AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ರಾಮ ಮಂದಿರ ಪ್ರಾಣಪ್ರತಿಷ್ಠೆ ಮಾಡುತ್ತಿದ್ದರೆ, ವಿರೋಧ ಪಕ್ಷಗಳ ನಾಯಕರು ಎಲ್ಲಿದ್ರು?

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ದಾರೆ. ಈ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದ ವಿರೋಧ ಪಕ್ಷಗಳ ನಾಯಕರು ಹಾಗಾದರೆ ಎಲ್ಲಿದ್ದರು ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

ಪ್ರಧಾನಿ ಮೋದಿ ರಾಮ ಮಂದಿರ ಪ್ರಾಣಪ್ರತಿಷ್ಠೆ ಮಾಡುತ್ತಿದ್ದರೆ, ವಿರೋಧ ಪಕ್ಷಗಳ ನಾಯಕರು ಎಲ್ಲಿದ್ರು?
ರಾಮ ಮಂದಿರImage Credit source: NDTV
ನಯನಾ ರಾಜೀವ್
|

Updated on: Jan 22, 2024 | 2:17 PM

Share

ಅಯೋಧ್ಯೆ(Ayodhya)ಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ನೆರವೇರಿಸಿದ್ದಾರೆ. ಈ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ್ದ ವಿರೋಧ ಪಕ್ಷಗಳ ನಾಯಕರು ಹಾಗಾದರೆ ಎಲ್ಲಿದ್ದರು ಎನ್ನುವ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.

ವಿರೋಧಪಕ್ಷ ನಾಯಕರು ಈ ಕಾರ್ಯಕ್ರಮವನ್ನು ಬಿಜೆಪಿ-ಆರ್​ಎಸ್​ಎಸ್​ ಕಾರ್ಯಕ್ರಮ ಎಂದು ಬಣ್ಣಿಸಿದ್ದರು. ಮುಂಬರುವ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮತಗಳನ್ನು ಸೆಳೆಯುವ ಗುರಿ ಹೊಂದಿದ್ದಾರೆ ಎಂದು ಹೇಳಿದ್ದರು.

ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದಲ್ಲಿ 7,000 ಕ್ಕೂ ಹೆಚ್ಚು ಜನರು ಸೇರಿದ್ದರು. ರಾಮಮಂದಿರ ಟ್ರಸ್ಟ್ ಪ್ರತಿಪಕ್ಷದ ನಾಯಕರಿಗೆ ಆಹ್ವಾನಗಳನ್ನು ಕಳುಹಿಸಿತ್ತು.ದರೆ ಅವರಲ್ಲಿ ಹೆಚ್ಚಿನವರು ಕಾರ್ಯಕ್ರಮವನ್ನು ಬಿಟ್ಟುಬಿಡಲು ನಿರ್ಧರಿಸಿದರು. ಕೆಲವರು ಇದೊಂದು ರಾಜಕೀಯ ಘಟನೆ ಎಂದು ಹೇಳಿದರೆ, ಇನ್ನು ಕೆಲವರು ನಂತರ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು.

ಮತ್ತಷ್ಟು ಓದಿ: Ram Mandir Inauguration: ಅಯೋಧ್ಯಾ ನಗರಿಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ರಾಮ

ಅಸ್ಸಾಂನಲ್ಲಿದ್ದಾರೆ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ನಿರತರಾಗಿದ್ದಾರೆ. ಕಳೆದ ವಾರ ಮಣಿಪುರದಿಂದ ಯಾತ್ರೆ ಆರಂಭವಾಗಿದೆ. ರಾಜ್ಯದ ಸಮಾಜ ಸುಧಾರಕ ಸಂತ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್ ಜಿಲ್ಲೆಯ ಬಟಾದ್ರವ ಥಾನ್‌ಗೆ ರಾಹುಲ್ ಗಾಂಧಿ ಇಂದು ಭೇಟಿ ನೀಡಬೇಕಿತ್ತು ಆದರೆ ಅಧಿಕಾರಿಗಳು ಪ್ರವೇಶಿಸಲು ಅವಕಾಶ ನೀಡಲಿಲ್ಲ.

ರಾಮಮಂದಿರ ಉದ್ಘಾಟನೆಯಿಂದಾಗಿ ದೇಗುಲಕ್ಕೆ ಭಾರೀ ಜನಸಂದಣಿಯ ನಿರೀಕ್ಷೆಯಿರುವುದರಿಂದ ಅವರನ್ನು ಸ್ವಾಗತಿಸಲು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸರ್ಕಾರದ ಒತ್ತಡದಿಂದಾಗಿ ರಾಹುಲ್ ಗಾಂಧಿ ಅವರಿಗೆ ದೇಗುಲ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ಸರ್ವಧರ್ಮ ಮೆರವಣಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನದಂದು ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದಾದ್ಯಂತ ಸರ್ವಧರ್ಮ ಮೆರವಣಿಗೆ ಆಯೋಜಿಸಿದ್ದಾರೆ. ಕೋಲ್ಕತ್ತಾದ ಕಾಳಿಘಾಟ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ರ್ಯಾಲಿಯನ್ನು ನಡೆಸುವುದಾಗಿ ಬ್ಯಾನರ್ಜಿ ಹೇಳಿದ್ದಾರೆ. ಎಲ್ಲ ಧರ್ಮದ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ರಾಮ ಮಂದಿರದ ಶಂಕುಸ್ಥಾಪನೆಯನ್ನು ಬಿಜೆಪಿ ಚುನಾವಣಾ ಗಿಮಿಕ್ ಆಗಿ ಬಳಸುತ್ತಿದೆ ಎಂದು ಟಿಎಂಸಿ ವರಿಷ್ಠರು ಆರೋಪಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಶೋಭಾ ಯಾತ್ರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶೋಭಾ ಯಾತ್ರೆ ಆಯೋಜಿಸಿದ್ದಾರೆ, ಜತೆಗೆ ಸುಂದರಕಾಂಡ ಪ್ರವಚನ, ಆರತಿಯನ್ನೂ ಯೋಜಿಸಿದ್ದಾರೆ.

ಉದ್ಧವ್ ಠಾಕ್ರೆ ದೇವಸ್ಥಾನದಲ್ಲಿ ಪ್ರಾರ್ಥನೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಾಸಿಕ್​ನ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗೋದಾವರಿ ನದಿಯ ದಡದಲ್ಲಿ ಮಹಾ ಆರತಿ ಮಾಡಲಿದ್ದಾರೆ.

ಅಖಿಲೇಶ್​ ಯಾದವ್ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಪಡೆದ ಅಖಿಲೇಶ್ ಯಾದವ್, ಸಮಾಜವಾದಿ ನಾಯಕ ಜನೇಶ್ವರ್ ಮಿಶ್ರಾ ಅವರಿಗೆ ಗೌರವ ಸಲ್ಲಿಸಲು ಯೋಜಿಸಿದ್ದರು. ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮದ ಬಳಿಕ ಕುಟುಂಬ ಸಮೇತ ಅಯೋಧ್ಯೆಯ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಅವರು ಹೇಳಿದ್ದಾರೆ.

ಶರದ್ ಯಾದವ್ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಮತ್ತು ಅವರ ಕುಟುಂಬ ನಂತರದ ದಿನಗಳಲ್ಲಿ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ