AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ

Vishwaprasanna Teertha Swami: ದೇಶವನ್ನು ರಾಮರಾಜ್ಯವನ್ನಾಗಿ ಪರಿವರ್ತಿಸುವುದು ನಮ್ಮ ಮುಂದಿನ ಧ್ಯೇಯೋದ್ದೇಶವಾಗಿದೆ. ಈ ನಿಟ್ಟಿನಲ್ಲಿ ಭಕ್ತರು ತಮ್ಮ ಕೊಡುಗೆಗಳನ್ನು ನೀಡುವಂತೆ ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ವಿನಂತಿಸಿದರು.

ಅಯೋಧ್ಯೆಯಲ್ಲಿ ಮುಂದಿನ ಜನವರಿ ಅಂತ್ಯಕ್ಕೆ ಶ್ರೀ ರಾಮಮಂದಿರ ಉದ್ಘಾಟನೆಯಾಗಲಿದೆ: ಪೇಜಾವರ ಶ್ರೀ
ಅಯೋಧ್ಯೆ: ಜನವರಿಯಲ್ಲಿ ರಾಮಮಂದಿರ ಉದ್ಘಾಟನೆ -ಪೇಜಾವರ ಶ್ರೀ
ಸಾಧು ಶ್ರೀನಾಥ್​
|

Updated on: Aug 08, 2023 | 11:01 AM

Share

ಮೈಸೂರು: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Teerth Kshetra Trust) ಸದಸ್ಯರೂ ಆಗಿರುವ ಪೇಜಾವರ ಮಠದ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳು (Pejawar mutt pontiff Vishwaprasanna Teertha Swami) ಮುಂದಿನ ವರ್ಷ ಸಂಕ್ರಾಂತಿಯ ನಂತರ, ಫೆಬ್ರವರಿಗೆ ಮೊದಲು ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ದೇಗುಲವನ್ನು ಉದ್ಘಾಟಿಸಲಾಗುವುದು ( inauguration) ಎಂದು ಸೋಮವಾರ ತಿಳಿಸಿದರು. ಪ್ರಧಾನಿಯವರೊಂದಿಗೆ ಸಮಾಲೋಚಿಸಿದ ನಂತರ ನಿಖರವಾದ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಅಯೋಧ್ಯೆಯ ಗರ್ಭಗುಡಿ ಕೆಲಸದಿಂದ ಮುಸ್ಲಿಂ ಗುತ್ತಿಗೆದಾರರು ಮತ್ತು ಕಾರ್ಮಿಕರ ಸೇವೆಗಳನ್ನು ಕೈಬಿಡುವಂತೆ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದನ್ನು ಉಲ್ಲೇಖಿಸಿದ ಮಠಾಧೀಶರು, ಹಲವಾರು ಉಪಸಮಿತಿಗಳ ಮೇಲ್ವಿಚಾರಣೆಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದರಲ್ಲಿ ಅವರ ಪಾತ್ರದ ಬಗ್ಗೆ ನನಗೆ ತಿಳಿದಿಲ್ಲ. ಏಕೆಂದರೆ ಆ ಸಮಿತಿಗಳಲ್ಲಿ ನಾನು ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಪರೂಪವಾಗಿ ಮಹತ್ವದ ಅಂಚೆ ಯೋಜನೆಗೆ ನೋಂದಾಯಿಸಿಕೊಂಡ ದೇಶದ ಏಕೈಕ ಐದು ತಲೆಮಾರಿನ ಮಂಗಳೂರು ಕುಟುಂಬ!

ದೇಶವನ್ನು ರಾಮರಾಜ್ಯವನ್ನಾಗಿ (Ram Rajya) ಪರಿವರ್ತಿಸುವುದು ನಮ್ಮ ಮುಂದಿನ ಧ್ಯೇಯೋದ್ದೇಶವಾಗಿದೆ ಎಂದು ವಿಶ್ವ ಪ್ರಸನ್ನ ತೀರ್ಥ ಸ್ವಾಮಿ ಹೇಳಿದರು ಮತ್ತು ಈ ನಿಟ್ಟಿನಲ್ಲಿ ಭಕ್ತರು ತಮ್ಮ ಕೊಡುಗೆಗಳನ್ನು ನೀಡುವಂತೆ ಅವರು ವಿನಂತಿಸಿದರು. ಮಣಿಪುರ ವಿಷಯದಲ್ಲಿ ಚೀನಾ ತೊಂದರೆಯನ್ನು ಉಂಟುಮಾಡುತ್ತಿದೆ ಎಂದು ಆರೋಪಿಸಿದರು ಸ್ವಾಮೀಜಿ, ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಬಿಕ್ಕಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸಲು ನಾನು ನನ್ನ ಸೇವೆ ಒದಗಿಸಲು ನಾನು ಸಿದ್ಧವಾಗಿದ್ದೇನೆ ಎಂದು ಅವರು ತಿಳಿಸಿದರು

ಅಯೋಧ್ಯೆ ಕುರಿತಾದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?