AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕಗಳ ಕನಸು ನನಸು, ರಾಮ ಎನ್ನಲಿದ್ದಾರೆ 40ಕ್ಕೂ ಅಧಿಕ ವರ್ಷಗಳಿಂದ ಮೌನ ತಳೆದಿರುವ ಬಾಬಾ

ದಶಕಗಳ ಕನಸು ಅಂತೂ ನನಸಾಗುವ ಸಮಯ ಬಂದೇ ಬಿಟ್ಟಿದೆ. ಅಂತೂ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಯಾಗುವವರೆಗೂ ಚಪ್ಪಲಿ ಹಾಕುವುದಿಲ್ಲ, ಮಾತನಾಡುವುದಿಲ್ಲ ಎಂದು ಮೌನ ಧೀಕ್ಷೆ ತೊಟ್ಟಿದ್ದ ಮೌನಿ ಬಾಬಾ ಜನವರಿ 22ರಂದು ಮೌನ ಮುರಿದು ರಾಮ ಎನ್ನಲಿದ್ದಾರೆ.

ದಶಕಗಳ ಕನಸು ನನಸು, ರಾಮ ಎನ್ನಲಿದ್ದಾರೆ 40ಕ್ಕೂ ಅಧಿಕ ವರ್ಷಗಳಿಂದ ಮೌನ ತಳೆದಿರುವ ಬಾಬಾ
ಮೌನಿ ಬಾಬಾ
ನಯನಾ ರಾಜೀವ್
|

Updated on: Jan 13, 2024 | 10:45 AM

Share

ದಶಕಗಳ ಕನಸು ಅಂತೂ ನನಸಾಗುವ ಸಮಯ ಬಂದೇ ಬಿಟ್ಟಿದೆ. ಅಂತೂ ಅಯೋಧ್ಯೆಯಲ್ಲಿ ರಾಮ ಮಂದಿರ(Ram Mandir) ನಿರ್ಮಾಣವಾಗಿದೆ. ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಯಾಗುವವರೆಗೂ ಚಪ್ಪಲಿ ಹಾಕುವುದಿಲ್ಲ, ಮಾತನಾಡುವುದಿಲ್ಲ ಎಂದು ಮೌನ ಧೀಕ್ಷೆ ತೊಟ್ಟಿದ್ದ ಮೌನಿ ಬಾಬಾ ಜನವರಿ 22ರಂದು ಮೌನ ಮುರಿದು ರಾಮ ಎನ್ನಲಿದ್ದಾರೆ.

ರಾಮ ಮಂದಿರ ನಿರ್ಮಾಣ ಕುರಿತು ದೇಶದ ಜನತೆ ಸಂತಸಪಟ್ಟಿದೆ. ಪ್ರತಿಯೊಬ್ಬರೂ ತಮ್ಮ ಮನೆಯ ದೇವರ ಮಂಟಪದಲ್ಲಿ ರಾಮನಿರಲಿ ಎಂದು ಬಯಸುತ್ತಾರೆ. ರಾಮಲಲ್ಲಾನ ದರ್ಶನಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಕೆಲವರು ಸಾವಿರಾರು ಮೈಲಿಗಳಿಂದ ಕಾಲ್ನಡಿಗೆಯಲ್ಲಿ ಬಂದಿದ್ದಾರೆ. ರಾಮಲಲ್ಲಾನ ಪ್ರತಿಷ್ಠಾಪನೆಗೆ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ.

ಮೌನಿ ಬಾಬಾ ಯಾರು? ರಾಮಮಂದಿರ ನಿರ್ಮಾಣಕ್ಕಾಗಿ ಋಷಿಮುನಿಗಳು ಮತ್ತು ಸಂತರು ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಆ ಸಂತರಲ್ಲಿ ಮಧ್ಯಪ್ರದೇಶದ ಮೌನಿ ಬಾಬಾ ಅವರ ಹೆಸರೂ ಸೇರಿದೆ. ಮೋಹನ್ ಗೋಪಾಲ್ ದಾಸ್ ಎಂದು ಕರೆಯಲ್ಪಡುವ ಮೌನಿ ಬಾಬಾ ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ತೆಗೆದುಹಾಕುವ ಕಾರ್ಮಿಕರೊಂದಿಗೆ ಇದ್ದರು.

ಮತ್ತಷ್ಟು ಓದಿ: ರಾಮಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನವ್ರತ ಅಂತ್ಯಗೊಳಿಸಿ ‘ರಾಮ’ ಎನ್ನಲಿದ್ದಾರೆ ಮೌನ ಮಾತಾ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವವರೆಗೆ ಮತ್ತು ರಾಮಲಲ್ಲಾ ಸಿಂಹಾಸನದಲ್ಲಿ ಕುಳಿತುಕೊಳ್ಳುವವರೆಗೂ ಮೌನವಾಗಿರುತ್ತೇನೆ ಎಂದು ಹೇಳಿದ್ದರು. ರಾಮಮಂದಿರ ನಿರ್ಮಾಣದ ನಂತರವೇ ಅವರು ಮೌನ ಮುರಿಯುತ್ತಾರೆ. ಜನವರಿ 22 ರಂದು ರಾಮಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಪ್ರಾಣ ಪ್ರತಿಷ್ಠೆಯ ನಂತರ, ಮೌನಿ ಬಾಬಾ ಭಗವಂತ ರಾಮನ ಹೆಸರನ್ನು ತೆಗೆದುಕೊಳ್ಳುವ ಮೂಲಕ ತಮ್ಮ ಮೌನವನ್ನು ಮುರಿಯುತ್ತಾರೆ.

ರಾಮಮಂದಿರದ ಪ್ರತಿಷ್ಠಾಪನೆಯ ಆಹ್ವಾನಕ್ಕಾಗಿ ಮೌನಿ ಬಾಬಾ ಕಾಯುತ್ತಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ಮೋದಿ ಆಹ್ವಾನ ಕಳುಹಿಸಬಹುದು ಎಂದು ನಂಬಿದ್ದಾರೆ.

ಪ್ರಾಣ ಪ್ರತಿಷ್ಠಾನಕ್ಕೆ ಆಮಂತ್ರಣ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಪ್ರತಿದಿನ ಎಸ್‌ಪಿ ಕಚೇರಿ ಮತ್ತು ಡಿಎಂ ಕಚೇರಿಗೆ ಭೇಟಿ ನೀಡುತ್ತಾರೆ. ಈ ಸಂಬಂಧ ಡಿಎಂ ಮತ್ತು ಎಸ್ಪಿಗೂ ಪತ್ರ ಬರೆದಿದ್ದಾರೆ. ಮೌನಿ ಬಾಬಾ ಸ್ಲೇಟಿನಲ್ಲಿ ಬರೆಯುವ ಮೂಲಕ ಎಲ್ಲಾ ಪ್ರಶ್ನೆಗಳಿಗೆ ಉತ್ತರಗಳನ್ನು ಹೇಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು