Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami 2024: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮನವಮಿ ವಿಶೇಷ ಪೂಜೆಗಳ ಬಗ್ಗೆ ಮಾಹಿತಿ ಹಂಚಿಕೊಂಡ ಗೋಪಾಲ್​ ಜಿ

ಅಯೋಧ್ಯೆಯಲ್ಲಿ ಇತ್ತೀಚೆಗಷ್ಟೇ ನೂತನ ರಾಮ ಮಂದಿರ ನಿರ್ಮಾಣಗೊಂಡು ಉದ್ಘಾಟನೆಯೂ ನೆರವೇರಿದೆ. ಈ ನೂತನ ರಾಮ ಮಂದಿರದಲ್ಲಿ ಮೊದಲ ಬಾರಿಗೆ ರಾಮನವಮಿ ಕಾರ್ಯಕ್ರಮಗಳು ಜರುಗಲಿವೆ. ಏಪ್ರಿಲ್​ 17ರಂದು ನಡೆಯಲಿರುವ ವಿಶೇಷ ಪೂಜೆ, ಕಾರ್ಯಕ್ರಮಗಳ ಕುರಿತು ವಿಶ್ವಹಿಂದೂ ಪರಿಷತ್​ನ ಕೇಂದ್ರೀಯ ಕಾರ್ಯದರ್ಶಿ ಗೋಪಾಲ್​ ಜಿ ನೀಡಿರುವ ಮಾಹಿತಿ ಇಲ್ಲಿದೆ.

Ram Navami 2024: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮನವಮಿ ವಿಶೇಷ ಪೂಜೆಗಳ ಬಗ್ಗೆ ಮಾಹಿತಿ ಹಂಚಿಕೊಂಡ ಗೋಪಾಲ್​ ಜಿ
ಗೋಪಾಲ್​ ಜಿ
Follow us
ನಯನಾ ರಾಜೀವ್
|

Updated on: Apr 16, 2024 | 10:14 AM

ಅಯೋಧ್ಯೆ(Ayodhya)ಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಮ ಮಂದಿರ(Ram Mandir)ದಲ್ಲಿ ಈ ವರ್ಷ ಮೊದಲ ರಾಮನವಮಿ ಕಾರ್ಯಕ್ರಮಗಳು ಜರುಗಲಿವೆ. ಈ ಕುರಿತು ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಕಾರ್ಯದರ್ಶಿ ಹಾಗೂ ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ಉಸ್ತುವಾರಿವಹಿಸಿಕೊಂಡಿರುವ ಗೋಪಾಲ್​ ಜಿ ಮಾಹಿತಿ ನೀಡಿದ್ದಾರೆ.

ಶ್ರೀರಾಮನ ಹೊಸ ಮಂದಿರದಲ್ಲಿ ಮೊದಲ ರಾಮ ನವಮಿ ಉತ್ಸವ ನಡೆಯುತ್ತಿದೆ, ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ವತಿಯಿಂದ ಅನೇಕ ವ್ಯವಸ್ಥೆ ಮಾಡಲಾಗಿದೆ. ಬರುವಂತಹ ಭಕ್ತಾದಿಗಳಿಗೆ ಸರಿಯಾದ ವ್ಯಸವ್ಥೆ, ಬಿಸಿಲ ಝಳ ತಾಕಬಾರದೆಂದು ಜರ್ಮನ್ ಹ್ಯಾಂಗರ್ ವ್ತವಸ್ಥೆ, ನೆರಳಿನ ವ್ಯವಸ್ಥೆ, ನೀರು, ಶೌಚಾಲಯ, ಚಪ್ಪಲಿ ಹಾಗೂ ಇತರೆ ಸಾಮಾನುಗಳನ್ನು ಇರಿಸಲು ಸರಿಯಾದ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಮನವಮಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಏಪ್ರಿಲ್​ 17ರಂದು ರಾಮನವಮಿ ಕಾರ್ಯಕ್ರಮವು ಬೆಳಗಿನ ಜಾವ ರಾಮನನ್ನು ಎಬ್ಬಿಸುವ ಮಂಗಲ ಆರತಿಯಿಂದ ಶುರುವಾಗುತ್ತದೆ. ಬಳಿಕ ಬಾಲ ರಾಮನಿಗೆ ಪಂಚಾಮೃತ ಅಭಿಷೇಕ ಹಾಗೂ ಶೃಂಗಾರ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆಯಲಿದೆ. 6 ಗಂಟೆಗೆ ಮೊದಲ ಶೃಂಗಾರ ಆರತಿ ನಡೆಯಲಿದ್ದು ದೂರದರ್ಶನದಲ್ಲಿ ನೇರಪ್ರಸಾರವನ್ನು ನೀವು ಮನೆಯಲ್ಲಿಯೇ ಕುಳಿತು ವೀಕ್ಷಿಸಬಹುದಾಗಿದೆ.

ಮತ್ತಷ್ಟು ಓದಿ: Ram Navami 2024: ರಾಮ ಮನುಷ್ಯ ರೂಪದಲ್ಲಿ ಭೂಮಿಗೆ ಬಂದ ದಿನ ರಾಮನವಮಿ, ಇದರ ಇತಿಹಾಸ, ಮಹತ್ವ ಇಲ್ಲಿದೆ

ನಿತ್ಯವೂ ರಾಮ ಮಂದಿರದಲ್ಲಿ ರಾಮಾಯಣ, ವಾಲ್ಮೀಕಿ ರಾಮಾಯಣದ ಪಾಠ, ರಾಮಚರಿತ ಪಾಠ ನಡೆಯುತ್ತಿದೆ. ಪ್ರತಿನಿತ್ಯ ಸಂಜೆ ರಾಮನ ಗಾಯನ ಮಾಡುತ್ತಿದ್ದೇವೆ, 17ರಂದು ಮಧ್ಯಾಹ್ನ 12 ಗಂಟೆಗೆ ರಾಮನ ಪ್ರಕಟೋತ್ಸವ, ಅದಕ್ಕೂ ಮುನ್ನ ಬೆಳಗ್ಗೆ 11 ಗಂಟೆಗೆ ಮೊದಲಿದ್ದಂತ ಉತ್ಸವ ಮೂರ್ತಿ ರಾಮ, ಲಕ್ಷ್ಮಣ, ಭರತ ಶತ್ರುಘ್ನ ಅಭಿಶೇಷ ನಡೆಯಲಿದೆ.

12 ಗಂಟೆಗೆ ಸರಿಯಾಗಿ ಆರತಿ ಮೂಲಕ ಪ್ರಕಟೋತ್ಸವ ನಡೆಯಲಿದೆ, ರಾಮ ಸೂರ್ಯವಂಶಿಯಾದ್ದರಿಂದ ರಾಮನ ಹಣೆಯನ್ನು ಪ್ರಕಾಶಿಸುವ ಸೂರ್ಯ ತಿಲಕ ಪ್ರಯೋಗ ಯಶಸ್ವಿ ಈಗಾಗಲೇ ಯಶಸ್ವಿಯಾಗಿದ್ದು, ಮೂರು ನಿಮಿಷಗಳ ಸೂರ್ಯ ತಿಲಕದಿಂದ ರಾಮನ ಹಣೆಯನ್ನು ಪ್ರಕಾಶಿತಗೊಳಿಸುವುದನ್ನು ನೀವು ಕಣ್ತುಂಬಿಕೊಳ್ಳಬಹುದು. ಪ್ರತಿಯೊಬ್ಬ ಭಕ್ತರೂ ರಾಮನನ್ನು ಅಲ್ಲಿಗೆ ಬಂದಾದರೂ ಅಥವಾ ಮನೆಯಲ್ಲೇ ಇದ್ದುಕೊಂಡು ರಾಮನ ಆಶೀರ್ವಾದಕ್ಕೆ ಪ್ರಾಪ್ತರಾಗಿ ಎಂದು ಗೋಪಾಲ್​ ಜಿ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್