AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾ ವಿಗ್ರಹ ನಗರ ಪ್ರದಕ್ಷಿಣೆ ರದ್ದುಪಡಿಸಿದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್​

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ  ರಾಮಲಲ್ಲಾ(Ram Lalla)ನ ಪ್ರಾಣಪ್ರತಿಷ್ಠೆಗೂ ಮುನ್ನ ಜನವರಿ 17ರಂದು ಆಯೋಜಿಸಲಾಗಿದ್ದ, ರಾಮಲಲ್ಲಾ ವಿಗ್ರಹ ನಗರ ಪ್ರದಕ್ಷಿಣೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರದ್ದುಗೊಳಿಸಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ಮಹಾಮಸ್ತಕಾಭಿಷೇಖ ಕಾರ್ಯಕ್ರಮ ನೆರವೇರಲಿದೆ, ಆ ಸಂದರ್ಭದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವೂ ಕೂಡ ನಡೆಯಲಿದೆ.

ರಾಮಲಲ್ಲಾ ವಿಗ್ರಹ ನಗರ ಪ್ರದಕ್ಷಿಣೆ ರದ್ದುಪಡಿಸಿದ ಅಯೋಧ್ಯೆ ರಾಮ ಮಂದಿರ ಟ್ರಸ್ಟ್​
ಅಯೋಧ್ಯೆImage Credit source: Timesnow
ನಯನಾ ರಾಜೀವ್
|

Updated on: Jan 09, 2024 | 9:28 AM

Share

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದಲ್ಲಿ  ರಾಮಲಲ್ಲಾ(Ram Lalla)ನ ಪ್ರಾಣಪ್ರತಿಷ್ಠೆಗೂ ಮುನ್ನ ಜನವರಿ 17ರಂದು ಆಯೋಜಿಸಲಾಗಿದ್ದ, ರಾಮಲಲ್ಲಾ ವಿಗ್ರಹ ನಗರ ಪ್ರದಕ್ಷಿಣೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರದ್ದುಗೊಳಿಸಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ಮಹಾಮಸ್ತಕಾಭಿಷೇಖ ಕಾರ್ಯಕ್ರಮ ನೆರವೇರಲಿದೆ, ಆ ಸಂದರ್ಭದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವೂ ಕೂಡ ನಡೆಯಲಿದೆ.

ಬದಲಾಗಿ ಅದೇ ದಿನ (ಜನವರಿ 17) ರಾಮಜನ್ಮಭೂಮಿಯ ಆವರಣದಲ್ಲಿ ನೂತನ ಮೂರ್ತಿಯ ದರ್ಶನವನ್ನು ಟ್ರಸ್ಟ್ ಏರ್ಪಡಿಸಲಿದೆ ಎಂದು ಟ್ರಸ್ಟ್‌ನ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನದಟ್ಟಣೆಯ ಬಗ್ಗೆ ಭದ್ರತಾ ಏಜೆನ್ಸಿಗಳು ಕೆಲವು ಸಲಹೆ ನೀಡಿದ್ದು, ಈ ಕಾರಣದಿಂದಾಗಿ ರಾಮಲಲ್ಲಾ ವಿಗ್ರಹ ಪ್ರದಕ್ಷಿಣೆಯನ್ನು ರದ್ದುಗೊಳಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ಕಾಶಿಯ ಆಚಾರ್ಯರು ಮತ್ತು ಹಿರಿಯ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.

ಸಭೆಯಲ್ಲಿ ಜನಸಂದಣಿ ನಿರ್ವಹಣೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಯಿತು, ಮೆರವಣಿಗೆ ನಡೆದರೆ ರಾಮಲಲ್ಲಾನ ಹೊಸ ವಿಗ್ರಹದ ದರ್ಶನ ಪಡೆಯಲು ಬಯಸುವ ಭಕ್ತರು ಮತ್ತು ಯಾತ್ರಾರ್ಥಿಗಳ ನಿಯಂತ್ರಿಸುವಲ್ಲಿ ತೊಡಕುಗಳು ಉಂಟಾಗಲಿದೆ ಎಂದು ಅಯೋಧ್ಯೆ ಜಿಲ್ಲಾಡಳಿತ ತಿಳಿಸಿದೆ.

ಮತ್ತಷ್ಟು ಓದಿ: ರಾತ್ರಿ ಸಮಯದಲ್ಲಿ ಅಯೋಧ್ಯೆ ರಾಮಮಂದಿರ ಹೇಗೆ ಕಾಣುತ್ತೆ ನೋಡಿ? ಇಲ್ಲಿದೆ ಫೋಟೋ

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಪ್ರಕಾರ, ರಾಮ್ ಲಲ್ಲಾನ ವಿಗ್ರಹವು ಐದು ವರ್ಷದ ಮಗುವಿನ ರೂಪದಲ್ಲಿರುತ್ತದೆ, ಇದನ್ನು ಕಪ್ಪು ಕಲ್ಲಿನಿಂದ ಮಾಡಲಾಗಿದೆ, ವಿಗ್ರಹವು 51 ಇಂಚು ಎತ್ತರವಿರುತ್ತದೆ. ಅಯೋಧ್ಯೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು 6,000 ಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ.

ವಾರಾಣಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಜನವರಿ 22 ರಂದು ರಾಮ್ ಲಲ್ಲಾ ಅವರ ಪ್ರತಿಷ್ಠಾಪನೆಯ ಮುಖ್ಯ ವಿಧಿವಿಧಾನಗಳನ್ನು ನಿರ್ವಹಿಸಲಿದ್ದಾರೆ. ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯು ಅಮೃತ ಮಹೋತ್ಸವ ನಡೆಯಲಿದೆ.

ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಅಯೋಧ್ಯೆಯಲ್ಲಿ ಸಾವಿರಾರು ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಲು ಹಲವಾರು ಟೆಂಟ್ ಸಿಟಿಗಳನ್ನು ನಿರ್ಮಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ