AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’

ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಟ್ರಸ್ಟ್​ ತಿಳಿಸಿದೆ.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ
Lakshmi Hegde
|

Updated on: Jun 01, 2021 | 8:58 AM

Share

ದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಮಂದಿರದ ಅಡಿಪಾಯ ನಿರ್ಮಿಸುವ ಕೆಲಸವನ್ನು ರೋಲರ್​ ಕಂಪಾಕ್ಟ್​ ಕಾಂಕ್ರೀಟ್​ ತಂತ್ರ ಬಳಸಿ ಮಾಡಲಾಗುವುದು. ಹಾಗೇ, ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಕೆಲಸಗಾರರ ಸುರಕ್ಷತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದೂ ಟ್ರಸ್ಟ್​ ತಿಳಿಸಿದೆ.

ರಾಮಮಂದಿರ ನಿರ್ಮಾಣಕ್ಕೆ ಯಾವುದೇ ವಿಘ್ನಗಳೂ ಇಲ್ಲ. ಅಡೆತಡೆಯಿಲ್ಲದೆ ಕೆಲಸ ಮುಂದುವರಿದಿದೆ. ಈಗಾಗೇ ಸುಮಾರು 1,20,000 ಘನ ಮೀಟರ್​ ವಿಸ್ತಾರದ ಪ್ರದೇಶದಲ್ಲಿ ಪುಡಿಕಲ್ಲುಗಳನ್ನು ತೆಗೆದು, ಸ್ವಚ್ಛಗೊಳಿಸಲಾಗಿದೆ. ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ. ಆರೋಗ್ಯವಾಗಿಯೂ ಇದ್ದಾರೆ. ಅಕ್ಟೋಬರ್​ ಒಳಗೆ ಆರ್​ಸಿಸಿ ಹಾಕುವ ಕೆಲಸ ಮುಗಿಯುವ ಭರವಸೆ ಇದೆ ಎಂದೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

ರೋಲರ್​ ಕಾಂಪಾಕ್ಟ್​ ಮೂಲಕ ರಾಮಮಂದಿರಕ್ಕೆ ಅಡಿಪಾಯ ಹಾಕುವುದನ್ನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಹೀಗೆ ಮಾಡಿದರೆ 1,20,000 ಚದರ ಅಡಿ ವಿಸ್ತೀರ್ಣಕ್ಕೆ, 4 ಲೇಯರ್​​ಗಳಷ್ಟು ಅಡಿಪಾಯ ಹಾಕಲು 40-45 ದಿನಗಳು ಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ