AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ಕೊರೊನಾ ಲಸಿಕೆ ನೀಡಲು ಬೇಡಿಕೆಯಿಟ್ಟ ರಾಕೇಶ್ ಟಿಕಾಯತ್

Corona Vaccine in Farmers Protest : ಚಳುವಳಿ ನಿರತ ಪಂಜಾಬ್ ರೈತರು ಕೊರೊನಾ ಸೋಂಕಿನಿಂದ ರಕ್ಷಿಸಲ್ಪಟ್ಟಿದ್ದಾರೆಯೇ? ಎಂದು ರೈತರ ಹೋರಾಟದ 43ನೇ ದಿನ  ಸರ್ವೋಚ್ಛ ನ್ಯಾಯಾಲಯ ಕೇಂದ್ರ ಸರ್ಕಾರವನ್ನು ಗಂಭೀರವಾಗಿ ಪ್ರಶ್ನಿಸಿತ್ತು.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿರುವ ರೈತರಿಗೆ ಕೊರೊನಾ ಲಸಿಕೆ ನೀಡಲು ಬೇಡಿಕೆಯಿಟ್ಟ ರಾಕೇಶ್ ಟಿಕಾಯತ್
ರಾಕೇಶ್​ ಟಿಕಾಯತ್​
Follow us
guruganesh bhat
| Updated By: Lakshmi Hegde

Updated on: Mar 18, 2021 | 3:47 PM

ದೆಹಲಿ: ರಾಷ್ಟ್ರ ರಾಜಧಾನಿಯ ಗಡಿಭಾಗಗಳಲ್ಲಿ ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರಿಗೆ ಕೊರೊನಾ ಲಸಿಕೆ ಒದಗಿಸಬೇಕು ಎಂದು ರೈತ ನಾಯಕ, ಭಾರತೀಯ ಕಿಸಾನ್ ಯುನಿಯನ್​ನ ಮಾಧ್ಯಮ ವಕ್ತಾರ ರಾಕೇಶ್ ಟಿಕಾಯತ್ ಆಗ್ರಹಿಸಿದ್ದಾರೆ. ಘಾಜಿಪುರ ಗಡಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಸರ್ಕಾರ ಕೊರೊನಾ ಲಸಿಕೆ ಒದಗಿಸಿದಲ್ಲಿ ರೈತರ ಜತೆ ತಾವೂ ಲಸಿಕೆ ಪಡೆಯುವುದಾಗಿ ತಿಳಿಸಿದ್ದಾರೆ.

ಈ ಮೊದಲೇ ಪ್ರಶ್ನಿಸಿತ್ತು ಸುಪ್ರೀಂಕೋರ್ಟ್ ಚಳುವಳಿ ನಿರತ ಪಂಜಾಬ್ ರೈತರು ಕೊರೊನಾ ಸೋಂಕಿನಿಂದ ರಕ್ಷಿಸಲ್ಪಟ್ಟಿದ್ದಾರೆಯೇ? ಎಂದು ರೈತರ ಹೋರಾಟದ 43ನೇ ದಿನ  ಸರ್ವೋಚ್ಛ ನ್ಯಾಯಾಲಯ ಕೇಂದ್ರ ಸರ್ಕಾರವನ್ನು ಗಂಭೀರವಾಗಿ ಪ್ರಶ್ನಿಸಿತ್ತು. ದೇಶದ ರಾಜಧಾನಿಯ ಗಡಿಭಾಗದಲ್ಲಿ ಸಾವಿರಾರು ರೈತರು ವಾಸ್ತವ್ಯ ಹೂಡಿ ಪ್ರತಿಭಟಿಸುತ್ತಿದ್ದು, ಕೊರೊನಾ ಸೋಂಕಿನಿಂದ ಅವರು ಮುಕ್ತವಾಗಿದ್ದಾರೆಯೇ? ಹಿಂದೊಮ್ಮೆ ಕೊರೊನಾ ಸೋಂಕು ಹರಡಲು ಕಾರಣವಾಗಿದ್ದ ತಬ್ಲಿಘಿ ಜಮಾತ್ ಘಟನೆಯಿಂದ ಪಾಠ ಕಲಿತಿಲ್ಲವೇ? ಎಂದು ನ್ಯಾಯಾಲಯ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.

2020ರ ಮಾರ್ಚ್​ನಲ್ಲಿ ಕೊರೊನಾ ಸೋಂಕಿನ ಭಯದ ನಡುವೆ ದೆಹಲಿಯ ದರ್ಗಾವೊಂದರಲ್ಲಿ ತಬ್ಲಿಘಿ ಜಮಾತ್ ಸಂಘಟನೆಯ ಧಾರ್ಮಿಕ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮ ದೇಶದಲ್ಲಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ‘ಸೂಪರ್ ಸ್ಪ್ರೆಡರ್’ ಆಗಿ ಪರಿಣಮಿಸುತ್ತದೆ ಎಂದು ಬಿಂಬಿಸಲಾಗಿತ್ತು. ಪೊಲೀಸರು ಆದರೆ, ಕೆಲ ತಿಂಗಳ ನಂತರ ಸರ್ವೋಚ್ಛ ನ್ಯಾಯಾಲಯ ಸಾಕ್ಷಿಯ ಕೊರತೆಯಿಂದ ತಬ್ಲಿಘಿ ಜಮಾತ್ ವಿರುದ್ಧದ ಆರೋಪವನ್ನು ನಿರಾಕರಿಸಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಬಳಿ ರೈತರ ಪ್ರತಿಭಟನೆಯಿಂದ ಕೊರೊನಾ ಸೋಂಕು ಹರಡುವುದಿಲ್ಲವೇ ಎಂದು ಪ್ರಶ್ನಿಸಿತ್ತು.

ಕೊರೊನಾ ಸೋಂಕಿತರ ಸದ್ಯದ ಅಂಕಿ-ಅಂಶ ದೇಶದಲ್ಲಿ ಕೊರೊನಾ ಸೋಂಕಿನ ಪ್ರಸರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಕಳೆದ ಒಂದು ವಾರದಿಂದ ದಿನವೊಂದರಲ್ಲಿ ದಾಖಲೆಯಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಮಾರ್ಚ್ 17ರಂದು ಪ್ರಕಟವಾದ ವರದಿಯಲ್ಲಿ 24ಗಂಟೆಯಲ್ಲಿ 28,903 ಕೊವಿಡ್​-19 ಕೇಸ್​​ಗಳು ದಾಖಲಾಗಿದ್ದು ಪತ್ತೆಯಾಗಿತ್ತು. ಮಾರ್ಚ್ 17ರ ಅಂಕಿಅಂಶದ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 11,438,734ಕ್ಕೆ ಏರಿಕೆಯಾಗಿದೆ.

5 ರಾಜ್ಯಗಳದ್ದೇ ಹೆಚ್ಚುಪಾಲು ಹೀಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಹೆಚ್ಚಾಗುತ್ತಿರುವಲ್ಲಿ 5 ರಾಜ್ಯಗಳ ಪಾಲು ಹೆಚ್ಚಿದೆ. ಒಂದು ದಿನದಲ್ಲಿ ದಾಖಲಾಗುತ್ತಿರುವ ಸೋಂಕಿನ ಕೇಸ್​​ಗಳಲ್ಲಿ ಶೇ.80ರಷ್ಟು ಮಹಾರಾಷ್ಟ್ರ, ಪಂಜಾಬ್​, ಕರ್ನಾಟಕ, ಗುಜರಾತ್​ ಮತ್ತು ತಮಿಳುನಾಡಿನಿಂದಲೇ ವರದಿಯಾಗುತ್ತಿವೆ ಎಂದು ತಜ್ಞರು ಹೇಳಿದ್ದಾರೆ. ಅದರಲ್ಲೂ ದೇಶದ ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಪಂಜಾಬ್​ ರಾಜ್ಯಗಳ ಪಾಲು ಶೇ.76.57ರಷ್ಟಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಒಂದೆಡೆ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದೆ. ಇದುವರೆಗೂ ಸೋಂಕಿನಿಂದ ಚೇತರಿಕೆ ಕಂಡವರ ಸಂಖ್ಯೆ 11,045,284ಕ್ಕೆ ತಲುಪಿದೆ. ಮಂಗಳವಾರದವರೆಗೆ ಒಟ್ಟು 3.50 ಕೋಟಿ ಡೋಸ್​ ಲಸಿಕೆ ವಿತರಣೆ ಆಗಿದೆ ಎಂದೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರೈತ ಹೋರಾಟಕ್ಕೆ ಎಷ್ಟು ದಿನ? ಮಾರ್ಚ್ 6ರಂದು ಐತಿಹಾಸಿಕ ದೆಹಲಿ ಚಲೋ ಚಳವಳಿಗೆ ಭರ್ತಿ ನೂರು ದಿನ ತುಂಬಿದೆ. ಪಂಜಾಬ್​ನ ಚಿಕ್ಕ ಹಳ್ಳಿಯಿಂದ ಆರಂಭವಾದ ರೈತರ ಚಳವಳಿ ದೇಶದ ರಾಜಧಾನಿ ತಲುಪಿದಾಗ ದೇಶದೆಲ್ಲೆಡೆ ಬೆಂಬಲ ವ್ಯಕ್ತವಾಗಿತ್ತು. ಆದರೆ ನಂತರ ನಡೆದ ಗಲಾಟೆಗಳಿಂದ ಚಳವಳಿಯ ದಿಕ್ಕೇ ಬದಲಾಯಿತು. ದೆಹಲಿ ಚಲೋದ ಮುಂದುವರೆದ ಭಾಗವಾಗಿ ದೇಶದ ವಿವಿಧ ಸ್ಥಳಗಳಲ್ಲಿ ಕಿಸಾನ್ ಮಹಾ ಪಂಚಾಯತ್  (Kisan Mahapanchayat) ನಡೆಯುತ್ತಿದೆ. ಅದರ ಅಂಗವಾಗಿ ಕರ್ನಾಟಕದ ಮೂರು ಕಡೆ ಕಿಸಾನ್ ಪಂಚಾಯತ್ ನಡೆಸಲು ದೆಹಲಿ ಚಲೋ ವರಿಷ್ಠರು ತೀರ್ಮಾನಿಸಿದ್ದರು.

ನೂರಾರು ರೈತ ಹೋರಾಟಗಾರರು ದೆಹಲಿಯ ಗಡಿಗಳಲ್ಲಿ ವಸತಿ ಹೂಡಿರುವುದರಿಂದ ಸಹಜವಾಗಿ ಕೊರೊನಾತಂಕ ಹೆಚ್ಚುತ್ತಿದೆ.  ಎರಡನೇ ಅಲೆಯ ಭೀತಿಯ ಕಾರಣದಿಂದ ಕೊರೊನಾ ಲಸಿಕೆ ಪಡೆಯುವತ್ತ ರೈತ ಹೋರಾಟಗಾರರ ಚಿತ್ತ ಹರಿದಿದೆ.

ಇದನ್ನೂ ಓದಿ: Delhi Chalo: ದೆಹಲಿ ಚಲೋಗೆ ನೂರು ದಿನ; ಕರ್ನಾಟಕದಲ್ಲೂ ನಡೆಯಲಿದೆ ರೈತ ಪಂಚಾಯತ್, ಬರ್ತಾರೆ ರಾಕೇಶ್ ಟಿಕಾಯತ್

ವ್ಯಕ್ತಿ-ವ್ಯಕ್ತಿತ್ವ | ರೈತ ಹೋರಾಟದ ಹಿಂದಿನ ಶಕ್ತಿ ರಾಕೇಶ್ ಟಿಕಾಯತ್

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್