AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ

Vishwaprasanna Teertha Swami: ದೇಶವನ್ನು ರಾಮರಾಜ್ಯವನ್ನಾಗಿ ಪರಿವರ್ತಿಸುವುದು ನಮ್ಮ ಮುಂದಿನ ಧ್ಯೇಯೋದ್ದೇಶವಾಗಿದೆ. ಈ ನಿಟ್ಟಿನಲ್ಲಿ ಭಕ್ತರು ತಮ್ಮ ಕೊಡುಗೆಗಳನ್ನು ನೀಡುವಂತೆ ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ವಿನಂತಿಸಿದರು.

ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ
ಅಯೋಧ್ಯೆ: ಜನವರಿಯಲ್ಲಿ ರಾಮಮಂದಿರ ಉದ್ಘಾಟನೆ -ಪೇಜಾವರ ಶ್ರೀ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 08, 2023 | 11:01 AM

Share

ಮೈಸೂರು: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Teerth Kshetra Trust) ಸದಸ್ಯರೂ ಆಗಿರುವ ಪೇಜಾವರ ಮಠದ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳು (Pejawar mutt pontiff Vishwaprasanna Teertha Swami) ಮುಂದಿನ ವರ್ಷ ಸಂಕ್ರಾಂತಿಯ ನಂತರ, ಫೆಬ್ರವರಿಗೆ ಮೊದಲು ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ದೇಗುಲವನ್ನು ಉದ್ಘಾಟಿಸಲಾಗುವುದು ( inauguration) ಎಂದು ಸೋಮವಾರ ತಿಳಿಸಿದರು. ಪ್ರಧಾನಿಯವರೊಂದಿಗೆ ಸಮಾಲೋಚಿಸಿದ ನಂತರ ನಿಖರವಾದ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಅಯೋಧ್ಯೆಯ ಗರ್ಭಗುಡಿ ಕೆಲಸದಿಂದ ಮುಸ್ಲಿಂ ಗುತ್ತಿಗೆದಾರರು ಮತ್ತು ಕಾರ್ಮಿಕರ ಸೇವೆಗಳನ್ನು ಕೈಬಿಡುವಂತೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದನ್ನು ಉಲ್ಲೇಖಿಸಿದ ಮಠಾಧೀಶರು, ಹಲವಾರು ಉಪಸಮಿತಿಗಳ ಮೇಲ್ವಿಚಾರಣೆಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದರಲ್ಲಿ ಅವರ ಪಾತ್ರದ ಬಗ್ಗೆ ನನಗೆ ತಿಳಿದಿಲ್ಲ. ಏಕೆಂದರೆ ಆ ಸಮಿತಿಗಳಲ್ಲಿ ನಾನು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಪರೂಪವಾಗಿ ಮಹತ್ವದ ಅಂಚೆ ಯೋಜನೆಗೆ ನೋಂದಾಯಿಸಿಕೊಂಡ ದೇಶದ ಏಕೈಕ ಐದು ತಲೆಮಾರಿನ ಮಂಗಳೂರು ಕುಟುಂಬ!

ದೇಶವನ್ನು ರಾಮರಾಜ್ಯವನ್ನಾಗಿ (Ram Rajya) ಪರಿವರ್ತಿಸುವುದು ನಮ್ಮ ಮುಂದಿನ ಧ್ಯೇಯೋದ್ದೇಶವಾಗಿದೆ ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಹೇಳಿದರು ಮತ್ತು ಈ ನಿಟ್ಟಿನಲ್ಲಿ ಭಕ್ತರು ತಮ್ಮ ಕೊಡುಗೆಗಳನ್ನು ನೀಡುವಂತೆ ಅವರು ವಿನಂತಿಸಿದರು. ಮಣಿಪುರ ವಿಷಯದಲ್ಲಿ ಚೀನಾ ತೊಂದರೆಯನ್ನು ಉಂಟುಮಾಡುತ್ತಿದೆ ಎಂದು ಆರೋಪಿಸಿದರು ಸ್ವಾಮೀಜಿ, ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸಲು ನಾನು ನನ್ನ ಸೇವೆ ಒದಗಿಸಲು ನಾನು ಸಿದ್ಧವಾಗಿದ್ದೇನೆ ಎಂದು ಅವರು ತಿಳಿಸಿದರು

ಅಯೋಧ್ಯೆ ಕುರಿತಾದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ