AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕಗಳ ಕನಸು ನನಸು, ರಾಮ ಎನ್ನಲಿದ್ದಾರೆ 40ಕ್ಕೂ ಅಧಿಕ ವರ್ಷಗಳಿಂದ ಮೌನ ತಳೆದಿರುವ ಬಾಬಾ

ದಶಕಗಳ ಕನಸು ಅಂತೂ ನನಸಾಗುವ ಸಮಯ ಬಂದೇ ಬಿಟ್ಟಿದೆ. ಅಂತೂ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಯಾಗುವವರೆಗೂ ಚಪ್ಪಲಿ ಹಾಕುವುದಿಲ್ಲ, ಮಾತನಾಡುವುದಿಲ್ಲ ಎಂದು ಮೌನ ಧೀಕ್ಷೆ ತೊಟ್ಟಿದ್ದ ಮೌನಿ ಬಾಬಾ ಜನವರಿ 22ರಂದು ಮೌನ ಮುರಿದು ರಾಮ ಎನ್ನಲಿದ್ದಾರೆ.

ದಶಕಗಳ ಕನಸು ನನಸು, ರಾಮ ಎನ್ನಲಿದ್ದಾರೆ 40ಕ್ಕೂ ಅಧಿಕ ವರ್ಷಗಳಿಂದ ಮೌನ ತಳೆದಿರುವ ಬಾಬಾ
ಮೌನಿ ಬಾಬಾ
ನಯನಾ ರಾಜೀವ್
|

Updated on: Jan 13, 2024 | 10:45 AM

Share

ದಶಕಗಳ ಕನಸು ಅಂತೂ ನನಸಾಗುವ ಸಮಯ ಬಂದೇ ಬಿಟ್ಟಿದೆ. ಅಂತೂ ಅಯೋಧ್ಯೆಯಲ್ಲಿ ರಾಮ ಮಂದಿರ(Ram Mandir) ನಿರ್ಮಾಣವಾಗಿದೆ. ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಯಾಗುವವರೆಗೂ ಚಪ್ಪಲಿ ಹಾಕುವುದಿಲ್ಲ, ಮಾತನಾಡುವುದಿಲ್ಲ ಎಂದು ಮೌನ ಧೀಕ್ಷೆ ತೊಟ್ಟಿದ್ದ ಮೌನಿ ಬಾಬಾ ಜನವರಿ 22ರಂದು ಮೌನ ಮುರಿದು ರಾಮ ಎನ್ನಲಿದ್ದಾರೆ.

ರಾಮ ಮಂದಿರ ನಿರ್ಮಾಣ ಕುರಿತು ದೇಶದ ಜನತೆ ಸಂತಸಪಟ್ಟಿದೆ. ಪ್ರತಿಯೊಬ್ಬರೂ ತಮ್ಮ ಮನೆಯ ದೇವರ ಮಂಟಪದಲ್ಲಿ ರಾಮನಿರಲಿ ಎಂದು ಬಯಸುತ್ತಾರೆ. ರಾಮಲಲ್ಲಾನ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಕೆಲವರು ಸಾವಿರಾರು ಮೈಲಿಗಳಿಂದ ಕಾಲ್ನಡಿಗೆಯಲ್ಲಿ ಬಂದಿದ್ದಾರೆ. ರಾಮಲಲ್ಲಾನ ಪ್ರತಿಷ್ಠಾಪನೆಗೆ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ.

ಮೌನಿ ಬಾಬಾ ಯಾರು? ರಾಮಮಂದಿರ ನಿರ್ಮಾಣಕ್ಕಾಗಿ ಋಷಿಮುನಿಗಳು ಮತ್ತು ಸಂತರು ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಆ ಸಂತರಲ್ಲಿ ಮಧ್ಯಪ್ರದೇಶದ ಮೌನಿ ಬಾಬಾ ಅವರ ಹೆಸರೂ ಸೇರಿದೆ. ಮೋಹನ್ ಗೋಪಾಲ್ ದಾಸ್ ಎಂದು ಕರೆಯಲ್ಪಡುವ ಮೌನಿ ಬಾಬಾ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ತೆಗೆದುಹಾಕುವ ಕಾರ್ಮಿಕರೊಂದಿಗೆ ಇದ್ದರು.

ಮತ್ತಷ್ಟು ಓದಿ: ರಾಮಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನವ್ರತ ಅಂತ್ಯಗೊಳಿಸಿ ‘ರಾಮ’ ಎನ್ನಲಿದ್ದಾರೆ ಮೌನ ಮಾತಾ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವವರೆಗೆ ಮತ್ತು ರಾಮಲಲ್ಲಾ ಸಿಂಹಾಸನದಲ್ಲಿ ಕುಳಿತುಕೊಳ್ಳುವವರೆಗೂ ಮೌನವಾಗಿರುತ್ತೇನೆ ಎಂದು ಹೇಳಿದ್ದರು. ರಾಮಮಂದಿರ ನಿರ್ಮಾಣದ ನಂತರವೇ ಅವರು ಮೌನ ಮುರಿಯುತ್ತಾರೆ. ಜನವರಿ 22 ರಂದು ರಾಮಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಪ್ರಾಣ ಪ್ರತಿಷ್ಠೆಯ ನಂತರ, ಮೌನಿ ಬಾಬಾ ಭಗವಂತ ರಾಮನ ಹೆಸರನ್ನು ತೆಗೆದುಕೊಳ್ಳುವ ಮೂಲಕ ತಮ್ಮ ಮೌನವನ್ನು ಮುರಿಯುತ್ತಾರೆ.

ರಾಮಮಂದಿರದ ಪ್ರತಿಷ್ಠಾಪನೆಯ ಆಹ್ವಾನಕ್ಕಾಗಿ ಮೌನಿ ಬಾಬಾ ಕಾಯುತ್ತಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಆಹ್ವಾನ ಕಳುಹಿಸಬಹುದು ಎಂದು ನಂಬಿದ್ದಾರೆ.

ಪ್ರಾಣ ಪ್ರತಿಷ್ಠಾನಕ್ಕೆ ಆಮಂತ್ರಣ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಪ್ರತಿದಿನ ಎಸ್‌ಪಿ ಕಚೇರಿ ಮತ್ತು ಡಿಎಂ ಕಚೇರಿಗೆ ಭೇಟಿ ನೀಡುತ್ತಾರೆ. ಈ ಸಂಬಂಧ ಡಿಎಂ ಮತ್ತು ಎಸ್ಪಿಗೂ ಪತ್ರ ಬರೆದಿದ್ದಾರೆ. ಮೌನಿ ಬಾಬಾ ಸ್ಲೇಟಿನಲ್ಲಿ ಬರೆಯುವ ಮೂಲಕ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಹೇಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ