AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹ್ವಾನಿತರು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಬೇಕು: ಸಂಜಯ್ ರಾವತ್

ರಾಮ ಬಿಜೆಪಿಯ ಖಾಸಗಿ ಆಸ್ತಿಯಲ್ಲ. ರಾಮ ಎಲ್ಲರಿಗೂ ಸೇರಿದವನು. ಆಹ್ವಾನಿತರು ಮತ್ತು ಇಲ್ಲದವರೂ ಸಹ ಎಲ್ಲರೂ ಭೇಟಿ ನೀಡಬೇಕು. ಆಹ್ವಾನ ನೀಡಲು ಅವರು (ಬಿಜೆಪಿ) ಯಾರು? ಅವರು ಅಯೋಧ್ಯೆಯಲ್ಲಿ ಬಿಜೆಪಿ ಕಚೇರಿಯನ್ನು ನಿರ್ಮಿಸಿದ್ದಾರೆಯೇ? ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಕೇಳಿದ್ದಾರೆ.

ಆಹ್ವಾನಿತರು ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಬೇಕು: ಸಂಜಯ್ ರಾವತ್
ಸಂಜಯ್ ರಾವತ್
ರಶ್ಮಿ ಕಲ್ಲಕಟ್ಟ
|

Updated on: Jan 15, 2024 | 1:59 PM

Share

ಮುಂಬೈ ಜನವರಿ 15: ರಾಮ ಮಂದಿರದ (Ram mandir) ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್‌ನ (Congress) ಉನ್ನತ ನಾಯಕರು ನಿರಾಕರಿಸಿದ ಕೆಲವು ದಿನಗಳ ನಂತರ, ಶಿವಸೇನಾ(ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ (Sanjay Raut) ಸೋಮವಾರ, ಆಹ್ವಾನ ಪಡೆದವರು ಜನವರಿ 22 ರಂದು ಅಯೋಧ್ಯೆಗೆ ಭೇಟಿ ನೀಡಬೇಕು ಎಂದು ಹೇಳಿದ್ದಾರೆ. ಆಹ್ವಾನಿತರು ರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಭೇಟಿ ನೀಡಬೇಕು ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ರಾವತ್ ಹೇಳಿದ್ದಾರೆ.

ರಾಮ ಬಿಜೆಪಿಯ ಖಾಸಗಿ ಆಸ್ತಿಯಲ್ಲ. ರಾಮ ಎಲ್ಲರಿಗೂ ಸೇರಿದವನು. ಆಹ್ವಾನಿತರು ಮತ್ತು ಇಲ್ಲದವರೂ ಸಹ ಎಲ್ಲರೂ ಭೇಟಿ ನೀಡಬೇಕು. ಆಹ್ವಾನ ನೀಡಲು ಅವರು (ಬಿಜೆಪಿ) ಯಾರು? ಅವರು ಅಯೋಧ್ಯೆಯಲ್ಲಿ ಬಿಜೆಪಿ ಕಚೇರಿಯನ್ನು ನಿರ್ಮಿಸಿದ್ದಾರೆಯೇ? ಎಂದು ರಾವತ್ ಕೇಳಿದ್ದಾರೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಕಳೆದ ವಾರ ಹೇಳಿತ್ತು. ಇದು ಆರ್‌ಎಸ್‌ಎಸ್ / ಬಿಜೆಪಿ ಕಾರ್ಯಕ್ರಮ ಎಂದು ಹೇಳಿ ಕಾಂಗ್ರೆಸ್ ಆಹ್ವಾನ ನಿರಾಕರಿಸಿತ್ತು.

“ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧವಾಗಿರುವಾಗ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುತ್ತೇವೆ.ಆದರೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಶ್ರೀ ಅಧೀರ್ ರಂಜನ್ ಚೌಧರಿ ಅವರು ಆರೆಸ್ಸೆಸ್/ಬಿಜೆಪಿ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ನಿರಾಕರಿಸಿರುತ್ತಾರೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿರಾಮ ನನ್ನ ಕನಸಿನಲ್ಲಿ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದು ಹೇಳಿದ್ರು: ತೇಜ್ ಪ್ರತಾಪ್ ಯಾದವ್

ಈ ಮಧ್ಯೆ, ಜನವರಿ 22 ರಂದು ನಾಸಿಕ್‌ನ  ಕಾಲಾರಾಮ್ ದೇವಸ್ಥಾನದಲ್ಲಿ ಭಗವಾನ್ ರಾಮನ ಪೂಜೆಯಲ್ಲಿ ಪಾಲ್ಗೊಳ್ಳಲು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ಆಹ್ವಾನವನ್ನು ನೀಡಿದ್ದಾರೆ. ಶಿವಸೇನಾ (ಯುಬಿಟಿ) ಆರತಿಯನ್ನು ಮಾಡಲಿದೆ ಎಂದು ಠಾಕ್ರೆ ಹೇಳಿದರು. ಗೋದಾವರಿ ನದಿ ಮತ್ತು ನಾಸಿಕ್‌ನಲ್ಲಿ ಪಕ್ಷದ ಕಾರ್ಯಕರ್ತರ ರ‍್ಯಾಲಿ ನಡೆಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ