AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Navami: ಮಂದಿರ ನಿರ್ಮಾಣದ‌ ಬಳಿಕ ಮೊದಲ ರಾಮನವಮಿ; ಅಯೋಧ್ಯೆಯಲ್ಲಿ ಬಾಲರಾಮನ ಸ್ಪರ್ಶಿಸಲಿದೆ ಸೂರ್ಯರಶ್ಮಿ

Ram Navami Celebrations at Ayodhya: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಳಿಕ ಮೊದಲ ರಾಮ ನವಮಿ ಆಚರಣೆ ನಡೆಯುತ್ತಿದೆ. ಸಂಭ್ರಮದ ಕ್ಷಣದಲ್ಲಿ ಬಾಲ ರಾಮನ ದರ್ಶನಕ್ಕೆ ಲಕ್ಷಾಂತರ ಭಕ್ತರು ಅಯೋಧ್ಯೆಗೆ ಬಂದಿದ್ದಾರೆ. ಇದೇ ವೇಳೆ ಸೂರ್ಯರಶ್ಮಿ ಬಾಲರಾಮನ ಸ್ಪರ್ಶಿಸುವ ವಿಶೇಷ ವಿದ್ಯಮಾನವೂ ನಡೆಯಲಿದ್ದು, ಅದನ್ನು ವೀಕ್ಷಿಸಲು ಭಕ್ತರು ಕಾತರದಿಂದಿದ್ದಾರೆ.

Ram Navami: ಮಂದಿರ ನಿರ್ಮಾಣದ‌ ಬಳಿಕ ಮೊದಲ ರಾಮನವಮಿ; ಅಯೋಧ್ಯೆಯಲ್ಲಿ ಬಾಲರಾಮನ ಸ್ಪರ್ಶಿಸಲಿದೆ ಸೂರ್ಯರಶ್ಮಿ
ಮಂದಿರ ನಿರ್ಮಾಣದ‌ ಬಳಿಕ ಮೊದಲ ರಾಮನವಮಿ: ಅಯೋಧ್ಯೆಯಲ್ಲಿ ಬಾಲರಾಮನ ಸ್ಪರ್ಶಿಸಲಿದೆ ಸೂರ್ಯರಶ್ಮಿ
ಹರೀಶ್ ಜಿ.ಆರ್​.
| Edited By: |

Updated on:Apr 17, 2024 | 6:51 AM

Share

ನವದೆಹಲಿ, ಏಪ್ರಿಲ್ 17: ನೂರಾರು ಕೋಟಿ ಭಕ್ತರ ಕನಸು ಜನವರಿ 22ರಂದು ನೆರೆವೇರಿತ್ತು. 500 ವರ್ಷಗಳ ಕಾಯುವಿಕೆಗೆ ತೆರೆ ಬಿದ್ದಿತ್ತು. ನಾನಾ ಕಸರತ್ತು-ಜಟಾಪಟಿಗಳ ನಡುವೆ ಬಾಲರಾಮ ಅಯೋಧ್ಯೆಯಲ್ಲಿ (Ayodhya) ವಿರಾಜಮಾನನಾಗಿದ್ದಾರೆ. ಇದೀಗ ಪ್ರಾಣ ಪ್ರತಿಷ್ಠಾಪನೆ ಬಳಿಕ ಮೊದಲ ರಾಮನವಮಿ (Ram Navami) ಬಂದಿದೆ. ಇದಕ್ಕಾಗಿ ಅಯೋಧ್ಯೆ ಸಿಂಗಾರಗೊಂಡಿದ್ದು, ಭಕ್ತರನ್ನ ಕೈಬೀಸಿ ಕರೆಯುತ್ತಿದೆ. ಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆ ಮತ್ತೊಮ್ಮೆ ಜಗಮಗಿಸುತ್ತಿದೆ. ಸಾವಿರಾರು ಭಕ್ತರಿಂದ ರಾಮಜನ್ಮಭೂಮಿ ಕೇಸರಿಮಯವಾಗಿ ಮಾರ್ಪಟ್ಟಿದೆ. ಇಂದು ರಾಮನವಮಿ ಹಿನ್ನೆಲೆಯಲ್ಲಿ ಬಾಲರಾಮನ ಕಣ್ತುಂಬಿಕೊಳ್ಳಲು ದೇಶದ ಹಲವೆಡೆಯಿಂದ ಭಕ್ತ ಸಾಗರವೇ ಹರಿದುಬಂದಿದೆ.

ವಿಶೇಷ ಎನ್ನುವಂತೆ ಇಂದು ಮಧ್ಯಾಹ್ನ 12:16ರ ಸುಮಾರಿಗೆ ಸೂರ್ಯಕಿರಣಗಳು ಬಾಲರಾಮನ ಮೂರ್ತಿಗೆ ಮುತ್ತಿಕ್ಕಲಿವೆ. ಸುಮಾರು 5 ನಿಮಿಷಗಳ ಕಾಲ ಸೂರ್ಯ ರಶ್ಮಿ ಬಾಲರಾಮನ ಮೇಲಿರಲಿದ್ದು, ವಿಶೇಷ ಕ್ಷಣ ಕಣ್ತುಂಬಿಸಿಕೊಳ್ಳಲು ರಾಮಭಕ್ತರು ಕುತೂಹಲದಿಂದ ಕಾಯುತ್ತಿದ್ದಾರೆ. ಭಕ್ತರ ಕಣ್ಮನ ಸೆಳೆಯಲು ಅಯೋಧ್ಯೆ ಬೀದಿಗಳಲ್ಲಿ 100ಕ್ಕೂ ಹೆಚ್ಚು ಎಲ್​ಇಡಿ ಪರದೆ ಅಳವಡಿಕೆಗೆ ಟ್ರಸ್ಟ್ ಮುಂದಾಗಿದೆ.

ಸುಮಾರು 17 ಲಕ್ಷ ಭಕ್ತರು ಅಯೋಧ್ಯೆಯತ್ತ ಬರುವ ನಿರೀಕ್ಷೆಯಿದೆ. ಹೀಗಾಗಿ ಮಂದಿರದ ವಿವಿಐಪಿ ಹಾಗೂ ವಿಐಪಿ ದರ್ಶನ ರದ್ದು ಮಾಡಲಾಗಿದೆ. ಬೆಳಗ್ಗೆ 3:30ರಿಂದ ರಾತ್ರಿ 11 ಗಂಟೆಯವರೆಗೆ ನಿರಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಬರದಂತೆ ರಾಮಮಂದಿರ ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮನವಿ ಮಾಡಿದ್ದಾರೆ. ನಿಮ್ಮ ಊರಿನಲ್ಲಿಯೇ ಇದ್ದು ರಾಮನವಮಿ ಆಚರಿಸಿ, ಅಯೋಧ್ಯೆ ರಾಮಮವಮಿ ಆಚರಣೆ ಟಿವಿಯಲ್ಲಿಯೇ ನೋಡಿ ಎಂದಿದ್ದಾರೆ.

ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಬಳಿಕ ರಾಮನವಮಿಗೆ ಅಯೋಧ್ಯೆ ಸಜ್ಜಾಗಿದೆ. ಲಕ್ಷಾಂತರ ಜನರು ರಾಮನನ್ನ ಕಣ್ತುಂಬಿಕೊಳ್ಳಲು ಅಯೋಧ್ಯೆಯತ್ತ ದೌಡಾಯಿಸುತ್ತಿದ್ದಾರೆ. ಈ ನಡುವೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಮತ್ತಷ್ಟು ಓದಿ: ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ರಾಮನವಮಿ ವಿಶೇಷ ಪೂಜೆಗಳ ಬಗ್ಗೆ ಮಾಹಿತಿ ಹಂಚಿಕೊಂಡ ಗೋಪಾಲ್​ ಜಿ

ಅಯೋಧ್ಯೆಯಲ್ಲಿ ಇಂದು ಬೆಳಗಿನ ಜಾವ ರಾಮನನ್ನು ಎಬ್ಬಿಸುವ ಮಂಗಲ ಆರತಿಯಿಂದ ರಾಮ ನವಮಿ ಆರಂಭಗೊಂಡಿದೆ. ಬಳಿಕ ಬಾಲ ರಾಮನಿಗೆ ಪಂಚಾಮೃತ ಅಭಿಷೇಕ ಹಾಗೂ ಶೃಂಗಾರ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆಯಲಿದೆ. 6 ಗಂಟೆಗೆ ಮೊದಲ ಶೃಂಗಾರ ಆರತಿ ನಡೆದಿದೆ. ರಾಮ ನವಮಿಯ ಅಯಧ್ಯೆಯ ಕಾರ್ಯಕ್ರಮ ದೂರದರ್ಶನದಲ್ಲಿ ನೇರಪ್ರಸಾರವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:50 am, Wed, 17 April 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?