AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಮುಂದಿನ ಪೀಳಿಗೆಗೂ ಸ್ಫೂರ್ತಿದಾಯಕವಾಗಲಿದೆ: ಪ್ರಧಾನಿ ಮೋದಿ

ಅಯೋಧ್ಯಾ:  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಇದೊಂದು ಐತಿಹಾಸಿಕ ಕ್ಷಣ,ಕೋಟ್ಯಂತರ  ಭಾರತೀಯರ ಮನದಲ್ಲಿ ದಶಕಗಳಿಂದ ಮನೆಮಾಡಿದ್ದ ಮಹದಾಸೆ ಇಂದು ನೆರವೇರಿದೆ ಎಂದು ಹೇಳಿದರು. “ವಿಶ್ವದಾದ್ಯಂತ ಇಂದು ರಾಮನ ಘೋಷವಾಕ್ಯ ಮೊಳಗುತ್ತಿದೆ. ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ನನ್ನಿಂದ ಮಾಡಿಸುತ್ತಿರವುದು ನನ್ನ ಸೌಭಾಗ್ಯ ಮತ್ತು ನನಗೆ ಸಂದಿರುವ ಅತಿ ದೊಡ್ಡ ಗೌರವ. ನನಗೆ ಈ ಅವಕಾಶ ಕಲ್ಪಿಸಿದ ಶ್ರೀರಾಮ ಜನ್ಮಭೂಮಿ ಟ್ರಸ್ಟ್​ಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ,”ಎಂದು ಹೇಳಿದ ಪ್ರಧಾನಿ ಮೋದಿ, […]

ರಾಮಮಂದಿರ ಮುಂದಿನ ಪೀಳಿಗೆಗೂ ಸ್ಫೂರ್ತಿದಾಯಕವಾಗಲಿದೆ: ಪ್ರಧಾನಿ ಮೋದಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 05, 2020 | 4:52 PM

Share

ಅಯೋಧ್ಯಾ:  ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಇದೊಂದು ಐತಿಹಾಸಿಕ ಕ್ಷಣ,ಕೋಟ್ಯಂತರ  ಭಾರತೀಯರ ಮನದಲ್ಲಿ ದಶಕಗಳಿಂದ ಮನೆಮಾಡಿದ್ದ ಮಹದಾಸೆ ಇಂದು ನೆರವೇರಿದೆ ಎಂದು ಹೇಳಿದರು.

ವಿಶ್ವದಾದ್ಯಂತ ಇಂದು ರಾಮನ ಘೋಷವಾಕ್ಯ ಮೊಳಗುತ್ತಿದೆ. ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ನನ್ನಿಂದ ಮಾಡಿಸುತ್ತಿರವುದು ನನ್ನ ಸೌಭಾಗ್ಯ ಮತ್ತು ನನಗೆ ಸಂದಿರುವ ಅತಿ ದೊಡ್ಡ ಗೌರವ. ನನಗೆ ಈ ಅವಕಾಶ ಕಲ್ಪಿಸಿದ ಶ್ರೀರಾಮ ಜನ್ಮಭೂಮಿ ಟ್ರಸ್ಟ್​ಗೆ ನನ್ನ ಧನ್ಯವಾದಗಳನ್ನು ಅರ್ಪಿಸುತ್ತೇನೆ,”ಎಂದು ಹೇಳಿದ ಪ್ರಧಾನಿ ಮೋದಿ, ಈ ಕ್ಷಣಕ್ಕಾಗಿ ಕಾದ ಭಾರತೀಯರೆಲ್ಲ ರೋಮಾಂಚಿತರಾಗಿದ್ದಾರೆ ಎಂದರು.

ದೇಶದ ಮೂಲೆ ಮೂಲೆಯಲ್ಲೂ ಇಂದು ರಾಮನಾಮ ಜಪಿಸಲಾಗುತ್ತಿದೆ, ಭಗವಾನ್ ಭಾಸ್ಕರನ ಪ್ರಸನ್ನತೆಯಲ್ಲಿ, ಸರಯೂ ನದಿ ತೀರದಲ್ಲಿ ಹೊಸ ಅಧ್ಯಾಯ ಆರಂಭಗೊಂಡಿದೆ. ಜೈ ಶ್ರೀರಾಮ ಘೋಷಣೆ ಕೇವಲ ರಾಮನ ನಗರದಲ್ಲಿ ಮಾತ್ರವಲ್ಲ, ವಿಶ್ವದಾದ್ಯಂತ ಮೊಳಗುತ್ತಿದೆ. ನಾಡಿನ ಸಮಸ್ತ ನಾಗರಿಕರಿಗೆ, ವಿಶ್ವದ ನಾನಾ ಭಾಗಗಳಲ್ಲಿ ವಾಸವಾಗಿರುವ ಭಾರತೀಯರಿಗೆ, ಮತ್ತು ಎಲ್ಲಾ ರಾಮಭಕ್ತರಿಗೆ ನನ್ನ ಕೃತಙ್ಞತೆಗಳನ್ನು ಸಮರ್ಪಿಸುತ್ತೇನೆ,” ಎಂದು ಮೋದಿ ಹೇಳಿದರು.

ಟೆಂಟ್​ನಲ್ಲಿ ವಾಸಮಾಡುತ್ತಿದ್ದ ನಮ್ಮ ರಾಮಲಲ್ಲಾನಿಗೆ ಒಂದು ಭವ್ಯ ಮಂದಿರವನ್ನು ನಿರ್ಮಿಸಲಾಗುತ್ತದೆ. ಶತಮಾನಗಳಿಂದ ನಡೆಯುತ್ತಿದ್ದ ವ್ಯಾಜ್ಯ ಕೊನೆಗೊಂಡಿದ್ದು ರಾಮನ ಭೂಮಿ ಈಗ ವಿವಾದಮುಕ್ತವಾಗಿದೆ. ಇಲ್ಲಿ ನಿರ್ಮಾಣಗೊಳ್ಳುವ ಮಂದಿರವು ನಮ್ಮ ಪರಂಪರೆಗಳ ಆಧುನಿಕ ಮತ್ತು  ಕೋಟ್ಯಂತರ ಭಾರತೀಯರ ಸಾಮೂಹಿಕ ಸಂಕಲ್ಪದ ಪ್ರತೀಕವಾಗಿರುತ್ತದೆ. ಮುಂಬರುವ ಪೀಳಿಗೆಗಳಿಗೆ ಈ ಮಂದಿರ ಸ್ಫೂರ್ತಿದಾಯಕವಾಗಿರಲಿದೆ,” ಎಂದು ಪ್ರಧಾನಿ ಹೇಳಿದರು.

ಶ್ರೀರಾಮ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು ಕೇವಲ ಇತಿಹಾಸವನ್ನು ಮಾತ್ರ ಸೃಷ್ಟಿಸಿಲ್ಲ, ಅದನ್ನು ಪುನರಾವರ್ತನೆಗೊಳಿಸಿದೆ. ನಾವಿಕರು ಮತ್ತು ಬುಡಕಟ್ಟು ಜನಾಂಗದವರು, ಭಗವಾನ್ ರಾಮನಿಗೆ ಸಹಾಯ ಮಾಡಿದಂತೆ ಹಾಗೂ ಗೋವರ್ಧನ ಪರ್ವತವನ್ನು ಎತ್ತಲು, ಮಕ್ಕಳು ಶ್ರೀಕೃಷ್ಣನಿಗೆ ನೆರವಾದಂತೆಯೇ ಪ್ರತಿಯೊಬ್ಬ ಭಾರತೀಯನ ಪ್ರಯತ್ನವು ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲು ಸಹಾಯವಾಗುತ್ತದೆ,” ಎಂದು ಪ್ರಧಾನಿ ಹೇಳಿದರು.

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಭವ್ಯ ರಾಮಮಂದಿರವು ಶ್ರೀರಾಮನ ಹೆಸರಿನಂತೆಯೇ ಭಾರತದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಮತ್ತು ನಿರಂತರ ಸ್ಫೂರ್ತಿಯ ಸೆಲೆಯಾಗಿರುತ್ತದೆ ಎಂಬ ನಂಬಿಕೆ ನನ್ನಲ್ಲಿದೆ,” ಎಂದು ಮೋದಿ ಹೇಳಿದರು.

ನಾವಿಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೆಂದರೆ, ಮನುಕುಲ ರಾಮನನ್ನು ನಂಬಿದಂತೆಲ್ಲ ಅದರ ಅಭಿವೃದ್ಧಿಯಾಗಿದೆ. ಆತನು ತೋರಿದ ಪಥದಿಂದ ವಿಮುಖರಾದಾಗಲೆಲ್ಲ ನಾಶದ ಬಾಗಿಲು ತೆರೆದುಕೊಂಡಿದೆ. ಪ್ರತಿಯೊಬ್ಬ ಭಾರತೀಯನ ಭಾವನೆಗಳನ್ನು ನಾವು ಗೌರವಿಸಬೇಕು. ವಿಶ್ವಾಸ ಮತ್ತು ಪರಸ್ಪರ ಬೆಂಬಲದ ಮೂಲಕ ಪ್ರತಿಯೊಬ್ಬರ ಅಭಿವೃದ್ಧಿ ಸಾಕಾರಗೊಳ್ಳವಂತೆ ಮಾಡಬೇಕು,” ಎಂದು ನರೇಂದ್ರ ಮೋದಿ ಹೇಳಿದರು.

ಇಡೀ ದೇಶಕ್ಕೆ ಇದೊಂದು ಭಾವನಾತ್ಮಕ ಕ್ಷಣ, ಎಲ್ಲರ ಹೃದಯಗಳಲ್ಲಿ ಬೆಳಕು ಮೂಡಿದೆ ಎಂದು ಹೇಳುತ್ತಾ, ಮತ್ತೊಮ್ಮೆ ಜೈ ಶ್ರೀರಾಮ ಎಂದು ಘೋಷಣೆ ಕೂಗುತ್ತಾ ಪ್ರಧಾನಿ ನರೇಂದ್ರ ಮೋದಿ ಮಾತು ಮುಗಿಸಿದರು.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ