AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir Inauguration: ಅಯೋಧ್ಯೆಗೆ ಬರುವ ಗಣ್ಯ ಅತಿಥಿಗಳಿಗೆ ನೀಡುವ ಆ ಪವಿತ್ರವಾದ ಉಡುಗೊರೆ ಏನು ಗೊತ್ತಾ?

ಅಯೋಧ್ಯೆಯ ಬಾಲರಾಮ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ದೇಶಾದ್ಯಂತ 11 ಸಾವಿರಕ್ಕೂ ಹೆಚ್ಚು ಅತಿಥಿಗಳನ್ನು ಟ್ರಸ್ಟ್‌ನಿಂದ ಆಹ್ವಾನಿಸಲಾಗಿದ್ದು, ಅತಿಥಿಗಳು ಸದಾ ಸ್ಮರಿಸುವಂತಹ ಉಡುಗೊರೆ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ.

Ram Mandir Inauguration: ಅಯೋಧ್ಯೆಗೆ ಬರುವ ಗಣ್ಯ ಅತಿಥಿಗಳಿಗೆ ನೀಡುವ ಆ ಪವಿತ್ರವಾದ ಉಡುಗೊರೆ ಏನು ಗೊತ್ತಾ?
Ram Mandir Inauguration
ಅಕ್ಷತಾ ವರ್ಕಾಡಿ
|

Updated on: Jan 14, 2024 | 3:07 PM

Share

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಜನವರಿ 22 ರಂದು ನಡೆಯಲಿರುವ ಈ ಕಾರ್ಯಕ್ರಮಕ್ಕೆ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಸಾವಿರಾರು ಗಣ್ಯ ಅತಿಥಿಗಳನ್ನು ಆಹ್ವಾನಿಸಲಾಗಿದೆ . ಈ ಐತಿಹಾಸಿಕ ಸಂದರ್ಭದಲ್ಲಿ ಎಲ್ಲಾ ಆಹ್ವಾನಿತ ಅತಿಥಿಗಳನ್ನು ಸ್ವಾಗತಿಸಲು ಸಿದ್ಧತೆಗಳನ್ನು ಮಾಡಲಾಗಿದ್ದು, ಇದರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ಅತಿಥಿಗಳಿಗೆ ಟ್ರಸ್ಟ್‌ನಿಂದ ವಿಶೇಷ ಉಡುಗೊರೆಗಳನ್ನು ನೀಡಲಾಗುತ್ತಿದೆ.

ಮಾಹಿತಿ ಪ್ರಕಾರ, ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳಿಗೆ ರಾಮಮಂದಿರದ ಅಡಿಪಾಯದ ಉತ್ಖನನದ ಸಮಯದಲ್ಲಿ ತೆಗೆದ ರಾಮಜನ್ಮಭೂಮಿಯ ಮಣ್ಣನ್ನು ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಿ ನೀಡಲಾಗುವುದು. ಇದಲ್ಲದೆ ದೇಸಿ ತುಪ್ಪದಿಂದ ಮಾಡಿದ ವಿಶೇಷ ಮೋತಿಚೂರು ಲಡ್ಡುಗಳನ್ನು ಪ್ರಸಾದವಾಗಿ ನೀಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಯೋಧ್ಯೆ ರಾಮಮಂದಿರದ 15 ಮೀಟರ್ ಉದ್ದದ ಚಿತ್ರವನ್ನು ಸೆಣಬಿನ ಚೀಲದಲ್ಲಿ ಪ್ಯಾಕ್​​ ಮಾಡಿ ನೀಡಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ. ಕೆಲವು ಕಾರಣಗಳಿಂದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಇಲ್ಲಿಗೆ ಬರಲು ಸಾಧ್ಯವಾಗದ ಅಂತಹ ಆಹ್ವಾನಿತರು ಇಲ್ಲಿಗೆ ಬಂದಾಗಲೆಲ್ಲಾ ಈ ಉಡುಗೊರೆಯನ್ನು ನೀಡುವ ಸಾಧ್ಯತೆಯೂ ಇದೆ .

ಇದನ್ನೂ ಓದಿ: ಅಯೋಧ್ಯೆ ತಲುಪುವುದರಿಂದ ಹಿಡಿದು ಶ್ರೀರಾಮನ ದರ್ಶನದವರೆಗೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ ಇಲ್ಲಿದೆ

ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ದೇವಸ್ಥಾನದ ಆವರಣದಲ್ಲಿ 7500 ಮಂದಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಅಯೋಧ್ಯೆ ವಿಭಾಗೀಯ ಆಯುಕ್ತ ಗೌರವ್ ದಯಾಳ್ ತಿಳಿಸಿದ್ದಾರೆ. ವಾರಣಾಸಿಯ ಅರ್ಚಕರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಅವರೊಂದಿಗೆ ಕಾರ್ಯಕ್ರಮದ ಸಮಯದಲ್ಲಿ, ದೇವಾಲಯದಲ್ಲಿ ನಿರ್ಮಿಸಲಾದ ಐದು ಮಂಟಪಗಳಲ್ಲಿ ವಿವಿಧ ಸಾಮಾಜಿಕ ಸಮುದಾಯಗಳ 15 ಜೋಡಿಗಳು ಇರುತ್ತಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಇಡೀ ಜಗತ್ತಿಗೆ ಸಂದೇಶ ನೀಡಲಿರುವ ಪ್ರಧಾನಿ ಮೋದಿಯವರ ಭಾಷಣಕ್ಕೂ ಸ್ಥಳವನ್ನು ಗುರುತಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ