AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Poll: ಕೈ ಹಿಡಿಯದ ಅದೃಷ್ಟ; ಹಿಮಾಚಲದಲ್ಲಿ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು

ಹಿಮಾಚಲ ಪ್ರದೇಶದಲ್ಲಿಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಒಟ್ಟು 68 ಮತಗಳ ಪೈಕಿ 34 ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಪರವಾಗಿದ್ದರೆ, ಉಳಿದ 34 ಮತಗಳು ಬಿಜೆಪಿಯ ಹರ್ಷ್ ಮಹಾಜನ್ ಪರವಾಗಿತ್ತು. ಮತ ಎಣಿಕೆಯ ನಂತರ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಚೀಟಿಯಲ್ಲಿ ಬರೆದು ಆಯ್ಕೆ ಮಾಡಲಾಗಿದೆ. ಚೀಟಿ ಎತ್ತಿದಾಗ ಅದರಲ್ಲಿ ಹರ್ಷ್ ಮಹಾಜನ್ ಹೆಸರಿದ್ದು , ಅವರನ್ನು ವಿಜೇತರೆಂದು ಘೋಷಿಸಲಾಯಿತು.

Rajya Sabha Poll: ಕೈ ಹಿಡಿಯದ ಅದೃಷ್ಟ; ಹಿಮಾಚಲದಲ್ಲಿ ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು
ಅಭಿಷೇಕ್ ಮನು ಸಿಂಘ್ವಿ
ರಶ್ಮಿ ಕಲ್ಲಕಟ್ಟ
|

Updated on: Feb 27, 2024 | 9:06 PM

Share

ದೆಹಲಿ ಫೆಬ್ರವರಿ 27: ಹಿಮಾಚಲ ಪ್ರದೇಶದಲ್ಲಿ(Himachal Pradesh) ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha election) ಬಿಜೆಪಿಯ ಹರ್ಷ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ವಿರುದ್ಧ ವಿಜಯಶಾಲಿಯಾಗಿದ್ದಾರೆ. ಚುನಾವಣಾಧಿಕಾರಿಗಳು ಚೀಟಿ ಎತ್ತುವ ಮೂಲಕ ಫಲಿತಾಂಶ ಘೋಷಿಸಿದ್ದಾರೆ. ಚುನಾವಣಾ ಫಲಿತಾಂಶದ ನಂತರ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರು ಹರ್ಷ್ ಮಹಾಜನ್ ಅವರ ಗೆಲುವಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದು ಚುನಾವಣಾ ಫಲಿತಾಂಶದ ಬಗ್ಗೆ ಬಿಜೆಪಿಯನ್ನು ಟೀಕಿಸಿದರು.

“ಮೊದಲನೆಯದಾಗಿ, ಹರ್ಷ್ ಮಹಾಜನ್ ಅವರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಅವರು ಗೆದ್ದಿದ್ದಾರೆ. ಅವರು ನನ್ನ ಅಭಿನಂದನೆಗೆ ಅರ್ಹರು. ಆತ್ಮಾವಲೋಕನ ಮಾಡಿ ಮತ್ತು ಯೋಚಿಸಿ ಎಂದು ನಾನು ಅವರ ಪಕ್ಷಕ್ಕೆ ಹೇಳಲು ಬಯಸುತ್ತೇನೆ. 25 ಸದಸ್ಯರ ಪಕ್ಷವು 43 ಸದಸ್ಯರ ವಿರುದ್ಧ ಅಭ್ಯರ್ಥಿಯನ್ನು ನಿಲ್ಲಿಸಿದಾಗ ಅದರಲ್ಲಿರುವುದು ಒಂದೇ ಸಂದೇಶ. ಅದೇನೆಂದರೆ ಕಾನೂನಿನಿಂದ ಅನುಮತಿಸದ ಕೆಲಸವನ್ನು ನಾವು ನಿರ್ಲಜ್ಜವಾಗಿ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಂಘ್ವಿ ಮಾತು

ಒಟ್ಟು 68 ಮತಗಳ ಪೈಕಿ 34 ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಪರವಾಗಿದ್ದರೆ, ಉಳಿದ 34 ಮತಗಳು ಬಿಜೆಪಿಯ ಹರ್ಷ್ ಮಹಾಜನ್ ಪರವಾಗಿತ್ತು. ಮತ ಎಣಿಕೆಯ ನಂತರ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಚೀಟಿಯಲ್ಲಿ ಬರೆದು ಆಯ್ಕೆ ಮಾಡಲಾಗಿದೆ. ಚೀಟಿ ಎತ್ತಿದಾಗ ಅದರಲ್ಲಿ ಹರ್ಷ್ ಮಹಾಜನ್ ಹೆಸರಿದ್ದು , ಅವರನ್ನು ವಿಜೇತರೆಂದು ಘೋಷಿಸಲಾಯಿತು. ಹರ್ಷ್ ಮಹಾಜನ್ ಈಗ ರಾಜ್ಯಸಭೆಯಲ್ಲಿ ಹಿಮಾಚಲ ಪ್ರದೇಶವನ್ನು ಪ್ರತಿನಿಧಿಸಲು ಮುಂದುವರಿಯುತ್ತಾರೆ, ಸಂಸತ್ ಸದಸ್ಯರಾಗಿ ದೆಹಲಿಗೆ ಹೋಗುತ್ತಾರೆ.

ಇದನ್ನೂ ಓದಿ: ಇಂಡಿಯಾ ಬಣದ ಪಕ್ಷಗಳು ಸೋಲೊಪ್ಪಿಕೊಂಡಿವೆ: ತಮಿಳುನಾಡಿನಲ್ಲಿ ಪ್ರಧಾನಿ ಮೋದಿ

ಅವರಿಗಿಂತ ಮೊದಲು ಇಂದು ಗೋಸ್ವಾಮಿ ಮತ್ತು ಪ್ರೊಫೆಸರ್ ಸಿಕಂದರ್ ಕುಮಾರ್ ಹಿಮಾಚಲ ಪ್ರದೇಶವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿದ್ದರು. ತಮ್ಮ ವಿಜಯದ ಘೋಷಣೆಯ ನಂತರ, ಹರ್ಷ್ ಮಹಾಜನ್ ಅವರು ರಾಜ್ಯದ ರಾಜಧಾನಿ ಶಿಮ್ಲಾದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ, “ಇದು ಬಿಜೆಪಿಯ ಗೆಲುವು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವು ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗೆಲುವು” ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ