AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’

ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಟ್ರಸ್ಟ್​ ತಿಳಿಸಿದೆ.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ
Lakshmi Hegde
|

Updated on: Jun 01, 2021 | 8:58 AM

Share

ದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಮಂದಿರದ ಅಡಿಪಾಯ ನಿರ್ಮಿಸುವ ಕೆಲಸವನ್ನು ರೋಲರ್​ ಕಂಪಾಕ್ಟ್​ ಕಾಂಕ್ರೀಟ್​ ತಂತ್ರ ಬಳಸಿ ಮಾಡಲಾಗುವುದು. ಹಾಗೇ, ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಕೆಲಸಗಾರರ ಸುರಕ್ಷತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದೂ ಟ್ರಸ್ಟ್​ ತಿಳಿಸಿದೆ.

ರಾಮಮಂದಿರ ನಿರ್ಮಾಣಕ್ಕೆ ಯಾವುದೇ ವಿಘ್ನಗಳೂ ಇಲ್ಲ. ಅಡೆತಡೆಯಿಲ್ಲದೆ ಕೆಲಸ ಮುಂದುವರಿದಿದೆ. ಈಗಾಗೇ ಸುಮಾರು 1,20,000 ಘನ ಮೀಟರ್​ ವಿಸ್ತಾರದ ಪ್ರದೇಶದಲ್ಲಿ ಪುಡಿಕಲ್ಲುಗಳನ್ನು ತೆಗೆದು, ಸ್ವಚ್ಛಗೊಳಿಸಲಾಗಿದೆ. ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ. ಆರೋಗ್ಯವಾಗಿಯೂ ಇದ್ದಾರೆ. ಅಕ್ಟೋಬರ್​ ಒಳಗೆ ಆರ್​ಸಿಸಿ ಹಾಕುವ ಕೆಲಸ ಮುಗಿಯುವ ಭರವಸೆ ಇದೆ ಎಂದೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

ರೋಲರ್​ ಕಾಂಪಾಕ್ಟ್​ ಮೂಲಕ ರಾಮಮಂದಿರಕ್ಕೆ ಅಡಿಪಾಯ ಹಾಕುವುದನ್ನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಹೀಗೆ ಮಾಡಿದರೆ 1,20,000 ಚದರ ಅಡಿ ವಿಸ್ತೀರ್ಣಕ್ಕೆ, 4 ಲೇಯರ್​​ಗಳಷ್ಟು ಅಡಿಪಾಯ ಹಾಕಲು 40-45 ದಿನಗಳು ಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು