AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಹಣೆಯ ಸ್ಪರ್ಶಿಸಿದ ಸೂರ್ಯರಶ್ಮಿ

ಮಂದಿರ ನಿರ್ಮಾಣವಾದ ನಂತರ ಇದೆ ಮೊದಲ ಬಾರಿ ಅಯೋಧ್ಯೆಯಲ್ಲಿ ರಾಮನವಮಿಯನ್ನು ಆಚರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ. ಈ ಹಿಂದೆ ವಿಜ್ಞಾನಿಗಳು ಅಯೋಧ್ಯೆಯಲ್ಲಿ ಸೂರ್ಯರಶ್ಮಿಯ ಪ್ರಯೋಗವನ್ನು ಮಾಡಿದ್ದಾರೆ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR)-ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (CBRI), ರೂರ್ಕಿಯ ಹಿರಿಯ ವಿಜ್ಞಾನಿಗಳ ಪ್ರಕಾರ, ಯೋಜಿತ ಈ ಸೂರ್ಯರಶ್ಮಿಯು 58 ಮಿ.ಮೀ. ಗಾತ್ರವನ್ನು ಹೊಂದಿದ್ದು, ರಾಮ ಲಲ್ಲಾನ ಹಣೆಯ ಮೇಲೆ ತಿಲಕದಂತೆ ಪ್ರಜ್ವಲಿಸಲಿದೆ ಎಂದು ಹೇಳಿದ್ದಾರೆ. ಈ ಹಿಂದೆ ಸೂರ್ಯರಶ್ಮಿಯನ್ನು ಎಲ್ಲೆಲ್ಲಿ ಪ್ರಯೋಗ ಮಾಡಲಾಗಿದೆ ಇಲ್ಲಿದೆ ಮಾಹಿತಿ.

Ram Navami 2024: ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಹಣೆಯ ಸ್ಪರ್ಶಿಸಿದ ಸೂರ್ಯರಶ್ಮಿ
ಅಕ್ಷಯ್​ ಪಲ್ಲಮಜಲು​​
|

Updated on:Apr 17, 2024 | 1:47 PM

Share

ಅಯೋಧ್ಯೆ, ಏ.17: ಅಯೋಧ್ಯೆ ರಾಮಮಂದಿರದಲ್ಲಿ(Ayodhya Ram Mandir) ರಾಮಲಲ್ಲಾನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ. ಕೋಟ್ಯಾಂತರ ಭಕ್ತ ಆಸೆಯಂತೆ, 500 ವರ್ಷಗಳ ಹೋರಾಟದ ಫಲವಾಗಿ ಜನವರಿ 22ರಂದು ಮಂದಿರ ನಿರ್ಮಾಣವಾಗಿ ಬಾಲ ರಾಮನ ಪ್ರತಿಷ್ಠೆ ಕೂಡ ನಡೆದಿತ್ತು. ಇದೀಗ ರಾಮ ಮಂದಿರ ನಿರ್ಮಾಣವಾದ ನಂತರ ಮೊದಲ ರಾಮ ನವಮಿಯನ್ನು ಆಚರಣೆ ಮಾಡಲಾಗಿದೆ. ಈ ಸಮಯದಲ್ಲಿ ಬಾಲ ರಾಮನ ಮೇಲೆ ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಕನ್ನಡಿಗಳು ಮತ್ತು ಮಸೂರಗಳನ್ನು ಒಳಗೊಂಡಿರುವ ಒಂದು ದೀರ್ಘವಧಿಯ ಕಾರ್ಯವಿಧಾನವಾಗಿದೆ. ಸೂರ್ಯರಶ್ಮಿ ನೇರವಾಗಿ ರಾಮ ಹಣೆಗೆ ಬೀಳುವಂತೆ ಮಾಡಲು ಈ ಹಿಂದೆ ವಿಜ್ಞಾನಿಗಳು ಒಂದು ಪ್ರಯೋಗವನ್ನು ಕೂಡ ನಡೆಸಿದರು. ಇದೀಗ ಈ ವಿಧಾನ ಯಶಸ್ವಿಯಾಗಿದೆ. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮನ ವಿಗ್ರಹವನ್ನು ಪ್ರಾಣ ಪ್ರತಿಷ್ಠೆಯನ್ನು ಮಾಡಲಾಗಿತ್ತು.

ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR)-ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (CBRI), ರೂರ್ಕಿಯ ಹಿರಿಯ ವಿಜ್ಞಾನಿಗಳ ಪ್ರಕಾರ, ಯೋಜಿತ ಈ ಸೂರ್ಯರಶ್ಮಿಯು 58 ಮಿ.ಮೀ. ಗಾತ್ರವನ್ನು ಹೊಂದಿದ್ದು, ರಾಮ ಲಲ್ಲಾನ ಹಣೆಯ ಮೇಲೆ ತಿಲಕದಂತೆ ಪ್ರಜ್ವಲಿಸಲಿದೆ. ಇದು ಸುಮಾರು ಮೂರರಿಂದ ಮೂರೂವರೆ ನಿಮಿಷಗಳು ಮೂಡಲಿದೆ. ಎರಡು ನಿಮಿಷಗಳ ಪೂರ್ಣ ಪ್ರಕಾಶ ರಾಮನ ಮೇಲೆ ಬೀಳಲಿದೆ ಎಂದು ಹೇಳಿದರು.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ಈ ಹಿಂದೆ ಹೇಳಿರುವಂತೆ ಸೂರ್ಯರಶ್ಮಿ ರಾಮನನ್ನು ಸ್ಪರ್ಶ ಮಾಡುವ ಸಮಯದಲ್ಲಿ ರಾಮ ಭಕ್ತರಿಗೆ ಮಂದಿರದೊಳಗೆ ಅವಕಾಶ ನೀಡಲಾಗುವುದು. ದೇವಾಲಯದ ಟ್ರಸ್ಟ್‌ನಿಂದ ಸುಮಾರು 100 ಎಲ್‌ಇಡಿ ಸ್ಕ್ರೀನ್‌ಗಳನ್ನು ಹಾಕಲಾಗುತ್ತಿದೆ ಮತ್ತು ಸರ್ಕಾರದಿಂದ 50 ರಾಮನವಮಿ ಆಚರಣೆ ಲೈವ್​​​​ ಸ್ಕ್ರೀನ್​​ ನೋಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ಸೂರ್ಯರಶ್ಮಿ ಪ್ರಯೋಗ, ಎಲ್ಲೆಲ್ಲಿ ನಡೆದಿದೆ ಈ ಪ್ರಯೋಗ?

ಸೂರ್ಯರಶ್ಮಿ ಎಂದರೇನು?

ವಾಸ್ತುಶಿಲ್ಪದ ಕೆಲವು ತಂತ್ರಗಳು ನಮ್ಮನ್ನು ಮೂಕನಾಗಿಸುತ್ತದೆ. ಅದರಲ್ಲಿ ಇದು ಒಂದು. ನಿಮಗೆ ತಿಳಿದಿರಬಹುದು ಸೂರ್ಯನು ಸ್ಥಿರವಾಗಿರುವುದಿಲ್ಲ. ಅವನು ಚಲಿಸುತ್ತಾನೆ ಎಂದು ವಿಜ್ಞಾನ ಹೇಳುತ್ತದೆ. ಇನ್ನು ಸೂರ್ಯ ದೇವರು ರಥದ ಮೇಲೆ ಸವಾರಿ ಮಾಡುತ್ತಾನೆ ಎಂದು ವೇದಗಳು ಹೇಳುತ್ತವೆ. ಜೊತೆಗೆ ಬಣ್ಣವು ಸೂರ್ಯನೊಂದಿಗೆ ನಿಕಟ ಸಂಬಂಧವನ್ನು ಹೊಂದಿದೆ ಎನ್ನಲಾಗುತ್ತದೆ. ಇವುಗಳ ಆಧಾರದ ಮೇಲೆ ಪ್ರಾಚೀನ ವಾಸ್ತು ತಂತ್ರಜ್ಞಾನಗಳನ್ನು ಬಳಸಿಕೊಂಡು ದೇವರ ಮೇಲೆ ಸೂರ್ಯನ ಕಿರಣಗಳು ಬೀಳುವಂತೆ ಮಾಡುತ್ತಾರೆ. ಸೂರ್ಯನ ಚಲನೆಯ ಆಧಾರದ ಮೇಲೆ ಈ ಪ್ರಯೋಗವನ್ನು ಮಾಡಲಾಗುತ್ತದೆ.

ಎಲ್ಲೆಲ್ಲಿ ನಡೆದಿದೆ ಸೂರ್ಯರಶ್ಮಿ ಪ್ರಯೋಗ?

ಅಯೋದ್ಯೆಯಲ್ಲಿ ಮಾಡಿರುವ ಸೂರ್ಯರಶ್ಮಿ ಪ್ರಯೋಗವನ್ನು ಈಗಾಗಲೇ ಕೆಲವು ಜೈನ ದೇವಾಲಯಗಳಲ್ಲಿ ಮತ್ತು ಒರಿಸ್ಸಾ ರಾಜ್ಯದಲ್ಲಿರುವ ಕೊನಾರ್ಕ್‌ ಸೂರ್ಯ ದೇವಾಲಯದಲ್ಲಿಯೂ ಈ ಪ್ರಯೋಗ ನಡೆದಿದೆ ಆದರೆ ಅವುಗಳನ್ನು ವಿಭಿನ್ನವಾಗಿ ವಿನ್ಯಾಸಗೊಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:28 pm, Wed, 17 April 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್