AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆ; ಮನೆ ಮುಂದೆ ಹಣತೆ ಹಚ್ಚಿ ಭಕ್ತಿ, ಸಂಭ್ರಮ ಆಚರಿಸಿ: ಸಚಿವ ಧರ್ಮೇಂದ್ರ ಪ್ರಧಾನ್ ಕರೆ

Dharmendra Pradhan: ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನರು ಮನೆ ಮುಂದೆ ಹಣತೆ ಹಚ್ಚಬೇಕೆಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕರೆನೀಡಿದ್ದಾರೆ. ಜನವರಿ 22, ಸಂಜೆ ಎಲ್ಲರೂ ಮನೆ ಮುಂದೆ ದೀಪ ಹಚ್ಚಿ ದೀಪಾವಳಿಯಂತೆ ಆಚರಿಸಬೇಕೆಂದು ಮನವಿ ಮಾಡಿದ್ದಾರೆ. ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಬೆಳಗ್ಗೆ 6:30ಕ್ಕೆ ಆರತಿ ನಡೆಯಲಿದೆ. 12:30ಕ್ಕೆ ಪ್ರಾಣ ಪ್ರತಿಷ್ಠಾಪನೆಯಾಗಲಿದೆ.

ರಾಮಮಂದಿರ ಉದ್ಘಾಟನೆ; ಮನೆ ಮುಂದೆ ಹಣತೆ ಹಚ್ಚಿ ಭಕ್ತಿ, ಸಂಭ್ರಮ ಆಚರಿಸಿ: ಸಚಿವ ಧರ್ಮೇಂದ್ರ ಪ್ರಧಾನ್ ಕರೆ
ಧರ್ಮೇಂದ್ರ ಪ್ರಧಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2024 | 6:27 PM

Share

ನವದೆಹಲಿ, ಜನವರಿ 21: ನಾಳೆ ನಡೆಯಲಿರುವ ರಾಮ ಮಂದಿರ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ (Ram temple consecration ceremony) ಹಿನ್ನೆಲೆಯಲ್ಲಿ ಸೋಮವಾರದಂದು ದೇಶವಾಸಿಗಳು ತಮ್ಮ ಮನೆ ಮುಂದೆ ದೀಪ (ligh the lamp) ಹಚ್ಚಿಸುವಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮನವಿ ಮಾಡಿದ್ದಾರೆ. ‘ಈ ಒಂದು ಸಂದರ್ಭಕ್ಕಾಗಿ ಇಡೀ ದೇಶ ಕಾಯುತ್ತಿದೆ. ಜನವರಿ 22ರಂದು ಸಂಜೆ ದೇಶದ ಎಲ್ಲಾ ಜನರೂ ತಮ್ಮ ಮನೆಗಳ ಮುಂದೆ ಹಣತೆ ಹಚ್ಚಿ ದೀಪಾವಳಿ ಆಚರಿಸಬೇಕೆಂಬುದು ನನ್ನ ಮನವಿ’ ಎಂದು ಸಚಿವರು ಕರೆ ನೀಡಿದ್ದಾರೆ.

‘ನಂಬಿಕೆಯ ದೀಪ ಹಚ್ಚಿಸೋಣ, ಮತ್ತೊಮ್ಮೆ ಧಾಮ್ ಧೂಮ್ ಎಂದು ದೀಪಾವಳಿ ಆಚರಿಸೋಣ’ ಎಂದು ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಅವರು ತಮ್ಮ ಕುಟುಂಬ ಸದಸ್ಯರು ಹಾಗೂ ನೆರೆ ಹೊರೆಯವರೊಂದಿಗೆ ಸೇರಿ ದೀಪಗಳಿಗೆ ಬತ್ತಿ ಹೊಸೆದು ಸಿದ್ಧಗೊಳಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.

ಜನವರಿ 22ರಂದು ಏನಿವೆ ಕಾರ್ಯಕ್ರಮಗಳು

ಉತ್ತರಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ನೂತನವಾಗಿ ಮರುನಿರ್ಮಿಸಲಾಗಿರುವ ರಾಮಮಂದಿರದ ಬಾಲ ರಾಮನಗ ವಿಗ್ರಹ ಪ್ರಾಣಪ್ರತಿಷ್ಠಾಪನಾ ಮಹೋತ್ಸವ ಸೋಮವಾರ 12:15ರಿಂದ 12:45ರ ವೇಳೆಗೆ ನಡೆಯಲಿದೆ. ದೈವಿಕ ಶಕ್ತಿಯನ್ನು ವಿಗ್ರಹಕ್ಕೆ ಆಹ್ವಾನಿಸಲು ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನಡೆಯಲಿದೆ.

ಇದನ್ನೂ ಓದಿ: Casinos Closure: ರಾಮಮಂದಿರ ಕಾರ್ಯಕ್ರಮ: ಕ್ಯಾಸಿನೋವಾಗಳು ಬಂದ್; ಇತರ ಉದ್ಯಮ ವಲಯದ ಸ್ಪಂದನೆ ಹೇಗೆ?

ಸೋಮವಾರ ಬೆಳಗ್ಗೆಯಿಂದಲೇ ಸಾರ್ವಜನಿಕರಿಗೆ ದೇವಸ್ಥಾನದ ದರ್ಶನದ ಅವಕಾಶ ನೀಡಲಾಗುತ್ತದೆ. 11:30ಕ್ಕೆ ದರ್ಶನ ನಿಲ್ಲಿಸಲಾಗುತ್ತದೆ. ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಮಧ್ಯಾಹ್ನ 2ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನಕ್ಕೆ ಮತ್ತೆ ಅವಕಾಶ ಕೊಡಲಾಗುತ್ತದೆ.

ಬೆಳಗ್ಗೆ 6:30, ಮಧ್ಯಾಹ್ನ 12 ಹಾಗೂ ಸಂಜೆ 7:30 ಈ ಮೂರು ಅವಧಿಯಲ್ಲಿ ಆರತಿ ಎತ್ತಲಾಗುತ್ತದೆ. ದೇಶದ ವಿವಿಧ ದೇವಸ್ಥಾನಗಳಲ್ಲಿ ಕಳೆದ ಎರಡು ಮೂರು ದಿನಗಳಿಂದಲೇ ನಿತ್ಯ ದೇವರ ಪ್ರಾರ್ಥನೆ, ಪೂಜೆ, ಪುನಸ್ಕಾರ, ಭಜನೆಗಳು ನಡೆಯುತ್ತಿವೆ. ಜನವರಿ 22ರಂದೂ ಎಲ್ಲೆಡೆ ಪೂಜೆಗಳು ಇರುತ್ತವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ