AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆಯಲ್ಲಿ ಪಾಸಾಯ್ತು ಪೌರತ್ವ ಮಸೂದೆ

ದೆಹಲಿ: ವಿವಾದದ ಕಿಡಿ ಹೊತ್ತಿಸಿದ್ದ ಪೌರತ್ವ ತಿದ್ದುಪಡಿ ಸಂಸತ್​ನ ಉಭಯ ಸದನಗಳಲ್ಲಿ ಅಂಗೀಕಾರವಾಗ್ತಿದ್ದಂತೇ ಪರ, ವಿರೋಧದ ಚರ್ಚೆಗಳು ಕೂಡ ಜೋರಾಗಿವೆ. ನಿರಾಶ್ರಿತರು ಪೌರತ್ವ ಸಿಗುವ ಖುಷಿಯಲ್ಲಿದ್ರೆ, ಪ್ರತಿಭಟನೆಯ ಕಾವಿಗೆ ಈಶಾನ್ಯ ಭಾರತ ಬೆಂಕಿಯುಂಡೆಯಾಗಿದೆ. ಅಗ್ನಿಪರೀಕ್ಷೆಯಲ್ಲಿ ಪಾಸಾಯ್ತು ಪೌರತ್ವ ಮಸೂದೆ: ಪ್ರತಿಪಕ್ಷಗಳ ಪ್ರತಿರೋಧ, ಸದನದಲ್ಲಿ ತೀವ್ರ ಕೋಲಾಹಲ, ಈಶಾನ್ಯ ರಾಜ್ಯಗಳಲ್ಲಿ ಆಕ್ರೋಶದ ಕಿಚ್ಚು ಹಚ್ಚಿದ್ದ ಪೌರತ್ವ ತಿದ್ದುಪಡಿ ಮಸೂದೆ ಸಂಸತ್​ನ ಮೇಲ್ಮನೆಯಾದ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. ಮಸೂದೆ ಮೇಲೆ ಸುಮಾರು 7 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದು ವಿಧೇಯಕವನ್ನ […]

ರಾಜ್ಯಸಭೆಯಲ್ಲಿ ಪಾಸಾಯ್ತು ಪೌರತ್ವ ಮಸೂದೆ
ಸಾಧು ಶ್ರೀನಾಥ್​
|

Updated on:Dec 12, 2019 | 6:40 AM

Share

ದೆಹಲಿ: ವಿವಾದದ ಕಿಡಿ ಹೊತ್ತಿಸಿದ್ದ ಪೌರತ್ವ ತಿದ್ದುಪಡಿ ಸಂಸತ್​ನ ಉಭಯ ಸದನಗಳಲ್ಲಿ ಅಂಗೀಕಾರವಾಗ್ತಿದ್ದಂತೇ ಪರ, ವಿರೋಧದ ಚರ್ಚೆಗಳು ಕೂಡ ಜೋರಾಗಿವೆ. ನಿರಾಶ್ರಿತರು ಪೌರತ್ವ ಸಿಗುವ ಖುಷಿಯಲ್ಲಿದ್ರೆ, ಪ್ರತಿಭಟನೆಯ ಕಾವಿಗೆ ಈಶಾನ್ಯ ಭಾರತ ಬೆಂಕಿಯುಂಡೆಯಾಗಿದೆ.

ಅಗ್ನಿಪರೀಕ್ಷೆಯಲ್ಲಿ ಪಾಸಾಯ್ತು ಪೌರತ್ವ ಮಸೂದೆ: ಪ್ರತಿಪಕ್ಷಗಳ ಪ್ರತಿರೋಧ, ಸದನದಲ್ಲಿ ತೀವ್ರ ಕೋಲಾಹಲ, ಈಶಾನ್ಯ ರಾಜ್ಯಗಳಲ್ಲಿ ಆಕ್ರೋಶದ ಕಿಚ್ಚು ಹಚ್ಚಿದ್ದ ಪೌರತ್ವ ತಿದ್ದುಪಡಿ ಮಸೂದೆ ಸಂಸತ್​ನ ಮೇಲ್ಮನೆಯಾದ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. ಮಸೂದೆ ಮೇಲೆ ಸುಮಾರು 7 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದು ವಿಧೇಯಕವನ್ನ ಮತಕ್ಕೆ ಹಾಕಲಾಯ್ತು. ಈ ವೇಳೆ ಮಸೂದೆ ಪರವಾಗಿ 125 ಮತಗಳು ಬಿದ್ದು ವಿಧೇಯಕ ಪಾಸಾಯ್ತು.

ದೇಶದೆಲ್ಲೆಡೆ ಮುಸ್ಲಿಮೇತರ ನಿರಾಶ್ರಿತರ ಸಂಭ್ರಮ: ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗ್ತಿದ್ದಂತೆ ದೇಶದ ನಾನಾ ಭಾಗಗಳಲ್ಲಿ ನೆಲೆಸಿದ್ದ ನಿರಾಶ್ರಿತರ ಸಂಭ್ರಮ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ, ಸಿಹಿ ಹಂಚಿದ ಮುಸ್ಲಿಮೇತರ ನಿರಾಶ್ರಿತರು ಮೋದಿ ಪರ ಘೋಷಣೆಗಳನ್ನ ಕೂಗಿ ಸಂಭ್ರಮಿಸಿದ್ರು.

ಮಗುವಿಗೆ ‘ನಾಗರಿಕತ್ವ’ ಅಂತ ಹೆಸರಿಟ್ಟ ತಾಯಿ: ರಾಜ್ಯಸಭೆಯಲ್ಲಿ ಪಾಸಾದ ಮಸೂದೆಗೆ ಶೀಘ್ರದಲ್ಲೇ ರಾಷ್ಟ್ರಪತಿ ಅಂಕಿತ ಬಿದ್ದು ಕಾಯ್ದೆ ರೂಪ ಪಡೆಯಲಿದೆ. ಅದರಂತೆ 2014ರ ಡಿಸೆಂಬರ್​ 31ಕ್ಕೂ ಮುನ್ನ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ವಲಸೆ ಬಂದು ಭಾರತದಲ್ಲಿ ನೆಲೆಸಿದ ಮುಸ್ಲಿಮೇತರ ನಿರಾಶ್ರಿತರಿಗೆ ದೇಶದ ನಾಗರಿಕತ್ವ ಸಿಗಲಿದೆ. ಇದೇ ಖುಷಿಗೆ ಪಾಕಿಸ್ತಾನದಿಂದ ಬಂದು ದೆಹಲಿಯಲ್ಲಿ ನೆಲೆಸಿದ್ದ ಹಿಂದೂ ನಿರಾಶ್ರಿತೆಯೊಬ್ಬಳು ತನ್ನ 2 ದಿನದ ಮಗುವಿಗೆ ನಾಗರಿಕತ್ವ ಅಂತಾನೆ ಹೆಸರಿಟ್ಟಿದ್ದಾಳೆ.

ಮೈಲಿಗಲ್ಲು ಎಂದ ಮೋದಿ, ಕರಾಳ ದಿನವೆಂದ ಸೋನಿಯಾ: ಸಂಸತ್​ನಲ್ಲಿ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ಟ್ವೀಟ್ ಮಾಡಿರೋ ಪ್ರಧಾನಿ ಮೋದಿ, ಇದು ಭಾರತದ ಇತಿಹಾಸದಲ್ಲೇ ಮೈಲಿಗಲ್ಲು. ಇದರಿಂದ ಹಲವು ವರ್ಷಗಳಿಂದ ಧಾರ್ಮಿಕ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಸಿಗಲಿದೆ ಎಂದಿದ್ದಾರೆ. ಅತ್ತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಇದು ಭಾರತದ ಇತಿಹಾಸದಲ್ಲಿ ಕರಾಳ ದಿನ ಅಂತ ಬಿಜೆಪಿ ವಿರುದ್ಧ ಬೆಂಕಿ ಉಗುಳಿದ್ದಾರೆ.

ಕೊತ ಕೊತ ಕುದಿಯುತ್ತಿದೆ ಈಶಾನ್ಯ ಭಾರತ: ಪೌರತ್ವ ತಿದ್ದುಪಡಿ ವಿಧೇಯಕ ವಿರುದ್ಧ ಇಡೀ ಈಶಾನ್ಯ ಭಾರತ ಹೊತ್ತಿ ಉರೀತಿದೆ. ಪ್ರತಿಭಟನೆಯ ಕಾವು ಜೋರಾಗಿದ್ದು, ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಹಲವೆಡೆ ಲಾಠಿ ಚಾರ್ಚ್​ ಕೂಡ ನಡೆದಿದೆ. ಅದ್ರಲ್ಲೂ ಅಸ್ಸಾಂನಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಅನಿರ್ಧಿಷ್ಟಾವಧಿವರೆಗೆ ಕರ್ಫ್ಯೂ ಹೇರಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸೇನೆಯನ್ನ ನಿಯೋಜಿಸಲಾಗಿದೆ. ಇನ್ನು ವಿಧೇಯಕದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಕೆಲ ಸಂಘಟನೆಗಳು ಮುಂದಾಗಿವೆ.

Published On - 6:39 am, Thu, 12 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ