AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ; ಆಮಂತ್ರಣ ಪತ್ರಿಕೆ ವಿಡಿಯೊ ನೋಡಿ

ಜನವರಿ 15 ರಂದು ಮಕರ ಸಂಕ್ರಾಂತಿಯ ನಂತರ ಶ್ರೀರಾಮನ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಜನವರಿ 16 ರಂದು, ಸಮಾರಂಭವು ಸರಯೂ ನದಿಯ ದಡವನ್ನು ಮುಟ್ಟುವ ಮೂಲಕ ಪ್ರಾರಂಭವಾಗುತ್ತದ. ವಿಷ್ಣು ಪೂಜೆಯೂ ಗೋದಾನವೂ ಇಲ್ಲಿ ನಡೆಯಲಿದೆ. ಜನವರಿ 17 ರಂದು, ರಾಮನ ವಿಗ್ರಹವನ್ನು ನಗರ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಗುವುದು

ಭವ್ಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ; ಆಮಂತ್ರಣ ಪತ್ರಿಕೆ ವಿಡಿಯೊ ನೋಡಿ
ರಾಮಮಂದಿರದ ಉದ್ಘಾಟನೆಯ ಆಮಂತ್ರಣಾ ಪತ್ರ
ರಶ್ಮಿ ಕಲ್ಲಕಟ್ಟ
|

Updated on:Jan 04, 2024 | 1:56 PM

Share

ದೆಹಲಿ ಜನವರಿ 03: ಜನವರಿ 22, 2024 ರಂದು ಅಯೋಧ್ಯೆಯಲ್ಲಿ (Ayodhya) ರಾಮ ಮಂದಿರದ (Ram Mandir) ಉದ್ಘಾಟನೆ ನಡೆಯಲಿದೆ. ಶುಭ ಮುಹೂರ್ತದಂತೆ ಮಧ್ಯಾಹ್ನ 12.20ರ ಸುಮಾರಿಗೆ ರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಜನವರಿ 24 ರಿಂದ ಭಕ್ತರು ದೇವಾಲಯಕ್ಕೆ ಭೇಟಿ ನೀಡಲು ಅವಕಾಶವಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmbhoomi Teerth Kshetra trust)ಪ್ರಕಾರ, ಎಲ್ಲಾ ಸಂಪ್ರದಾಯಗಳ ಪೂಜ್ಯ ಸಂತರಿಗೆ ಆಹ್ವಾನಗಳನ್ನು ನೀಡಲಾಯಿತು.

ಈಗ ಆಮಂತ್ರಣ ಪತ್ರಿಕೆಯ ವಿಡಿಯೊವನ್ನು ದೂರದರ್ಶನ ಎಕ್ಸ್ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಕಾರ್ಡ್‌ನ ಮೊದಲ ಪುಟವು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಟೈಮ್‌ಲೈನ್ ಮತ್ತು ಹಂತಗಳ ಬಗ್ಗೆ ವಿವರಗಳೊಂದಿಗೆ ಭವ್ಯ ರಾಮಮಂದಿರದಲ್ಲಿನ ನಿಜವಾದ ನೆಲೆಗೆ ರಾಮಲಲ್ಲಾನನ್ನು ಕರೆತರುವ ಶುಭ ಸಮಾರಂಭ ಎಂದು ಆಮಂತ್ರಣ ಪತ್ರದಲ್ಲಿ ಬರೆಯಲಾಗಿದೆ.

ಜನವರಿ 15 ರಂದು, ಮಕರ ಸಂಕ್ರಾಂತಿಯ ನಂತರ ಶ್ರೀರಾಮನ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಜನವರಿ 16 ರಂದು, ಸಮಾರಂಭವು ಸರಯೂ ನದಿಯ ದಡವನ್ನು ಮುಟ್ಟುವ ಮೂಲಕ ಪ್ರಾರಂಭವಾಗುತ್ತದ. “ವಿಷ್ಣು ಪೂಜೆಯೂ ಗೋದಾನವೂ ಇಲ್ಲಿ ನಡೆಯಲಿದೆ. ಜನವರಿ 17 ರಂದು, ರಾಮನ ವಿಗ್ರಹವನ್ನು ನಗರ ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಗುವುದು. ಜನವರಿ 18 ರಂದು, ಮಂಡಪ ಪ್ರವೇಶ ಪೂಜೆ, ವಾಸ್ತು ಪೂಜೆ, ವರುಣ ಪೂಜೆ, ವಿಘ್ನಹರ್ತ ಗಣೇಶ ಪೂಜೆ, ಮತ್ತು ಮಾರ್ತಿಕ ಪೂಜೆ ಸೇರಿದಂತೆ ಪ್ರಾಣ-ಪ್ರತಿಷ್ಠಾ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಜನವರಿ 19 ರಂದು ರಾಮಮಂದಿರದಲ್ಲಿ ಯಜ್ಞ ಅಗ್ನಿಕುಂಡ ನಡೆಯಲಿದ್ದು, ವಿಶೇಷ ಧಾರ್ಮಿಕ ವಿಧಿವಿಧಾನದಿಂದ ಪವಿತ್ರ ಅಗ್ನಿಯನ್ನು ಹೊತ್ತಿಸಲಾಗುವುದು. ನವ ಗ್ರಹ ಶಾಂತಿ ಹವನ ನಡೆಯಲಿದೆ. ಜನವರಿ 20 ರಂದು, ರಾಮಮಂದಿರದ ಗರ್ಭಗುಡಿಯನ್ನು 81 ಕಲಶಗಳೊಂದಿಗೆ ಪವಿತ್ರಗೊಳಿಸಲಾಗುವುದು, ಇದರಲ್ಲಿ ಭಾರತದ ವಿವಿಧ ಪವಿತ್ರ ನದಿಗಳಿಂದ ಸಂಗ್ರಹಿಸಲಾಗುತ್ತದೆ. ಜನವರಿ 21 ರಂದು, ಹವನಗಳ ನಡುವೆ, ಶ್ರೀರಾಮನು 125 ಕಲಶಗಳೊಂದಿಗೆ ದೈವಿಕ ಸ್ನಾನವನ್ನು ಮಾಡುತ್ತಾನೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಕೊಪ್ಪಳ ಯುವಕ; ಕುಟುಂಬ, ಜಿಲ್ಲೆಯ ಜನರಲ್ಲಿ ಮನೆ ಮಾಡಿದ ಸಂತಸ

ವರದಿಗಳ ಪ್ರಕಾರ ಪ್ರಾಣ ಪ್ರತಿಷ್ಠೆ ಸಮಾರಂಭದ ಸುಮಾರು 6,000 ಆಮಂತ್ರಣ ಕಾರ್ಡ್‌ಗಳನ್ನು ಪ್ರಮುಖ ವ್ಯಕ್ತಿಗಳಿಗೆ ಕಳುಹಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯುಪಿ ಗವರ್ನರ್ ಆನಂದಿಬೆನ್ ಪಟೇಲ್ ಸೇರಿದಂತೆ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಹ್ವಾನ ಪಡೆದ ಪ್ರಮುಖ ವ್ಯಕ್ತಿಗಳಲ್ಲಿ ಚಲನಚಿತ್ರ ತಾರೆಯರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್, ಅನುಪಮ್ ಖೇರ್, ಅಕ್ಷಯ್ ಕುಮಾರ್, ನಿರ್ದೇಶಕರಾದ ರಾಜ್‌ಕುಮಾರ್ ಹಿರಾನಿ, ಸಂಜಯ್ ಲೀಲಾ ಬನ್ಸಾಲಿ, ರೋಹಿತ್ ಶೆಟ್ಟಿ ಸೇರಿದಂತೆ ಇತರರು ಸೇರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Thu, 4 January 24

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ