AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮನ ದರ್ಶನಕ್ಕೆ ಪಾಕಿಸ್ತಾನದಿಂದ ಬರುತ್ತಿದ್ದಾರೆ 200 ಮಂದಿ ಭಕ್ತರು

Pakistani sindhi community people at Ayodhya: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ ಸಿಂಧಿ ಸಮುದಾಯದ 200 ಮಂದಿ ನಿಯೋಗವೊಂದು ಭಾರತಕ್ಕೆ ಬರುತ್ತಿದ್ದು, ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಮಾಡಲಿದ್ದಾರೆ. ಉತ್ತರಪ್ರದೇಶದ ಪ್ರಯಾಗ್​ರಾಜ್ ನಗರಕ್ಕೆ ಬಂದು ಅಲ್ಲಿಂದ ಬಸ್ ಮೂಲಕ ಈ ನಿಯೋಗ ಶುಕ್ರವಾರ ಸಂಜೆ ಅಯೋಧ್ಯೆಗೆ ಬರಲಿದ್ದಾರೆ. ಭಾರತದ ಸಿಂಧಿ ಸಮುದಾಯಕ್ಕೆ ಸೇರಿದ 150 ಜನರೂ ಕೂಡ ಈ ನಿಯೋಗದ ಜೊತೆ ಇದ್ದಾರೆ. ಒಟ್ಟು 350 ಜನರು ಅಯೋಧ್ಯೆಗೆ ಬರುತ್ತಿದ್ದಾರೆ. ಪಾಕಿಸ್ತಾನದ ಬಾಂಧವರನ್ನು ಅಯೋಧ್ಯೆಗೆ ಸ್ವಾಗತ ಮಾಡಲು ಭಾರತೀಯ ಸಿಂಧಿ ಸಮುದಾಯದ ಸಂಘಟನೆಗಳು ಕಾಯುತ್ತಿವೆ.

ಅಯೋಧ್ಯೆ ರಾಮನ ದರ್ಶನಕ್ಕೆ ಪಾಕಿಸ್ತಾನದಿಂದ ಬರುತ್ತಿದ್ದಾರೆ 200 ಮಂದಿ ಭಕ್ತರು
ರಾಮಮಂದಿರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 03, 2024 | 10:57 AM

Share

ನವದೆಹಲಿ, ಮೇ 3: ಪಾಕಿಸ್ತಾನದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ರಾಮಮಂದಿರಕ್ಕೆ (Ram Temple) ಪಾಕಿಸ್ತಾನದಿಂದ 200 ಮಂದಿ ಭಕ್ತರು ಭೇಟಿ ನೀಡಲಿದ್ದಾರೆ. ಅಲ್ಲಿನ ಅಲ್ಪಸಂಖ್ಯಾತ ಹಿಂದೂ ಸಿಂಧಿ ಸಮುದಾಯಕ್ಕೆ ಸೇರಿದ ಈ ಜನರು ಬಾಲರಾಮನ ದರ್ಶನ ಪಡೆದು ಗೌರವಾರ್ಪಣೆ ಮಾಡಲಿದ್ದಾರೆ. ಈಗಾಗಲೇ ಈ 200 ಜನರು ಪಾಕಿಸ್ತಾನದಿಂದ ಪ್ರಯಾಣ ಬೆಳೆಸಿದ್ದಾರೆ. ವರದಿಗಳ ಪ್ರಕಾರ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ ಹೊರಟಿರುವ ಈ ಗುಂಪು ಪ್ರಯಾಗ್​ರಾಜ್ ನಗರದಿಂದ (ಔರಂಗಾಬಾದ್) ಅಯೋಧ್ಯೆಗೆ ಬಸ್ ಮೂಲಕ ತೆರಳಲಿದೆಯಂತೆ. ಪಾಕಿಸ್ತಾನದ ಈ 200 ಮಂದಿ ಸಿಂಧಿ ಜನರ ಪ್ರಯಾಣದಲ್ಲಿ ಭಾರತೀಯ ಸಿಂಧಿ ಸಮುದಾಯದ 150 ಮಂದಿಯೂ ಜೊತೆಯಲ್ಲಿದ್ದಾರೆ ಎಂಬ ಮಾಹಿತಿ ಇದೆ. ಈ ಮಾಹಿತಿಯನ್ನು ರಾಮಮಂದಿರ ಟ್ರಸ್ಟ್ ಅಧಿಕಾರಿಗಳು ನೀಡಿದ್ದಾರೆ.

ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅಯೋಧ್ಯೆಯಲ್ಲಿರುವ ರಾಮ್ ಕೀ ಪೈಡಿ ಎಂಬ ಘಾಟ್ ಪ್ರದೇಶದಲ್ಲಿ ಈ ಪಾಕ್ ಭಕ್ತರ ನಿಯೋಗವನ್ನು ಸ್ವಾಗತ ಮಾಡಲಿದ್ದಾರೆ. ಅದಕ್ಕಾಗಿ ವಿಶೇಷ ಕಾರ್ಯಕ್ರಮ ಯೋಜಿಸಲಾಗಿದೆ.

ಇದನ್ನೂ ಓದಿ: 370ನೇ ವಿಧಿ ರದ್ದುಪಡಿಸಿ ಸಂವಿಧಾನಕ್ಕೆ ಶ್ರೇಷ್ಟ ಸೇವೆ ಸಲ್ಲಿಸಿದ್ದೇನೆ; ಪ್ರಧಾನಿ ಮೋದಿ

ಕೇಂದ್ರ ಸರ್ಕಾರಕ್ಕೆ ಸೇರಿದ ಸ್ವಾಯತ್ತ ಸಂಸ್ಥೆಯಾದ ರಾಷ್ಟ್ರೀಯ ಸಿಂಧಿ ವಿಕಾಸ್ ಪರಿಷದ್​ನ ಸದಸ್ಯ ವಿಶ್ವಪ್ರಕಾಶ್ ರೂಪನ್ ಪ್ರಕಾರ ಪಾಕಿಸ್ತಾನದಿಂದ ಬರುತ್ತಿರುವ ಸಿಂಧಿಗಳ ನಿಯೋಗವು ಮೊದಲಿಗೆ ಭರತ್ ಕುಂಡ್​ನಲ್ಲಿ ಸೇರಲಿದ್ದಾರೆ. ಬಳಿಕ ಗುಪ್ತರ್ ಘಾಟ್​ಗೆ ಬರಲಿದ್ದಾರೆ. ಉದಾಸಿನ್ ಋಷಿ ಆಶ್ರಮ್ ಮತ್ತು ಶಬರಿ ರಸೋಯ್​ನಲ್ಲಿ ಈ ನಿಯೋಗಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಇಂದು ಶುಕ್ರವಾರ ಸಂಜೆ ರಾಮ್ ಕೀ ಪೈಡಿಯಲ್ಲಿ ನಡೆಯಲಿರುವ ಸರಯೂ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅಯೋಧ್ಯೆಯ ಸಿಂಧಿ ಧಾಮ್ ಆಶ್ರಮ್​ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ವೇಳೆ ಭಾರತದ ವಿವಿಧ ಸಿಂಧಿ ಸಂಘಟನೆಗಳು ಪಾಕಿಸ್ತಾನದಿಂದ ಬಂದಿರುವ ತಮ್ಮ ಬಾಂಧವರನ್ನು ಸ್ವಾಗತಿಸಲಿದ್ದಾರೆ. ಸಂತ್ ಸಾದಾ ರಾಮ್ ದರ್ಬಾರ್ ಪೀಠದ ಮುಖ್ಯಸ್ಥ ಯುದಿಷ್ಠಿರ್ ಲಾಲ್ ಕೂಡ ಈ ವೇಳೆ ಇರಲಿದ್ದಾರೆ.

ಇದನ್ನೂ ಓದಿ: 25 ವರ್ಷದ ರಾಜಕೀಯದಲ್ಲಿ ನನಗೆ ಒಂದೂ ಕಪ್ಪು ಚುಕ್ಕಿ ಅಂಟಿಲ್ಲ; ಪ್ರಧಾನಿ ಮೋದಿ

ಈ ಪಾಕ್ ಸಿಂಧಿ ಸಮುದಾಯದ ರಾಮಭಕ್ತರು ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಮಾಡಿದ ಬಳಿಕ ಇಂದು ರಾತ್ರಿ (ಮೇ 3) ಲಕ್ನೋಗೆ ಹೋಗಿ ಅಲ್ಲಿಂದ ಛತ್ತೀಸ್​ಗಡದ ರಾಜಧಾನಿ ರಾಯಪುರಕ್ಕೆ ಹೋಗಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ