AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮನವಮಿ ವಿಶೇಷ ಪೂಜೆಗಳ ಬಗ್ಗೆ ಮಾಹಿತಿ ಹಂಚಿಕೊಂಡ ಗೋಪಾಲ್​ ಜಿ

ಅಯೋಧ್ಯೆಯಲ್ಲಿ ಇತ್ತೀಚೆಗಷ್ಟೇ ನೂತನ ರಾಮ ಮಂದಿರ ನಿರ್ಮಾಣಗೊಂಡು ಉದ್ಘಾಟನೆಯೂ ನೆರವೇರಿದೆ. ಈ ನೂತನ ರಾಮ ಮಂದಿರದಲ್ಲಿ ಮೊದಲ ಬಾರಿಗೆ ರಾಮನವಮಿ ಕಾರ್ಯಕ್ರಮಗಳು ಜರುಗಲಿವೆ. ಏಪ್ರಿಲ್​ 17ರಂದು ನಡೆಯಲಿರುವ ವಿಶೇಷ ಪೂಜೆ, ಕಾರ್ಯಕ್ರಮಗಳ ಕುರಿತು ವಿಶ್ವಹಿಂದೂ ಪರಿಷತ್​ನ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್​ ಜಿ ನೀಡಿರುವ ಮಾಹಿತಿ ಇಲ್ಲಿದೆ.

Ram Navami 2024: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮನವಮಿ ವಿಶೇಷ ಪೂಜೆಗಳ ಬಗ್ಗೆ ಮಾಹಿತಿ ಹಂಚಿಕೊಂಡ ಗೋಪಾಲ್​ ಜಿ
ಗೋಪಾಲ್​ ಜಿ
ನಯನಾ ರಾಜೀವ್
|

Updated on: Apr 16, 2024 | 10:14 AM

Share

ಅಯೋಧ್ಯೆ(Ayodhya)ಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮ ಮಂದಿರ(Ram Mandir)ದಲ್ಲಿ ಈ ವರ್ಷ ಮೊದಲ ರಾಮನವಮಿ ಕಾರ್ಯಕ್ರಮಗಳು ಜರುಗಲಿವೆ. ಈ ಕುರಿತು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಕಾರ್ಯದರ್ಶಿ ಹಾಗೂ ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ಉಸ್ತುವಾರಿವಹಿಸಿಕೊಂಡಿರುವ ಗೋಪಾಲ್​ ಜಿ ಮಾಹಿತಿ ನೀಡಿದ್ದಾರೆ.

ಶ್ರೀರಾಮನ ಹೊಸ ಮಂದಿರದಲ್ಲಿ ಮೊದಲ ರಾಮ ನವಮಿ ಉತ್ಸವ ನಡೆಯುತ್ತಿದೆ, ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ವತಿಯಿಂದ ಅನೇಕ ವ್ಯವಸ್ಥೆ ಮಾಡಲಾಗಿದೆ. ಬರುವಂತಹ ಭಕ್ತಾದಿಗಳಿಗೆ ಸರಿಯಾದ ವ್ಯಸವ್ಥೆ, ಬಿಸಿಲ ಝಳ ತಾಕಬಾರದೆಂದು ಜರ್ಮನ್ ಹ್ಯಾಂಗರ್ ವ್ತವಸ್ಥೆ, ನೆರಳಿನ ವ್ಯವಸ್ಥೆ, ನೀರು, ಶೌಚಾಲಯ, ಚಪ್ಪಲಿ ಹಾಗೂ ಇತರೆ ಸಾಮಾನುಗಳನ್ನು ಇರಿಸಲು ಸರಿಯಾದ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಮನವಮಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಏಪ್ರಿಲ್​ 17ರಂದು ರಾಮನವಮಿ ಕಾರ್ಯಕ್ರಮವು ಬೆಳಗಿನ ಜಾವ ರಾಮನನ್ನು ಎಬ್ಬಿಸುವ ಮಂಗಲ ಆರತಿಯಿಂದ ಶುರುವಾಗುತ್ತದೆ. ಬಳಿಕ ಬಾಲ ರಾಮನಿಗೆ ಪಂಚಾಮೃತ ಅಭಿಷೇಕ ಹಾಗೂ ಶೃಂಗಾರ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆಯಲಿದೆ. 6 ಗಂಟೆಗೆ ಮೊದಲ ಶೃಂಗಾರ ಆರತಿ ನಡೆಯಲಿದ್ದು ದೂರದರ್ಶನದಲ್ಲಿ ನೇರಪ್ರಸಾರವನ್ನು ನೀವು ಮನೆಯಲ್ಲಿಯೇ ಕುಳಿತು ವೀಕ್ಷಿಸಬಹುದಾಗಿದೆ.

ಮತ್ತಷ್ಟು ಓದಿ: Ram Navami 2024: ರಾಮ ಮನುಷ್ಯ ರೂಪದಲ್ಲಿ ಭೂಮಿಗೆ ಬಂದ ದಿನ ರಾಮನವಮಿ, ಇದರ ಇತಿಹಾಸ, ಮಹತ್ವ ಇಲ್ಲಿದೆ

ನಿತ್ಯವೂ ರಾಮ ಮಂದಿರದಲ್ಲಿ ರಾಮಾಯಣ, ವಾಲ್ಮೀಕಿ ರಾಮಾಯಣದ ಪಾಠ, ರಾಮಚರಿತ ಪಾಠ ನಡೆಯುತ್ತಿದೆ. ಪ್ರತಿನಿತ್ಯ ಸಂಜೆ ರಾಮನ ಗಾಯನ ಮಾಡುತ್ತಿದ್ದೇವೆ, 17ರಂದು ಮಧ್ಯಾಹ್ನ 12 ಗಂಟೆಗೆ ರಾಮನ ಪ್ರಕಟೋತ್ಸವ, ಅದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಮೊದಲಿದ್ದಂತ ಉತ್ಸವ ಮೂರ್ತಿ ರಾಮ, ಲಕ್ಷ್ಮಣ, ಭರತ ಶತ್ರುಘ್ನ ಅಭಿಶೇಷ ನಡೆಯಲಿದೆ.

12 ಗಂಟೆಗೆ ಸರಿಯಾಗಿ ಆರತಿ ಮೂಲಕ ಪ್ರಕಟೋತ್ಸವ ನಡೆಯಲಿದೆ, ರಾಮ ಸೂರ್ಯವಂಶಿಯಾದ್ದರಿಂದ ರಾಮನ ಹಣೆಯನ್ನು ಪ್ರಕಾಶಿಸುವ ಸೂರ್ಯ ತಿಲಕ ಪ್ರಯೋಗ ಯಶಸ್ವಿ ಈಗಾಗಲೇ ಯಶಸ್ವಿಯಾಗಿದ್ದು, ಮೂರು ನಿಮಿಷಗಳ ಸೂರ್ಯ ತಿಲಕದಿಂದ ರಾಮನ ಹಣೆಯನ್ನು ಪ್ರಕಾಶಿತಗೊಳಿಸುವುದನ್ನು ನೀವು ಕಣ್ತುಂಬಿಕೊಳ್ಳಬಹುದು. ಪ್ರತಿಯೊಬ್ಬ ಭಕ್ತರೂ ರಾಮನನ್ನು ಅಲ್ಲಿಗೆ ಬಂದಾದರೂ ಅಥವಾ ಮನೆಯಲ್ಲೇ ಇದ್ದುಕೊಂಡು ರಾಮನ ಆಶೀರ್ವಾದಕ್ಕೆ ಪ್ರಾಪ್ತರಾಗಿ ಎಂದು ಗೋಪಾಲ್​ ಜಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ