Ram Dhun: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಗುಜರಾತ್​ನಲ್ಲಿ ವಿಶೇಷ ಕಾರ್ಯಕ್ರಮ; 7100 ಹಳ್ಳಿಗಳಲ್ಲಿ ನಡೆಯಲಿದೆ ರಾಮ್​ ಧುನ್​

ಸೆಪ್ಟೆಂಬರ್​ 17ರಂದು ಸಂಜೆ 7ಗಂಟೆಗೆ ಗುಜರಾತ್​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ ನಡೆಯಿಲಿದೆ ಎಂದು ಬಿಜೆಪಿ ಗುಜರಾತ್​ ರಾಜ್ಯಾಧ್ಯಕ್ಷ ಸಿ.ಆರ್​.ಪಾಟೀಲ್​ ಹೇಳಿದ್ದಾರೆ.

Ram Dhun: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಗುಜರಾತ್​ನಲ್ಲಿ ವಿಶೇಷ ಕಾರ್ಯಕ್ರಮ; 7100 ಹಳ್ಳಿಗಳಲ್ಲಿ ನಡೆಯಲಿದೆ ರಾಮ್​ ಧುನ್​
ಪ್ರಧಾನಿ ನರೇಂದ್ರ ಮೋದಿ
Follow us
| Updated By: Lakshmi Hegde

Updated on: Aug 25, 2021 | 6:09 PM

ಈ ಬಾರಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಜನ್ಮದಿನದ ಹಿನ್ನೆಲೆಯಲ್ಲಿ ಗುಜರಾತ್​ ಬಿಜೆಪಿ ಒಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಸೆಪ್ಟೆಂಬರ್​ 17ರಂದು ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬ ಆಚರಣೆ ನಡೆಯಲಿದ್ದು, ಆ ದಿನ ಗುಜರಾತ್ (Gujarat)​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ (Ram Dhun Programmes) ನಡೆಯಲಿದೆ ಎಂದು ಬಿಜೆಪಿ ಗುಜರಾತ್​ ರಾಜ್ಯಾಧ್ಯಕ್ಷ ಸಿ.ಆರ್​.ಪಾಟೀಲ್​ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಸಿ.ಆರ್​.ಪಾಟೀಲ್​, ಈ ರಾಮ್​ ಧುನ್​ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್​ 17ರಂದು ಸಂಜೆ 7ಗಂಟೆಗೆ ಗುಜರಾತ್​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ ನಡೆಯಿಲಿದೆ. ಪ್ರತಿ ಬೂತ್​​ನಲ್ಲಿ ಜನರು ಹೆಚ್ಚೆಚ್ಚು ನಮೋ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು ಮತ್ತು ಪ್ರಧಾನಮಂತ್ರಿ ವಿಮಾ ಸುರಕ್ಷಾ ಯೋಜನೆಗೆ ಸೇರ್ಪಡೆಯಾಗುವಂತೆ ಮಾಡುವ ಉದ್ದೇಶ ಈ ರಾಮ್​ ಧುನ್​ ಕಾರ್ಯಕ್ರಮದ್ದು. ಅದರಂತೆ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ಕನಿಷ್ಠ 50 ಮಂದಿ ಫೋನ್​​ನಲ್ಲಿ ನಮೋ ಆ್ಯಪ್​ ಡೌನ್​ಲೋಡ್ ಮಾಡಿಕೊಳ್ಳುವಂತೆ ಮಾಡಬೇಕು ಮತ್ತು ಕನಿಷ್ಠ 10 ಮಂದಿಯನ್ನಾದರೂ ವಿಮಾ ಸುರಕ್ಷಾ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಹೇಳಲಾಗಿದೆ. ಇದು ಪ್ರತಿ ಬೂತ್​​ನಲ್ಲಿಯೂ ನಡೆಯಬೇಕು ಎಂದು ಸಿ.ಆರ್.ಪಾಟೀಲ್​ ಹೇಳಿದ್ದಾರೆ.

ಈ ಬಾರಿ 71ರ ಸಂಭ್ರಮ ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟಿದ್ದು ಸೆಪ್ಟೆಂಬರ್​ 17, 1950ರಂದು ವಡೋದರಾದಲ್ಲಿ. 1972ರಲ್ಲಿ ಆರ್​ಎಸ್​ಎಸ್​ ಸೇರುವ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. ನಂತರ 1987ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 1995ರಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾದರು ಮತ್ತು 1998ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಿದರು. 2001ರಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದ ಅವರು, ನಂತರ ಮೂರು ಅವಧಿಗೆ ಗುಜರಾತ್​ ಮುಖ್ಯಮಂತ್ರಿಯಾಗಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಮೋದಿಯವರೇ ಪ್ರಧಾನಿ ಅಭ್ಯರ್ಥಿ ಎಂದು 2013ರಲ್ಲಿ ಬಿಜೆಪಿ ಘೋಷಿಸಿತ್ತು. ಅದರಂತೆ 2014ರಲ್ಲಿ ಭರ್ಜರಿ ಗೆಲುವಿನೊಂದಿಗೆ ಪ್ರಧಾನಿ ಹುದ್ದೆಗೆ ಏರಿದ ನರೇಂದ್ರ ಮೋದಿಯವರು ಇದೀಗ 2019ರಲ್ಲೂ ಮತ್ತೆ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಈ ಬಾರಿ 71ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನಮ್ಮ ಕನ್ನಡದ ಹುಡುಗ ಯಶ್ ಅಫಘಾನಿಸ್ತಾನದ ಪಂಜಶೀರ್ ಯೋಧರಿಗೂ ಪ್ರೇರಣೆಯಾಗಿದ್ದಾರೆಯೇ?

ಕಾಂಗ್ರೆಸ್ ದೇಶದ ಸಂಪನ್ಮೂಲಗಳನ್ನು ಮಾರಿ ಕಿಕ್ ಬ್ಯಾಕ್ ಪಡೆದಿತ್ತು: ನಿರ್ಮಲಾ ಸೀತಾರಾಮನ್

ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​