AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯಾ ರಾಮ ಜನ್ಮಭೂಮಿಯನ್ನೂ ಮೆಕ್ಕಾ ಮಾದರಿಯಲ್ಲೇ ಅಭಿವೃದ್ಧಿಗೊಳಿಸಲಾಗುವುದು ಎಂದು ವಿಎಚ್​ಪಿ ಮುಖ್ಯಸ್ಥ

ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯ ಪಡೆಯಲು ಕಾರಣವಾಗಿದ್ದು ಈ ರಾಮಮಂದಿರ ಚಳವಳಿ ಎಂದು ವಿಎಚ್​ಪಿ ನಾಯಕ ಸುರೇಂರ

ಅಯೋಧ್ಯಾ ರಾಮ ಜನ್ಮಭೂಮಿಯನ್ನೂ ಮೆಕ್ಕಾ ಮಾದರಿಯಲ್ಲೇ ಅಭಿವೃದ್ಧಿಗೊಳಿಸಲಾಗುವುದು ಎಂದು ವಿಎಚ್​ಪಿ ಮುಖ್ಯಸ್ಥ
ಶ್ರೀರಾಮ ಮಂದಿರ
TV9 Web
| Edited By: |

Updated on:Dec 13, 2021 | 10:01 AM

Share

ನಾಗ್ಪುರ: ಅಯೋಧ್ಯಾ ರಾಮಜನ್ಮಭೂಮಿ ತೀರ್ಥ ಕ್ಷೇತ್ರವನ್ನೂ ಕೂಡ ವ್ಯಾಟಿಕನ್ ನಗರ ಮತ್ತು ಮೆಕ್ಕಾ ಮಾದರಿಯಲ್ಲೇ ಅಭಿವೃದ್ಧಿಗೊಳಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್​ (VHP) ಅಧ್ಯಕ್ಷ ರಬೀಂದ್ರ ನಾರಾಯಣ್​ ಸಿಂಗ್ ಹೇಳಿದ್ದಾರೆ. ನಾಗ್ಪುರದಲ್ಲಿ ವಿಎಚ್​ಪಿ ಕಾರ್ಯಕರ್ತರು ಮತ್ತು ಸಂತರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮ ಜನ್ಮಭೂಮಿ ಮತ್ತು ರಾಮಮಂದಿರಗಳು ಹಿಂದುತ್ವದ ಸಂಕೇತವಾಗಿದೆ ಎಂದು ಹೇಳಿದರು. ಇವರು ಉಲ್ಲೇಖಿಸಿದ ಮೆಕ್ಕಾ, ಇಸ್ಲಾಂ ಧರ್ಮೀಯರ ಪವಿತ್ರ ಸ್ಥಳವಾಗಿದ್ದು, ವ್ಯಾಟಿಕನ್ ನಗರವೆಂಬುದು ರೋಮನ್ ಕ್ಯಾಥೋಲಿಕ್​ ಚರ್ಚ್​​ಗಳ ಪ್ರಧಾನ ಕಚೇರಿಯಾಗಿದೆ.  

ಹಾಗೇ, ಇನ್ನೊಂದು ಸಮಾರಂಭದಲ್ಲಿ ಮಾತನಾಡಿದ್ದ  ವಿಎಚ್​ಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಸುರೇಂದ್ರ ಜೈನ್​,  ಭಾರತಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯ ಪಡೆಯಲು ಕಾರಣವಾಗಿದ್ದು ಈ ರಾಮಮಂದಿರ ಚಳವಳಿ. ದೇಶವನ್ನು ವಿಭಜಿಸಿದ್ದು ಜಾತ್ಯತೀತ ರಾಜಕಾರಣ ಎಂದು ಹೇಳಿದ್ದಾರೆ.  ಇದೇ ವೇಳೆ ರಾಹುಲ್ ಗಾಂಧಿಯವರ ವಿರುದ್ಧ ಹರಿಹಾಯ್ದ ಸುರೇಂದ್ರ ಜೈನ್​, ಭಾರತದ ರಾಜಕಾರಣದಲ್ಲಿಯೇ ರಾಹುಲ್​ ಗಾಂಧಿ ಅತ್ಯಂತ ಗೊಂದಲಮಯ ನಾಯಕ ಎಂದಿದ್ದಾರೆ. ಅವರು ಏನು ಮಾತನಾಡುತ್ತಾರೆ? ಯಾವ ಅರ್ಥದಲ್ಲಿ ಮಾತಾಡುತ್ತಾರೆ ಎಂಬುದು ಯಾರಿಗೂ ಅರ್ಥವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಯವರು ಇತ್ತೀಚೆಗಷ್ಟೇ ಜೈಪುರಕ್ಕೆ ಭೇಟಿ ನೀಡಿದ್ದಾಗ, ಈ ದೇಶ ಹಿಂದುಗಳದ್ದು ಹೊರತಾಗಿ ಹಿಂದುತ್ವವಾದಿಗಳದ್ದಲ್ಲ ಎಂದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸುರೇಂದ್ರ ಜೈನ್​ ಹೀಗೆ ತಿರುಗೇಟು ನೀಡಿದ್ದಾರೆ.

ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ಒಂದೆಡೆ ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದರೆ, ಇನ್ನೊಂದೆಡೆ ಇಂದು ವಾರಾಣಸಿಯಲ್ಲಿ ಪ್ರಧಾನಿ ಮೋದಿಯವರು ಕಾಶಿ ವಿಶ್ವನಾಥ ಕಾರಿಡಾರ್​ ಉದ್ಘಾಟನೆ ಮಾಡಲಿದ್ದಾರೆ. ವಾಸ್ತುಶಿಲ್ಪಿ ಭೀಮಲ್ ಪಟೇಲ್ ಅವರಿಂದ ಕಾರಿಡಾರ್ ವಿನ್ಯಾಸ ಮಾಡಲಾಗಿದೆ. ಈ ಕಾರಿಡಾರ್ನಿಂದ ಯಾವುದೇ ಅಡೆತಡೆ ಇಲ್ಲದೆ ವಿಶ್ವನಾಥನ ದರ್ಶನ ಪಡೆಯೋದಕ್ಕೆ ಸಾಧ್ಯವಾಗಲಿದೆ. ಕಾಶಿ ದೇಗುಲ ಹಾಗೂ ಗಂಗಾ ನದಿಯ ನಡುವಿನ ಸಂಚಾರದ ಅವಧಿ ಈ ಕಾರಿಡಾರ್ನಿಂದ ಕಡಿತವಾಲಿದೆ. ಕಾರಿಡಾರ್‌ ಭಾಗದಲ್ಲಿ 10 ಸಾವಿರ ಜನ ಧ್ಯಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು 7,000 ಚದರ ಮೀಟರ್ ವೇದಿಕೆ, 7 ಭವ್ಯ ಪ್ರವೇಶ ದ್ವಾರಗಳನ್ನು ನಿರ್ಮಿಸಲಾಗಿದೆ. ಫುಡ್ ಕೋರ್ಟ್, ವೈದಿಕ ಸೇರಿದಂತೆ ಆಧ್ಯಾತ್ಮಿಕ ಗ್ರಂಥಾಲಯವನ್ನ ಸ್ಥಾಪಿಸಲಾಗಿದೆ.

ಇದನ್ನೂ ಓದಿ: Miss Universe 2021: ಭುವನ ಸುಂದರಿಯಾಗಿ ಹೊರಹೊಮ್ಮಿದ ಭಾರತದ ಹರ್ನಾಜ್ ಸಂಧು

Published On - 9:50 am, Mon, 13 December 21

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್