಂತರ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರು ಹರ್ಷ್ ಮಹಾಜನ್ ಅವರ ಗೆಲುವಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದು ಚುನಾವಣಾ ಫಲಿತಾಂಶದ ಬಗ್ಗೆ ಬಿಜೆಪಿಯನ್ನು ಟೀಕಿಸಿದರು.

“ಮೊದಲನೆಯದಾಗಿ, ಹರ್ಷ್ ಮಹಾಜನ್ ಅವರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರು ಗೆದ್ದಿದ್ದಾರೆ. ಅವರು ನನ್ನ ಅಭಿನಂದನೆಗೆ ಅರ್ಹರು. ಆತ್ಮಾವಲೋಕನ ಮಾಡಿ ಮತ್ತು ಯೋಚಿಸಿ ಎಂದು ನಾನು ಅವರ ಪಕ್ಷಕ್ಕೆ ಹೇಳಲು ಬಯಸುತ್ತೇನೆ. 25 ಸದಸ್ಯರ ಪಕ್ಷವು 43 ಸದಸ್ಯರ ವಿರುದ್ಧ ಅಭ್ಯರ್ಥಿಯನ್ನು ನಿಲ್ಲಿಸಿದಾಗ ಅದರಲ್ಲಿರುವುದು ಒಂದೇ ಸಂದೇಶ. ಅದೇನೆಂದರೆ ಕಾನೂನಿನಿಂದ ಅನುಮತಿಸದ ಕೆಲಸವನ್ನು ನಾವು ನಿರ್ಲಜ್ಜವಾಗಿ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಂಘ್ವಿ ಮಾತು

ಒಟ್ಟು 68 ಮತಗಳ ಪೈಕಿ 34 ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಪರವಾಗಿದ್ದರೆ, ಉಳಿದ 34 ಮತಗಳು ಬಿಜೆಪಿಯ ಹರ್ಷ್ ಮಹಾಜನ್ ಪರವಾಗಿತ್ತು. ಮತ ಎಣಿಕೆಯ ನಂತರ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಚೀಟಿಯಲ್ಲಿ ಬರೆದು ಆಯ್ಕೆ ಮಾಡಲಾಗಿದೆ. ಚೀಟಿ ಎತ್ತಿದಾಗ ಅದರಲ್ಲಿ ಹರ್ಷ್ ಮಹಾಜನ್ ಹೆಸರಿದ್ದು , ಅವರನ್ನು ವಿಜೇತರೆಂದು ಘೋಷಿಸಲಾಯಿತು. ಹರ್ಷ್ ಮಹಾಜನ್ ಈಗ ರಾಜ್ಯಸಭೆಯಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸಲು ಮುಂದುವರಿಯುತ್ತಾರೆ, ಸಂಸತ್ ಸದಸ್ಯರಾಗಿ ದೆಹಲಿಗೆ ಹೋಗುತ್ತಾರೆ.

ಇದನ್ನೂ ಓದಿ: ಇಂಡಿಯಾ ಬಣದ ಪಕ್ಷಗಳು ಸೋಲೊಪ್ಪಿಕೊಂಡಿವೆ: ತಮಿಳುನಾಡಿನಲ್ಲಿ ಪ್ರಧಾನಿ ಮೋದಿ

ಅವರಿಗಿಂತ ಮೊದಲು ಇಂದು ಗೋಸ್ವಾಮಿ ಮತ್ತು ಪ್ರೊಫೆಸರ್ ಸಿಕಂದರ್ ಕುಮಾರ್ ಹಿಮಾಚಲ ಪ್ರದೇಶವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿದ್ದರು. ತಮ್ಮ ವಿಜಯದ ಘೋಷಣೆಯ ನಂತರ, ಹರ್ಷ್ ಮಹಾಜನ್ ಅವರು ರಾಜ್ಯದ ರಾಜಧಾನಿ ಶಿಮ್ಲಾದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, “ಇದು ಬಿಜೆಪಿಯ ಗೆಲುವು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವು ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗೆಲುವು” ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ