AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ: ಜ. 22ರಂದು ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಹಣ ಪಡೆಯೋದಿಲ್ಲ ಎಂದ ತೃತೀಯಲಿಂಗಿಗಳು

ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನ ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಪೋಷಕರಿಂದ ಹಣವಾಗಲಿ, ಉಡುಗೊರೆಯಾಗಲಿ ತೆಗೆದುಕೊಳ್ಳುವುದಿಲ್ಲ ಎಂದು ಬರೇಲಿಯ ತೃತೀಯಲಿಂಗಿಗಳು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾ ದಿನದಂದು ಮಕ್ಕಳು ಜನಿಸಿದ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದನಾ ಗೀತೆಗಳನ್ನು ಹಾಡುತ್ತೇವೆ ಎಂದು ಸಮುದಾಯದ ಶಾರದಾ ಹೇಳಿದರು.

ರಾಮ ಮಂದಿರ: ಜ. 22ರಂದು ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಹಣ ಪಡೆಯೋದಿಲ್ಲ ಎಂದ ತೃತೀಯಲಿಂಗಿಗಳು
ತೃತೀಯಲಿಂಗಿಗಳುImage Credit source: India Today
ನಯನಾ ರಾಜೀವ್
|

Updated on: Jan 15, 2024 | 8:51 AM

Share

ರಾಮಲಲ್ಲಾ(Ram Lalla) ಪ್ರಾಣ ಪ್ರತಿಷ್ಠೆಯ ದಿನ ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಪೋಷಕರಿಂದ ಹಣವಾಗಲಿ, ಉಡುಗೊರೆಯಾಗಲಿ ತೆಗೆದುಕೊಳ್ಳುವುದಿಲ್ಲ ಎಂದು ಬರೇಲಿಯ ತೃತೀಯಲಿಂಗಿಗಳು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾ ದಿನದಂದು ಮಕ್ಕಳು ಜನಿಸಿದ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದನಾ ಗೀತೆಗಳನ್ನು ಹಾಡುತ್ತೇವೆ ಎಂದು ಸಮುದಾಯದ ಶಾರದಾ ಹೇಳಿದರು.

ನಾವು ನವಜಾತ ಶಿಶುಗಳನ್ನು ಆಶೀರ್ವದಿಸುವುದಕ್ಕಾಗಿ ಹಣವಾಗಲಿ, ಉಡುಗೊರೆಯಾಗಲಿ ಕೇಳುವುದಿಲ್ಲ, ಆದರೆ ನಮಗೆ ನೀಡುವ ಏನನ್ನಾದರೂ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಹಿಂದುಳಿದ ಕುಟುಂಬದ ಐದು ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸುವ ಶಾರದಾ, ಜನವರಿ 22 ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಲು ಈ ಪ್ರದೇಶದ ಪ್ರತಿ ಮನೆಗೆ ಐದು ದೀಪಗಳನ್ನು ಕಳುಹಿಸುತ್ತಿದ್ದೇವೆ ಎಂದು ಹೇಳಿದರು.

ಮತ್ತಷ್ಟು ಓದಿ: ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್ ದೇವಸ್ಥಾನದಲ್ಲಿ ‘ಸ್ವಚ್ಛತಾ ಅಭಿಯಾನ’ದಲ್ಲಿ ಮೋದಿ ಭಾಗಿ

ನಮ್ಮ ಜೀವನದಲ್ಲಿ ರಾಮ ಮಂದಿರದ ದರ್ಶನ ಪಡೆದ ನಾವು ತುಂಬಾ ಅದೃಷ್ಟವಂತರು. ಸುಮಾರು 500 ವರ್ಷಗಳ ಕಾಲ ನಡೆದ ಹೋರಾಟದಲ್ಲಿ ಶ್ರೀರಾಮನ ಮಂದಿರವನ್ನು ನೋಡಬೇಕೆಂಬ ಆಸೆ ಈಡೇರದೆ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಶಾರದಾ ಹೇಳಿದ್ದಾರೆ.

ರಾಮನ ಕೃಪೆಯಿಂದ ಇಂದು ನಾವು ಮಕ್ಕಳಿಗೆ ಆಶೀರ್ವಾದ ನೀಡುತ್ತೇವೆ. ಜನವರಿ 22 ರ ನಂತರ ನಾವು ರಾಮ ಲಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ಹೋಗುತ್ತೇವೆ ಎಂದು ಶಾರದಾ ಹೇಳಿದರು. ಪ್ರಾಣ ಪ್ರತಿಷ್ಠಾ ನಂತರ ಅಯೋಧ್ಯೆಗೆ ಭೇಟಿ ನೀಡುತ್ತೇವೆ ಮತ್ತು ಜನವರಿ 22 ರಂದು ಜನಿಸಿದ ಮಕ್ಕಳಿಗೆ ಉಡುಗೊರೆಗಳನ್ನು ನೀಡುತ್ತೇವೆ ಎಂದು ನೈನಾ ದೇವಿ ಹೇಳಿದ್ದಾರೆ.

ಜನವರಿ 22 ರಂದು ರೈಲಿನಲ್ಲಿ ಕೆಲವು ಸ್ನೇಹಿತರೊಂದಿಗೆ ಭಗವಾನ್ ರಾಮನ ಭಕ್ತಿಗೀತೆಗಳನ್ನು ಹಾಡುತ್ತೇವೆ ಮತ್ತು ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಗೆ ಹೋಗಲು ಪ್ರತಿಯೊಬ್ಬ ಪ್ರಯಾಣಿಕರನ್ನು ಆಹ್ವಾನಿಸುತ್ತೇವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್