AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Dhun: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಗುಜರಾತ್​ನಲ್ಲಿ ವಿಶೇಷ ಕಾರ್ಯಕ್ರಮ; 7100 ಹಳ್ಳಿಗಳಲ್ಲಿ ನಡೆಯಲಿದೆ ರಾಮ್​ ಧುನ್​

ಸೆಪ್ಟೆಂಬರ್​ 17ರಂದು ಸಂಜೆ 7ಗಂಟೆಗೆ ಗುಜರಾತ್​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ ನಡೆಯಿಲಿದೆ ಎಂದು ಬಿಜೆಪಿ ಗುಜರಾತ್​ ರಾಜ್ಯಾಧ್ಯಕ್ಷ ಸಿ.ಆರ್​.ಪಾಟೀಲ್​ ಹೇಳಿದ್ದಾರೆ.

Ram Dhun: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಗುಜರಾತ್​ನಲ್ಲಿ ವಿಶೇಷ ಕಾರ್ಯಕ್ರಮ; 7100 ಹಳ್ಳಿಗಳಲ್ಲಿ ನಡೆಯಲಿದೆ ರಾಮ್​ ಧುನ್​
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Aug 25, 2021 | 6:09 PM

Share

ಈ ಬಾರಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಜನ್ಮದಿನದ ಹಿನ್ನೆಲೆಯಲ್ಲಿ ಗುಜರಾತ್​ ಬಿಜೆಪಿ ಒಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಸೆಪ್ಟೆಂಬರ್​ 17ರಂದು ನರೇಂದ್ರ ಮೋದಿಯವರ 71ನೇ ಹುಟ್ಟುಹಬ್ಬ ಆಚರಣೆ ನಡೆಯಲಿದ್ದು, ಆ ದಿನ ಗುಜರಾತ್ (Gujarat)​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ (Ram Dhun Programmes) ನಡೆಯಲಿದೆ ಎಂದು ಬಿಜೆಪಿ ಗುಜರಾತ್​ ರಾಜ್ಯಾಧ್ಯಕ್ಷ ಸಿ.ಆರ್​.ಪಾಟೀಲ್​ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಸಿ.ಆರ್​.ಪಾಟೀಲ್​, ಈ ರಾಮ್​ ಧುನ್​ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್​ 17ರಂದು ಸಂಜೆ 7ಗಂಟೆಗೆ ಗುಜರಾತ್​ನ ಸುಮಾರು 7100 ಹಳ್ಳಿಗಳಲ್ಲಿ ರಾಮ್​ ಧುನ್​ ಕಾರ್ಯಕ್ರಮ ನಡೆಯಿಲಿದೆ. ಪ್ರತಿ ಬೂತ್​​ನಲ್ಲಿ ಜನರು ಹೆಚ್ಚೆಚ್ಚು ನಮೋ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು ಮತ್ತು ಪ್ರಧಾನಮಂತ್ರಿ ವಿಮಾ ಸುರಕ್ಷಾ ಯೋಜನೆಗೆ ಸೇರ್ಪಡೆಯಾಗುವಂತೆ ಮಾಡುವ ಉದ್ದೇಶ ಈ ರಾಮ್​ ಧುನ್​ ಕಾರ್ಯಕ್ರಮದ್ದು. ಅದರಂತೆ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ಕನಿಷ್ಠ 50 ಮಂದಿ ಫೋನ್​​ನಲ್ಲಿ ನಮೋ ಆ್ಯಪ್​ ಡೌನ್​ಲೋಡ್ ಮಾಡಿಕೊಳ್ಳುವಂತೆ ಮಾಡಬೇಕು ಮತ್ತು ಕನಿಷ್ಠ 10 ಮಂದಿಯನ್ನಾದರೂ ವಿಮಾ ಸುರಕ್ಷಾ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಹೇಳಲಾಗಿದೆ. ಇದು ಪ್ರತಿ ಬೂತ್​​ನಲ್ಲಿಯೂ ನಡೆಯಬೇಕು ಎಂದು ಸಿ.ಆರ್.ಪಾಟೀಲ್​ ಹೇಳಿದ್ದಾರೆ.

ಈ ಬಾರಿ 71ರ ಸಂಭ್ರಮ ಪ್ರಧಾನಿ ನರೇಂದ್ರ ಮೋದಿಯವರು ಹುಟ್ಟಿದ್ದು ಸೆಪ್ಟೆಂಬರ್​ 17, 1950ರಂದು ವಡೋದರಾದಲ್ಲಿ. 1972ರಲ್ಲಿ ಆರ್​ಎಸ್​ಎಸ್​ ಸೇರುವ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. ನಂತರ 1987ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 1995ರಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾದರು ಮತ್ತು 1998ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಿದರು. 2001ರಲ್ಲಿ ಮೊದಲ ಬಾರಿಗೆ ಗುಜರಾತ್​ ಮುಖ್ಯಮಂತ್ರಿಯಾದ ಅವರು, ನಂತರ ಮೂರು ಅವಧಿಗೆ ಗುಜರಾತ್​ ಮುಖ್ಯಮಂತ್ರಿಯಾಗಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಮೋದಿಯವರೇ ಪ್ರಧಾನಿ ಅಭ್ಯರ್ಥಿ ಎಂದು 2013ರಲ್ಲಿ ಬಿಜೆಪಿ ಘೋಷಿಸಿತ್ತು. ಅದರಂತೆ 2014ರಲ್ಲಿ ಭರ್ಜರಿ ಗೆಲುವಿನೊಂದಿಗೆ ಪ್ರಧಾನಿ ಹುದ್ದೆಗೆ ಏರಿದ ನರೇಂದ್ರ ಮೋದಿಯವರು ಇದೀಗ 2019ರಲ್ಲೂ ಮತ್ತೆ ಪ್ರಧಾನಿ ಗದ್ದುಗೆಗೆ ಏರಿದ್ದಾರೆ. ಈ ಬಾರಿ 71ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ನಮ್ಮ ಕನ್ನಡದ ಹುಡುಗ ಯಶ್ ಅಫಘಾನಿಸ್ತಾನದ ಪಂಜಶೀರ್ ಯೋಧರಿಗೂ ಪ್ರೇರಣೆಯಾಗಿದ್ದಾರೆಯೇ?

ಕಾಂಗ್ರೆಸ್ ದೇಶದ ಸಂಪನ್ಮೂಲಗಳನ್ನು ಮಾರಿ ಕಿಕ್ ಬ್ಯಾಕ್ ಪಡೆದಿತ್ತು: ನಿರ್ಮಲಾ ಸೀತಾರಾಮನ್

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು