Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ: ಜ. 22ರಂದು ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಹಣ ಪಡೆಯೋದಿಲ್ಲ ಎಂದ ತೃತೀಯಲಿಂಗಿಗಳು

ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನ ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಪೋಷಕರಿಂದ ಹಣವಾಗಲಿ, ಉಡುಗೊರೆಯಾಗಲಿ ತೆಗೆದುಕೊಳ್ಳುವುದಿಲ್ಲ ಎಂದು ಬರೇಲಿಯ ತೃತೀಯಲಿಂಗಿಗಳು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾ ದಿನದಂದು ಮಕ್ಕಳು ಜನಿಸಿದ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದನಾ ಗೀತೆಗಳನ್ನು ಹಾಡುತ್ತೇವೆ ಎಂದು ಸಮುದಾಯದ ಶಾರದಾ ಹೇಳಿದರು.

ರಾಮ ಮಂದಿರ: ಜ. 22ರಂದು ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಹಣ ಪಡೆಯೋದಿಲ್ಲ ಎಂದ ತೃತೀಯಲಿಂಗಿಗಳು
ತೃತೀಯಲಿಂಗಿಗಳುImage Credit source: India Today
Follow us
ನಯನಾ ರಾಜೀವ್
|

Updated on: Jan 15, 2024 | 8:51 AM

ರಾಮಲಲ್ಲಾ(Ram Lalla) ಪ್ರಾಣ ಪ್ರತಿಷ್ಠೆಯ ದಿನ ಹುಟ್ಟಿದ ಶಿಶುಗಳನ್ನು ಆಶೀರ್ವದಿಸಲು ಪೋಷಕರಿಂದ ಹಣವಾಗಲಿ, ಉಡುಗೊರೆಯಾಗಲಿ ತೆಗೆದುಕೊಳ್ಳುವುದಿಲ್ಲ ಎಂದು ಬರೇಲಿಯ ತೃತೀಯಲಿಂಗಿಗಳು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾ ದಿನದಂದು ಮಕ್ಕಳು ಜನಿಸಿದ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅಭಿನಂದನಾ ಗೀತೆಗಳನ್ನು ಹಾಡುತ್ತೇವೆ ಎಂದು ಸಮುದಾಯದ ಶಾರದಾ ಹೇಳಿದರು.

ನಾವು ನವಜಾತ ಶಿಶುಗಳನ್ನು ಆಶೀರ್ವದಿಸುವುದಕ್ಕಾಗಿ ಹಣವಾಗಲಿ, ಉಡುಗೊರೆಯಾಗಲಿ ಕೇಳುವುದಿಲ್ಲ, ಆದರೆ ನಮಗೆ ನೀಡುವ ಏನನ್ನಾದರೂ ಸಂತೋಷದಿಂದ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.

ಪ್ರತಿ ವರ್ಷ ಹಿಂದುಳಿದ ಕುಟುಂಬದ ಐದು ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸುವ ಶಾರದಾ, ಜನವರಿ 22 ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಲು ಈ ಪ್ರದೇಶದ ಪ್ರತಿ ಮನೆಗೆ ಐದು ದೀಪಗಳನ್ನು ಕಳುಹಿಸುತ್ತಿದ್ದೇವೆ ಎಂದು ಹೇಳಿದರು.

ಮತ್ತಷ್ಟು ಓದಿ: ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್ ದೇವಸ್ಥಾನದಲ್ಲಿ ‘ಸ್ವಚ್ಛತಾ ಅಭಿಯಾನ’ದಲ್ಲಿ ಮೋದಿ ಭಾಗಿ

ನಮ್ಮ ಜೀವನದಲ್ಲಿ ರಾಮ ಮಂದಿರದ ದರ್ಶನ ಪಡೆದ ನಾವು ತುಂಬಾ ಅದೃಷ್ಟವಂತರು. ಸುಮಾರು 500 ವರ್ಷಗಳ ಕಾಲ ನಡೆದ ಹೋರಾಟದಲ್ಲಿ ಶ್ರೀರಾಮನ ಮಂದಿರವನ್ನು ನೋಡಬೇಕೆಂಬ ಆಸೆ ಈಡೇರದೆ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಶಾರದಾ ಹೇಳಿದ್ದಾರೆ.

ರಾಮನ ಕೃಪೆಯಿಂದ ಇಂದು ನಾವು ಮಕ್ಕಳಿಗೆ ಆಶೀರ್ವಾದ ನೀಡುತ್ತೇವೆ. ಜನವರಿ 22 ರ ನಂತರ ನಾವು ರಾಮ ಲಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ಹೋಗುತ್ತೇವೆ ಎಂದು ಶಾರದಾ ಹೇಳಿದರು. ಪ್ರಾಣ ಪ್ರತಿಷ್ಠಾ ನಂತರ ಅಯೋಧ್ಯೆಗೆ ಭೇಟಿ ನೀಡುತ್ತೇವೆ ಮತ್ತು ಜನವರಿ 22 ರಂದು ಜನಿಸಿದ ಮಕ್ಕಳಿಗೆ ಉಡುಗೊರೆಗಳನ್ನು ನೀಡುತ್ತೇವೆ ಎಂದು ನೈನಾ ದೇವಿ ಹೇಳಿದ್ದಾರೆ.

ಜನವರಿ 22 ರಂದು ರೈಲಿನಲ್ಲಿ ಕೆಲವು ಸ್ನೇಹಿತರೊಂದಿಗೆ ಭಗವಾನ್ ರಾಮನ ಭಕ್ತಿಗೀತೆಗಳನ್ನು ಹಾಡುತ್ತೇವೆ ಮತ್ತು ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಗೆ ಹೋಗಲು ಪ್ರತಿಯೊಬ್ಬ ಪ್ರಯಾಣಿಕರನ್ನು ಆಹ್ವಾನಿಸುತ್ತೇವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ