AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಲಲ್ಲಾ ಮಹಾಮಸ್ತಕಾಭಿಷೇಕ: ಸಚಿನ್ ತೆಂಡೂಲ್ಕರ್, ಕೊಹ್ಲಿ, ಅಮಿತಾಭ್ ಸೇರಿ 7000 ಸಾವಿರ ಗಣ್ಯರಿಗೆ ಆಹ್ವಾನ

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಅಯೋಧ್ಯೆಯ ರಾಮಲಲ್ಲಾ ಮಹಾಮಸ್ತಕಾಭಿಷೇಖಕ್ಕೆ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಹಿರಿಯ ನಟ ಅಮಿತಾಭ್ ಬಚ್ಚನ್ ಮತ್ತು ಉದ್ಯಮಿ ಮುಖೇಶ್​ ಅಂಬಾನಿ ಸೇರಿದಂತೆ 7 ಸಾವಿರ ಗಣ್ಯರನ್ನು ಆಹ್ವಾನಿಸಿದೆ. ದೂರದರ್ಶನದಲ್ಲಿ ಪ್ರಸಾರವಾದ ‘ರಾಮಾಯಣ' ಧಾರಾವಾಹಿಯಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ (ಲಾರ್ಡ್ ರಾಮ್), ಮತ್ತು ಸೀತಾ ದೇವಿಯ ಪಾತ್ರವನ್ನು ನಿರ್ವಹಿಸಿದ ದೀಪಿಕಾ ಚಿಖಾಲಿಯಾ ಅವರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನವನ್ನು ಕಳುಹಿಸಲಾಗಿದೆ.

ಅಯೋಧ್ಯೆ ರಾಮಲಲ್ಲಾ ಮಹಾಮಸ್ತಕಾಭಿಷೇಕ: ಸಚಿನ್ ತೆಂಡೂಲ್ಕರ್, ಕೊಹ್ಲಿ, ಅಮಿತಾಭ್ ಸೇರಿ 7000 ಸಾವಿರ ಗಣ್ಯರಿಗೆ ಆಹ್ವಾನ
ಅಯೋಧ್ಯೆ ಮಹಾಮಸ್ತಾಭಿಷೇಕಕ್ಕೆ ಆಹ್ವಾನಿತ ಗಣ್ಯರುImage Credit source: India TV
ನಯನಾ ರಾಜೀವ್
|

Updated on: Dec 07, 2023 | 9:59 AM

Share

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಅಯೋಧ್ಯೆಯ ರಾಮಲಲ್ಲಾ ಮಹಾಮಸ್ತಕಾಭಿಷೇಕಕ್ಕೆ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್(Sachin Tendulkar), ವಿರಾಟ್ ಕೊಹ್ಲಿ(Virat Kohli), ಹಿರಿಯ ನಟ ಅಮಿತಾಭ್ ಬಚ್ಚನ್(Amitabh Bachchan) ಮತ್ತು ಉದ್ಯಮಿ ಮುಕೇಶ್​ ಅಂಬಾನಿ ಸೇರಿದಂತೆ 7 ಸಾವಿರ ಗಣ್ಯರನ್ನು ಆಹ್ವಾನಿಸಿದೆ.

ದೂರದರ್ಶನದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯಲ್ಲಿ ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ (ಲಾರ್ಡ್ ರಾಮ್), ಮತ್ತು ಸೀತಾ ದೇವಿಯ ಪಾತ್ರವನ್ನು ನಿರ್ವಹಿಸಿದ ದೀಪಿಕಾ ಚಿಖಾಲಿಯಾ ಅವರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನವನ್ನು ಕಳುಹಿಸಲಾಗಿದೆ.

ಜನವರಿ 22, 2024 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಈಗಾಗಲೇ ಆಹ್ವಾನಿಸಲಾಗಿದೆ. ಟ್ರಸ್ಟ್ 3,000 ವಿವಿಐಪಿಗಳು ಸೇರಿದಂತೆ 7,000 ಜನರಿಗೆ ಆಹ್ವಾನ ಕಳುಹಿಸಿದೆ.

1992ರಲ್ಲಿ ಹತ್ಯೆಗೀಡಾದ ಕರಸೇವಕರ ಕುಟುಂಬಗಳನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಆಹ್ವಾನಿತ ವಿವಿಐಪಿಗಳಲ್ಲಿ ಆರ್​ಎಸ್​ಎಸ್​ನ ಸರಸಂಘ ಚಾಲಕ ಮೋಹನ್ ಭಾಗವತ್, ಯೋಗ ಗುರು ರಾಮ್ ದೇವ್, ಕೈಗಾರಿಕೋದ್ಯಮಿ ರತನ್ ಟಾಟಾ, ಕೈಗಾರಿಕೋದ್ಯಮಿ ಗೌತಮ್ ಅದಾನಿ ಕೂಡ ಸೇರಿದ್ದಾರೆ.

ಮತ್ತಷ್ಟು ಓದಿ: ಅಯೋಧ್ಯೆಯ ರಾಮ ಮಂದಿರದ ಅರ್ಚಕ ಹುದ್ದೆಗೆ ಬಂತು ಬರೋಬ್ಬರಿ 3000 ಅರ್ಜಿ!

ಅಯೋಧ್ಯೆಯಲ್ಲಿ ರಾಮಲಲ್ಲಾನ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಎಲ್ಲಾ ಜಿಲ್ಲೆಗಳ ಪ್ರತಿಷ್ಠಿತ ದೇವಾಲಯಗಳಲ್ಲಿ ಜನವರಿ 14 ರಿಂದ (ಮಕರ ಸಂಕ್ರಾಂತಿ) ಜನವರಿ 22 ರವರೆಗೆ ನಿರಂತರವಾಗಿ ರಾಮಾಯಣ, ರಾಮಚರಿತಮಾನಸ ಮತ್ತು ಹನುಮಾನ್ ಚಾಲೀಸವನ್ನು ಪಠಿಸಬೇಕು ಎಂಬುದು ಯೋಗಿ ಸರ್ಕಾರದ ಯೋಜನೆಯಾಗಿದೆ.

ಪ್ರಸ್ತುತ ಅಯೋಧ್ಯೆಯಲ್ಲಿ 30 ಸಾವಿರದ 500 ಕೋಟಿ ರೂ.ಗಳ 178 ಅಭಿವೃದ್ಧಿ ಯೋಜನೆಗಳ ಕಾಮಗಾರಿ ನಡೆಯುತ್ತಿದೆ. ಖಾಸಗಿ ವಲಯದ ಸಹಭಾಗಿತ್ವವನ್ನು ಸೇರಿಸಿದರೆ, ಮುಂದಿನ ದಿನಗಳಲ್ಲಿ 50 ಸಾವಿರ ಕೋಟಿ ರೂ.ಗಳ ಯೋಜನೆಗಳು ಇಲ್ಲಿ ರೂಪುಗೊಂಡವು. ಇದರಿಂದ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!