ರಾಮಭಕ್ತರೇ ಆತಂಕ ಬೇಡ, ನೀವು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಅಯೋಧ್ಯೆ ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ

ಅಯೋಧ್ಯೆ ಶ್ರೀರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದಂತೆ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದಾರೆ. ವರದಿಗಳಿಂದ ಆಘಾತಗೊಂಡಿರುವ ಟ್ರಸ್ಟ್, ನಿಷ್ಪಕ್ಷಪಾತ ತನಿಖೆಗೆ ಬದ್ಧವಾಗಿದೆ. ಭಕ್ತರ ದೇಣಿಗೆ, ಚಿನ್ನ-ಬೆಳ್ಳಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಪಷ್ಟಪಡಿಸಿದೆ. ಮುಂಬರುವ ಸಭೆಯಲ್ಲಿ ರಾಜೀನಾಮೆಗಳ ಕುರಿತು ಚರ್ಚಿಸಲಾಗುವುದು.

ರಾಮಭಕ್ತರೇ ಆತಂಕ ಬೇಡ, ನೀವು ನೀಡಿದ ಬೆಳ್ಳಿ ಇಟ್ಟಿಗೆ, ಒಡವೆಗಳು ಸುರಕ್ಷಿತ; ಅಯೋಧ್ಯೆ ಟ್ರಸ್ಟ್‌ನಿಂದ ಪತ್ರಿಕಾ ಪ್ರಕಟಣೆ
ಅಯೋಧ್ಯೆ ರಾಮ ಮಂದಿರ

Updated on: Jun 27, 2026 | 6:00 PM

ಮುಖ್ಯಾಂಶಗಳು

  • ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಪತ್ರಿಕಾ ಪ್ರಕಟಣೆ
  • ರಾಮಭಕ್ತರಿಗೆ ಸಂಪೂರ್ಣ ಭರವಸೆ ನೀಡಲು ನಾವು ಬದ್ಧರಾಗಿದ್ದೇವೆ
  • ಚಿನ್ನಾಭರಣಗಳು ಸೇರಿದಂತೆ ಪ್ರತಿಯೊಂದು ವಸ್ತುವೂ ಅತ್ಯಂತ ಸುರಕ್ಷಿತ

ಅಯೋಧ್ಯೆ ಜೂ.27: ಇಡೀ ದೇಶವೇ ಅತ್ಯಂತ ಪವಿತ್ರ ಭಾವನೆಯಿಂದ ನೋಡುವ ಅಯೋಧ್ಯೆಯ ಶ್ರೀರಾಮ ಮಂದಿರದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ಆಘಾತಕಾರಿ ಬೆಳವಣಿಗೆಗಳ ಬೆನ್ನಲ್ಲೇ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಈ ವಿವಾದದ ಬೆನ್ನಲ್ಲೇ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಟ್ರಸ್ಟ್, “ಕಳೆದ ಕೆಲವು ದಿನಗಳಿಂದ ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದಂತೆ ವರದಿಯಾಗುತ್ತಿರುವ ಘಟನೆಗಳಿಂದ ನಮಗೆ ತೀವ್ರ ಆಘಾತವಾಗಿದೆ, ನೋವಾಗಿದೆ ಮತ್ತು ಆಳವಾದ ಸೌಹಾರ್ದತೆಗೆ ಧಕ್ಕೆಯಾಗಿದೆ. ಈ ಇಡೀ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಮತ್ತು ರಾಮಭಕ್ತರಿಗೆ ಸಂಪೂರ್ಣ ಭರವಸೆ ನೀಡಲು ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದೆ.

ಇಲ್ಲಿದೆ ನೋಡಿ ಎಕ್ಸ್​ ಪೋಸ್ಟ್​:

ರಾಮಮಂದಿರ ಆಂದೋಲನ ಹಾಗೂ ಮಂದಿರ ನಿರ್ಮಾಣದ ಉಸ್ತುವಾರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಇಬ್ಬರೂ ಹಿರಿಯ ಪದಾಧಿಕಾರಿಗಳ ರಾಜೀನಾಮೆ ಪತ್ರಗಳು ಈಗಾಗಲೇ ಟ್ರಸ್ಟ್ ಕೈಸೇರಿದ್ದು, ಮುಂಬರುವ ಟ್ರಸ್ಟ್‌ನ ತುರ್ತು ಸಭೆಯಲ್ಲಿ ಈ ರಾಜೀನಾಮೆಗಳ ಅಂಗೀಕಾರ ಹಾಗೂ ಮುಂದಿನ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: ರಾಮ ಮಂದಿರ ಹಗರಣ: ಚಂಪತ್ ರಾಯ್ ವಿರುದ್ಧ ತಿರುಗಿದ ಎಸ್‌ಐಟಿ ವರದಿ, ರೋಚಕ ರಹಸ್ಯ ಬಿಚ್ಚಿಟ್ಟ ರಹಸ್ಯ ಕ್ಯಾಮೆರಾ

ಭಕ್ತರ ಚಿನ್ನ-ಬೆಳ್ಳಿ ಸಂಪೂರ್ಣ ಸುರಕ್ಷಿತ:

ಮಂದಿರದ ದೇಣಿಗೆ ಹಾಗೂ ವಸ್ತುಗಳ ಸುರಕ್ಷತೆಯ ಬಗ್ಗೆ ಎದ್ದಿರುವ ಅನುಮಾನಗಳಿಗೆ ತೆರೆ ಎಳೆದಿರುವ ಟ್ರಸ್ಟ್, “ಪ್ರಭು ಶ್ರೀರಾಮನಿಗೆ ಅರ್ಪಿಸಲು ಭಕ್ತರು ವೈಯಕ್ತಿಕವಾಗಿ ಟ್ರಸ್ಟ್ ಅಧಿಕಾರಿಗಳಿಗೆ ಹಸ್ತಾಂತರಿಸಿದ ಬೆಳ್ಳಿ ಇಟ್ಟಿಗೆಗಳು, ಚಿನ್ನಾಭರಣಗಳು ಸೇರಿದಂತೆ ಪ್ರತಿಯೊಂದು ವಸ್ತುವೂ ಅತ್ಯಂತ ಸುರಕ್ಷಿತವಾಗಿದೆ. ಪ್ರತಿಯೊಂದಕ್ಕೂ ಸಂಪೂರ್ಣ ಲೆಕ್ಕಪತ್ರವಿದ್ದು, ಭಕ್ತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ದುರದೃಷ್ಟಕರ ಪರಿಸ್ಥಿತಿ ಮರುಕಳಿಸದಂತೆ ನಾವು ಎಲ್ಲಾ ರೀತಿಯ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ದೇಶದ ಕೋಟ್ಯಂತರ ರಾಮಭಕ್ತರಿಗೆ ಭರವಸೆ ನೀಡಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us