AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಪಿ ಸಂಸದ ರಾಘವ್ ಚಡ್ಡಾ ಅಮಾನತನ್ನು ಹಿಂಪಡೆದ ರಾಜ್ಯಸಭೆ

ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರ ಅಮಾನತು ಕ್ರಮವನ್ನು ರಾಜ್ಯಸಭೆ ಇಂದು (ಡಿ.04) ಹಿಂಪಡೆದಿದೆ. ಐವರು ರಾಜ್ಯಸಭಾ ಸಂಸದರ ನಕಲಿ ಸಹಿ ಮಾಡಿದ ಆರೋಪ ಹೊತ್ತಿರುವ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತು. ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅಮಾನತಿನಲ್ಲಿ ಇಡಲಾಗುವುದು ಎಂದು ರಾಜ್ಯಸಭೆಯಲ್ಲಿ ಹೇಳಲಾಗಿತು. ಇದೀಗ ಅವರ ಅಮಾನತು ಕ್ರಮವನ್ನು ಹಿಂಪಡೆಯಾಗಲಿದೆ.

ಎಎಪಿ ಸಂಸದ ರಾಘವ್ ಚಡ್ಡಾ ಅಮಾನತನ್ನು ಹಿಂಪಡೆದ ರಾಜ್ಯಸಭೆ
ರಾಘವ್ ಚಡ್ಡಾ
ಅಕ್ಷಯ್​ ಪಲ್ಲಮಜಲು​​
|

Updated on:Dec 04, 2023 | 3:03 PM

Share

ದೆಹಲಿ, ಡಿ.04: ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ (Raghav Chadha) ಅವರ ಅಮಾನತು ಕ್ರಮವನ್ನು ರಾಜ್ಯಸಭೆ ಇಂದು (ಡಿ.04) ಹಿಂಪಡೆದಿದೆ. ಐವರು ರಾಜ್ಯಸಭಾ ಸಂಸದರ ನಕಲಿ ಸಹಿ ಮಾಡಿದ ಆರೋಪ ಹೊತ್ತಿರುವ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತು. ಅವರ ವಿರುದ್ಧದ ಪ್ರಕರಣದ ತನಿಖೆಯ ವಿಶೇಷಾಧಿಕಾರಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅಮಾನತಿನಲ್ಲಿ ಇಡಲಾಗುವುದು ಎಂದು ರಾಜ್ಯಸಭೆಯಲ್ಲಿ ಹೇಳಲಾಗಿತು. ರಾಘವ್ ಚಡ್ಡಾ ಅವರು ಮಾಡಿದ್ದು ಅಕ್ರಮ ಎಂದು ಪಿಯೂಷ್ ಗೋಯಲ್ ಅವರು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು. ಚಡ್ಡಾ ಅವರ ನಡವಳಿಕೆಯು ಅನಿರೀಕ್ಷಿತ ಮತ್ತು ಸಂಸತ್ತಿನ ಸದಸ್ಯರಿಗೆ ತಕ್ಕುದಾದುದು ಅಲ್ಲ. ಚಡ್ಡಾ ಅವರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಗೋಯಲ್ ಅಮಾನತು ಪ್ರಸ್ತಾಪವನ್ನು ಮಂಡಿಸಿದರು.

ಇದೀಗ ಚಳಿಗಾಲದ ಅಧಿವೇಶನದ ಮೊದಲ ದಿನವೇ ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರು ಮಂಡಿಸಿದ ಮನವಿಯ ಮೇರೆಗೆ ಅಮಾನತು ರದ್ದುಗೊಳಿಸಲಾಯಿತು. ಅಮಾನತು ವಿಷಯವನ್ನು ಚರ್ಚಿಸಲು ಇಂದು ಮಧ್ಯಾಹ್ನ ಸಂಸತ್ತಿನಲ್ಲಿ ರಾಜ್ಯಸಭೆಯ ವಿಶೇಷಾಧಿಕಾರ ಸಮಿತಿ ಸಭೆ ನಡೆಯಿತು.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ, ಆರೋಪಪಟ್ಟಿಯಲ್ಲಿ ರಾಘವ್ ಚಡ್ಡಾ ಹೆಸರು

ಅಮಾನತು ಹಿಂಪಡೆದ ನಂತರ, ಚಾಡಾ ಅವರು ವಿಡಿಯೋ ಸಂದೇಶದ ಮೂಲಕ ಸುಪ್ರೀಂ ಕೋರ್ಟ್ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 11ರಂದು ನನ್ನನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಯಿತು. ನನ್ನ ಅಮಾನತು ಹಿಂಪಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದೆ. ಸುಪ್ರೀಂ ಕೋರ್ಟ್ ಇದನ್ನು ಅರಿತಿದೆ ಮತ್ತು ಈಗ ನನ್ನ ಅಮಾನತು 115 ದಿನಗಳ ನಂತರ ಹಿಂಪಡೆದಿದೆ. ನನ್ನ ಅಮಾನತು ರದ್ದುಗೊಂಡಿರುವುದಕ್ಕೆ ನನಗೆ ಸಂತೋಷವಾಗಿದೆ ಮತ್ತು ನಾನು ಸುಪ್ರೀಂ ಕೋರ್ಟ್ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Mon, 4 December 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ