AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಣ್ಣನವರ ಕಾಯಕವೇ ಕೈಲಾಸದಡಿ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ: ಡಾ.ವೀರೇಂದ್ರ ಹೆಗ್ಗಡೆ

ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿ ಅವರ ಭಾಷಣದ ಮೇಲೆ ಡಾ.ವೀರೇಂದ್ರ ಹೆಗ್ಗಡೆ ಅವರು ಭಾಷಣ ಮಾಡಿದರು. ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಅವರು, ಬಸವಣ್ಣನವರ ಕಾಯಕವೇ ಕೈಲಾಸದಡಿ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ ಎಂದರು. ಅಲ್ಲದೆ, ಯೋಗದ ಮಹತ್ವದ ಬಗ್ಗೆಯೂ ಮಾತನಾಡಿದರು.

TV9 Web
| Edited By: Rakesh Nayak Manchi|

Updated on:Feb 09, 2023 | 3:16 PM

Share

ದೆಹಲಿ: ಬಸವಣ್ಣನವರ ಕಾಯಕವೇ ಕೈಲಾಸದಡಿ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ ಎಂದು ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ (Dr. Veerendra Heggade) ಹೇಳಿದರು. ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಭಾಷಣದ ಮೇಲೆ ಭಾಷಣ ಮಾಡಿದ ಅವರು, ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮದ ಹಾಗೂ ಯೋಗದ ಮಹತ್ವದ ಬಗ್ಗೆಯೂ ಮಾತನಾಡಿದರು. ಪಾಶ್ಚಾತ್ಯ ಸಂಸ್ಕೃತಿ ಭಾರತ ಮೇಲೆ ಪ್ರಭಾವ ಬೀರಿದೆ. ಅದೇ ರೀತಿ ಭಾರತದ ಆರ್ಯವೇದ, ಯೋಗ ಪಾಶ್ಚಾತ್ಯದಲ್ಲಿ ಪ್ರಚಾರವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi)ಯವರ ನೇತೃತ್ವದಲ್ಲಿ ಯೋಗ ಪ್ರಚಾರ ಪಡೆಯುತ್ತಿದೆ ಎಂದರು.

ದೇಶದ ಧಾರ್ಮಿಕ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದೆ. ಅಯೋಧ್ಯೆ, ಕೇದಾರ, ವಾರಣಾಸಿಯಲ್ಲಿ ಬದಲಾವಣೆಯಾಗಿದೆ. ಆಗಿರುವ ಬದಲಾವಣೆಯನ್ನು ಭಕ್ತರು ಕಂಡಿದ್ದಾರೆ. ಮಾತ್ರವಲ್ಲದೆ, ಸರ್ಕಾರ ಶಿಕ್ಷಣಕ್ಕೂ ಒತ್ತು ನೀಡುತ್ತಿದೆ. ಏಕ್ ಭಾರತ್ ಶ್ರೆಷ್ಠ ಭಾರತ್ ಸಂದೇಶದಂತೆ ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡುತ್ತಿದ್ದಾರೆ. ಅನೇಕ‌ ಭಾಷೆಗಳು ನಮ್ಮನ್ನು ಬೇರ್ಪಡಿಸುತ್ತಿಲ್ಲ, ಬಸಲಾಗಿ ಒಗ್ಗೂಡಿಸುತ್ತಿದೆ ಎಂದರು.

ಇದನ್ನೂ ಓದಿ: ನಾನು ಯಾವುದೇ ಅಸಂಸದೀಯ ಪದ ಬಳಸಿಲ್ಲ, ಆದರೂ ಭಾಷಣದ ಕೆಲವು ಭಾಗಗಳನ್ನು ಸಂಸತ್ ದಾಖಲೆಯಿಂದ ತೆಗೆದುಹಾಕಿದ್ದು ಯಾಕೆ?: ಖರ್ಗೆ

ವಿರೇಂದ್ರ ಹೆಗಡೆ ಅವರು ಭಾಷಣದ ಬಳಿಕ ಪಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ ಉತ್ತರ ನಿಡಿದರು. ಈ ವೇಳೆ ವಿಪಕ್ಷಗಳ ಸದಸ್ಯರು ಗದ್ದಲ ಮಾಡಿ ಮಾತನಾಡಲು ತಮಗೂ ಅವಕಾಶ ನೀಡುವಂತೆ ಆಗ್ರಹಿಸಿದರು. ಈ ವೇಳೆ ಮೋದಿ, ಅದಾನಿ ಭಾಯಿ ಭಾಯಿ ಎಂದು ಘೋಷಣೆ ಕೂಗಿದರು. ಆದರೂ ಮೋದಿ ವಿಪಕ್ಷಗಳ ಗದ್ದಲದ ನಡುವೆಯೇ ಭಾಷಣ ಮಾಡಿದರು.

ದೇಶವು ಸದನದ ಕಲಾಪಗಳನ್ನು ಗಂಭೀರವಾಗಿ ಪರಿಗಣಿಸುತ್ತದೆ. ಕೆಲವು ಸದಸ್ಯರು ನೀಡಿದ ಭಾಷಣಗಳು ಮತ್ತು ಹೇಳಿಕೆಗಳು ತುಂಬಾ ನಿರಾಶಾದಾಯಕವಾಗಿವೆ. ನಾನು 2014 ರಲ್ಲಿ ಪ್ರಧಾನಿಯಾದಾಗ, ಕಾಂಗ್ರೆಸ್ ಸಮಸ್ಯೆಗಳನ್ನು ಸೃಷ್ಟಿಸಿತ್ತು. ನೀವು ಕಮಲದ ಮೇಲೆ‌ ಎಷ್ಟೇ ಕೆಸರು ಎರಚಿದರೂ ಚೆಚನ್ನಾಗಿ ಅರಳುತ್ತದೆ. ಪರೋಕ್ಷವಾಗಿ ಕಮಲ ಅರಳು ಸಹಾಯ ಮಾಡುತ್ತಿದ್ದೀರಿ ಎಂದು ಹೇಳುವ ಮೂಲಕ ವಿಪಕ್ಷಗಳ ಗದ್ದಲಕ್ಕೆ ಮೋದಿ ತಿರುಗೇಟು ನೀಡಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Thu, 9 February 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ