AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Dhun: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಗುಜರಾತ್​ನಲ್ಲಿ ವಿಶೇಷ ಕಾರ್ಯಕ್ರಮ; 7100 ಹಳ್ಳಿಗಳಲ್ಲಿ ನಡೆಯಲಿದೆ ರಾಮ್​ ಧುನ್​

ಸೆಪ್ಟೆಂಬರ್​ 17ರಂದು ಸಂಜೆ 7ಗಂಟೆಗೆ ಗುಜರಾತ್​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ ನಡೆಯಿಲಿದೆ ಎಂದು ಬಿಜೆಪಿ ಗುಜರಾತ್​ ರಾಜ್ಯಾಧ್ಯಕ್ಷ ಸಿ.ಆರ್​.ಪಾಟೀಲ್​ ಹೇಳಿದ್ದಾರೆ.

Ram Dhun: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಗುಜರಾತ್​ನಲ್ಲಿ ವಿಶೇಷ ಕಾರ್ಯಕ್ರಮ; 7100 ಹಳ್ಳಿಗಳಲ್ಲಿ ನಡೆಯಲಿದೆ ರಾಮ್​ ಧುನ್​
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Aug 25, 2021 | 6:09 PM

Share

ಈ ಬಾರಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಜನ್ಮದಿನದ ಹಿನ್ನೆಲೆಯಲ್ಲಿ ಗುಜರಾತ್​ ಬಿಜೆಪಿ ಒಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಸೆಪ್ಟೆಂಬರ್​ 17ರಂದು ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬ ಆಚರಣೆ ನಡೆಯಲಿದ್ದು, ಆ ದಿನ ಗುಜರಾತ್ (Gujarat)​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ (Ram Dhun Programmes) ನಡೆಯಲಿದೆ ಎಂದು ಬಿಜೆಪಿ ಗುಜರಾತ್​ ರಾಜ್ಯಾಧ್ಯಕ್ಷ ಸಿ.ಆರ್​.ಪಾಟೀಲ್​ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಸಿ.ಆರ್​.ಪಾಟೀಲ್​, ಈ ರಾಮ್​ ಧುನ್​ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್​ 17ರಂದು ಸಂಜೆ 7ಗಂಟೆಗೆ ಗುಜರಾತ್​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ ನಡೆಯಿಲಿದೆ. ಪ್ರತಿ ಬೂತ್​​ನಲ್ಲಿ ಜನರು ಹೆಚ್ಚೆಚ್ಚು ನಮೋ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು ಮತ್ತು ಪ್ರಧಾನಮಂತ್ರಿ ವಿಮಾ ಸುರಕ್ಷಾ ಯೋಜನೆಗೆ ಸೇರ್ಪಡೆಯಾಗುವಂತೆ ಮಾಡುವ ಉದ್ದೇಶ ಈ ರಾಮ್​ ಧುನ್​ ಕಾರ್ಯಕ್ರಮದ್ದು. ಅದರಂತೆ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ಕನಿಷ್ಠ 50 ಮಂದಿ ಫೋನ್​​ನಲ್ಲಿ ನಮೋ ಆ್ಯಪ್​ ಡೌನ್​ಲೋಡ್ ಮಾಡಿಕೊಳ್ಳುವಂತೆ ಮಾಡಬೇಕು ಮತ್ತು ಕನಿಷ್ಠ 10 ಮಂದಿಯನ್ನಾದರೂ ವಿಮಾ ಸುರಕ್ಷಾ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಹೇಳಲಾಗಿದೆ. ಇದು ಪ್ರತಿ ಬೂತ್​​ನಲ್ಲಿಯೂ ನಡೆಯಬೇಕು ಎಂದು ಸಿ.ಆರ್.ಪಾಟೀಲ್​ ಹೇಳಿದ್ದಾರೆ.

ಈ ಬಾರಿ 71ರ ಸಂಭ್ರಮ ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟಿದ್ದು ಸೆಪ್ಟೆಂಬರ್​ 17, 1950ರಂದು ವಡೋದರಾದಲ್ಲಿ. 1972ರಲ್ಲಿ ಆರ್​ಎಸ್​ಎಸ್​ ಸೇರುವ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. ನಂತರ 1987ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 1995ರಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾದರು ಮತ್ತು 1998ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಿದರು. 2001ರಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದ ಅವರು, ನಂತರ ಮೂರು ಅವಧಿಗೆ ಗುಜರಾತ್​ ಮುಖ್ಯಮಂತ್ರಿಯಾಗಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಮೋದಿಯವರೇ ಪ್ರಧಾನಿ ಅಭ್ಯರ್ಥಿ ಎಂದು 2013ರಲ್ಲಿ ಬಿಜೆಪಿ ಘೋಷಿಸಿತ್ತು. ಅದರಂತೆ 2014ರಲ್ಲಿ ಭರ್ಜರಿ ಗೆಲುವಿನೊಂದಿಗೆ ಪ್ರಧಾನಿ ಹುದ್ದೆಗೆ ಏರಿದ ನರೇಂದ್ರ ಮೋದಿಯವರು ಇದೀಗ 2019ರಲ್ಲೂ ಮತ್ತೆ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಈ ಬಾರಿ 71ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನಮ್ಮ ಕನ್ನಡದ ಹುಡುಗ ಯಶ್ ಅಫಘಾನಿಸ್ತಾನದ ಪಂಜಶೀರ್ ಯೋಧರಿಗೂ ಪ್ರೇರಣೆಯಾಗಿದ್ದಾರೆಯೇ?

ಕಾಂಗ್ರೆಸ್ ದೇಶದ ಸಂಪನ್ಮೂಲಗಳನ್ನು ಮಾರಿ ಕಿಕ್ ಬ್ಯಾಕ್ ಪಡೆದಿತ್ತು: ನಿರ್ಮಲಾ ಸೀತಾರಾಮನ್

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ