AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’

ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ ಎಂದು ಟ್ರಸ್ಟ್​ ತಿಳಿಸಿದೆ.

‘ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ..ಯಾವುದೇ ಅಡೆತಡೆಗಳೂ ಇಲ್ಲ’
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ
Lakshmi Hegde
|

Updated on: Jun 01, 2021 | 8:58 AM

Share

ದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಾಹಿತಿ ನೀಡಿದೆ. ರಾಮಮಂದಿರದ ಅಡಿಪಾಯ ನಿರ್ಮಿಸುವ ಕೆಲಸವನ್ನು ರೋಲರ್​ ಕಂಪಾಕ್ಟ್​ ಕಾಂಕ್ರೀಟ್​ ತಂತ್ರ ಬಳಸಿ ಮಾಡಲಾಗುವುದು. ಹಾಗೇ, ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಎಲ್ಲ ಕೆಲಸಗಾರರ ಸುರಕ್ಷತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದೂ ಟ್ರಸ್ಟ್​ ತಿಳಿಸಿದೆ.

ರಾಮಮಂದಿರ ನಿರ್ಮಾಣಕ್ಕೆ ಯಾವುದೇ ವಿಘ್ನಗಳೂ ಇಲ್ಲ. ಅಡೆತಡೆಯಿಲ್ಲದೆ ಕೆಲಸ ಮುಂದುವರಿದಿದೆ. ಈಗಾಗೇ ಸುಮಾರು 1,20,000 ಘನ ಮೀಟರ್​ ವಿಸ್ತಾರದ ಪ್ರದೇಶದಲ್ಲಿ ಪುಡಿಕಲ್ಲುಗಳನ್ನು ತೆಗೆದು, ಸ್ವಚ್ಛಗೊಳಿಸಲಾಗಿದೆ. ಆರ್​ಸಿಸಿಯ ಒಂದು ಪದರ ಹಾಕಲು 4-5ದಿನ ತೆಗೆದುಕೊಳ್ಳುತ್ತದೆ. ಸದ್ಯ ಸ್ಥಳದಲ್ಲಿ ಹಲವು ಇಂಜಿನಿಯರ್​​ಗಳು, ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇವರೆಲ್ಲ ಸುರಕ್ಷಿತವಾಗಿದ್ದಾರೆ. ಆರೋಗ್ಯವಾಗಿಯೂ ಇದ್ದಾರೆ. ಅಕ್ಟೋಬರ್​ ಒಳಗೆ ಆರ್​ಸಿಸಿ ಹಾಕುವ ಕೆಲಸ ಮುಗಿಯುವ ಭರವಸೆ ಇದೆ ಎಂದೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

ರೋಲರ್​ ಕಾಂಪಾಕ್ಟ್​ ಮೂಲಕ ರಾಮಮಂದಿರಕ್ಕೆ ಅಡಿಪಾಯ ಹಾಕುವುದನ್ನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಹೀಗೆ ಮಾಡಿದರೆ 1,20,000 ಚದರ ಅಡಿ ವಿಸ್ತೀರ್ಣಕ್ಕೆ, 4 ಲೇಯರ್​​ಗಳಷ್ಟು ಅಡಿಪಾಯ ಹಾಕಲು 40-45 ದಿನಗಳು ಬೇಕು ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ವೀಟ್ ಮಾಡಿದೆ.

Follow Us
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ