AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರ ನೇರ ಪ್ರಸಾರ ಕಾರ್ಯಕ್ರಮ ತಡೆಯುವಂತಿಲ್ಲ, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್​​​​​ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಾಮ ಮಂದಿರ ನೇರ ಪ್ರಸಾರ ಕಾರ್ಯಕ್ರಮ ತಡೆಯುವಂತಿಲ್ಲ, ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ಅಕ್ಷಯ್​ ಪಲ್ಲಮಜಲು​​
|

Updated on: Jan 22, 2024 | 11:32 AM

Share

ದೆಹಲಿ, ಜ.22: ಅಯೋಧ್ಯೆ ರಾಮಮಂದಿರದಲ್ಲಿ (Ram Mandir) ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು (Tamil Nadu) ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ (Supreme court)​​​​​ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ ಸುಪ್ರೀಂ, ನೇರ ಪ್ರಸಾರದ ಕೋರಿಕೆಗಳನ್ನು ತಿರಸ್ಕರಿಸಬೇಡಿ ಎಂದು ಹೇಳಿದೆ.

ಇತರ ಸಮುದಾಯದ ಜನರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದನ್ನು ತಡೆಯುವುದು ಅಥವಾ ಅನುಮತಿ ನೀಡದಿರುವುದು ತಪ್ಪು ಎಂದು ಹೇಳಿದೆ. ಈ ಬಗ್ಗೆ ಸರಿಯಾದ ಕಾರಣ ಇದ್ದರೆ ತಿಳಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಹೇಳಿದೆ.

ಸಮಾರಂಭದ ಪ್ರದರ್ಶನ ಅಥವಾ ಈ ಸಂದರ್ಭದಲ್ಲಿ ವಿಶೇಷ ಪೂಜೆ ಅಥವಾ ಭಜನೆಗಳನ್ನು ನಡೆಸುವುದಕ್ಕೆ ಯಾವುದೇ ನಿಷೇಧವಿಲ್ಲ ಎಂದು ತಮಿಳುನಾಡು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ರಾಮ್ ಲಲ್ಲಾ ‘ಪ್ರಾಣ-ಪ್ರತಿಷ್ಠೆ’ ಸಮಾರಂಭದ ನೇರ ಪ್ರಸಾರವನ್ನು ಕೆಲವೊಂದು ಪ್ರದೇಶದಲ್ಲಿ ನಿರಾಕರಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದ ಕ್ರಮದ ಬಗ್ಗೆ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ತುರ್ತು ವಿಚಾರಣೆ ಮಾಡುವಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕೋರಿಕೊಂಡಿತ್ತು. ಇದೀಗ ಸುಪ್ರೀಂ ಇಂದು ಈ ಅರ್ಜಿಯನ್ನು ವಿಚಾರಣೆ ಮಾಡಿ, ಈ ನಿರ್ಧಾರವನ್ನು ತಿಳಿಸಿದೆ.

ಇದನ್ನೂ ಓದಿ: ರಾಮಮಂದಿರ ಕಾರ್ಯಕ್ರಮ ನೇರ ಪ್ರಸಾರ ರದ್ದು ಮಾಡಿದ ತಮಿಳುನಾಡು ಸರ್ಕಾರ: ನಿರ್ಮಲಾ ಸೀತಾರಾಮನ್, ಅಣ್ಣಾಮಲೈ ಖಂಡನೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ವಿನೋಜ್ ಪಿ ಸೆಲ್ವಂ ಪರ ವಕೀಲ ಜಿ ಬಾಲಾಜಿ ಅವರು ಅರ್ಜಿ ಸಲ್ಲಿಸಿದ್ದಾರೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ರಾಮನ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ದೇವಸ್ಥಾನಗಳಲ್ಲಿ ನೇರಪ್ರಸಾರ ಮಾಡುವುದನ್ನು ನಿಷೇಧಿಸಿದೆ ಎಂದು ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!