AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ವ್ಯವಹಾರ ಮೇಲ್ವಿಚಾರಣೆ ನಡೆಸಲು ಆರ್ಥಿಕ-ಕಾನೂನು ಸಲಹಾ ಸಮಿತಿಗಳ ರಚನೆ; ಭೂ ಖರೀದಿ ಅಕ್ರಮ ಆರೋಪದ ಬೆನ್ನಲ್ಲೇ ನಿರ್ಧಾರ

Ram Temple: ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಖರೀದಿ ಮಾಡುವಾಗ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಅಷ್ಟೇ ಅಲ್ಲ, ಇದರಲ್ಲಿ ಚಂಪತ್​ ರಾಯ್​​ರನ್ನೇ ನೇರವಾಗಿ ಹೊಣೆ ಮಾಡಲಾಗುತ್ತಿದೆ.

ರಾಮಮಂದಿರ ವ್ಯವಹಾರ ಮೇಲ್ವಿಚಾರಣೆ ನಡೆಸಲು ಆರ್ಥಿಕ-ಕಾನೂನು ಸಲಹಾ ಸಮಿತಿಗಳ ರಚನೆ; ಭೂ ಖರೀದಿ ಅಕ್ರಮ ಆರೋಪದ ಬೆನ್ನಲ್ಲೇ ನಿರ್ಧಾರ
ಶ್ರೀರಾಮ ಮಂದಿರ
TV9 Web
| Edited By: |

Updated on: Jul 11, 2021 | 12:18 PM

Share

ದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ (Ram Temple) ನಿರ್ಮಾಣ ಕಾರ್ಯ ಒಂದು ಕಡೆ ಭರದಿಂದ ನಡೆಯುತ್ತಿದೆ. ಈ ಮಧ್ಯೆ ಇಲ್ಲಿ ಭೂಮಿ ಖರೀದಿ ಬಗ್ಗೆ ವಿವಾದವೊಂದು ಎದ್ದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾರ್ಚ್​ನಲ್ಲಿ ಇಲ್ಲಿ ಸ್ವಲ್ಪ ಹೆಚ್ಚುವರಿ ಭೂಮಿಯನ್ನು ಖರೀದಿಸಿದ್ದರ ಬಗ್ಗೆ ಆಪ್, ಸಮಾಜವಾದಿ ಪಕ್ಷ, ಕಾಂಗ್ರೆಸ್​​ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಇಲ್ಲಿ ಅಕ್ರಮ ನಡೆದಿದೆ ಎಂದು ಸಿಬಿಐ ತನಿಖೆಗೂ ಒತ್ತಾಯಿಸಿವೆ. ಈ ಬೆನ್ನಲ್ಲೇ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ (Shree Ram Janmbhoomi Teerth Kshetra Trust)​ ಒಂದು ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಮಮಂದಿರಕ್ಕೆ ಸಂಬಂಧಪಟ್ಟ ವ್ಯವಹಾರಗಳನ್ನು ನೋಡಿಕೊಳ್ಳಲು ಆರ್ಥಿಕ ಮತ್ತು ಕಾನೂನು ಸಲಹಾ ಸಮಿತಿಗಳನ್ನು ರಚಿಸುವುದಾಗಿ ಹೇಳಿಕೊಂಡಿದೆ.

ಚಿತ್ರಕೂಟದಲ್ಲಿ ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರಚಾರಕ್​ ಬೈಠೆಕ್​ ಆಯೋಜಿಸಲಾಗಿದ್ದು, ಅದಕ್ಕೂ ಮೊದಲೇ ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್​ ರಾಯ್​ ಅವರು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾಗಿದ್ದಾರೆ. ಈ ವೇಳೆ ಅಯೋಧ್ಯೆಯಲ್ಲಿ ಸದ್ಯ ಎದ್ದಿರುವ ಭೂಮಿ ವಿವಾದದ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ದೇವಾಲಯದ ಆವರಣಕ್ಕಾಗಿ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇನ್ನಷ್ಟು ಭೂಮಿ ಖರೀದಿ ಮಾಡಿದೆ. ಆದರೆ ಇದರಲ್ಲಿ ಅವ್ಯವಹಾರ ನಡೆದಿದ್ದು, ಅಕ್ರಮದಲ್ಲಿ ಚಂಪತ್​ ರಾಯ್​ ಮತ್ತು ಟ್ರಸ್ಟ್​ನ ಇನ್ನೊಬ್ಬ ಸದಸ್ಯ ಅನಿಲ್​ ಮಿಶ್ರಾ ಪಾಲಿದೆ ಎಂದು ಆಮ್​ ಆದ್ಮಿ ಪಕ್ಷದ ಸಂಸದ ಸಂಜಯ್​ ಸಿಂಗ್​ ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ್ದ ಆರ್​ಎಸ್​ಎಸ್​, ರಾಮಮಂದಿರ ನಿರ್ಮಾಣಕ್ಕೆ ಅಡ್ಡಿ ಪಡಿಸಲು ವಿರೋಧ ಪಕ್ಷಗಳು ರಾಜಕೀಯ ಹುನ್ನಾರ ನಡೆಸುತ್ತಿವೆ ಎಂದು ಹೇಳಿತ್ತು.

ಶ್ರೀರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಖರೀದಿ ಮಾಡುವಾಗ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡುತ್ತಿವೆ. ಅಷ್ಟೇ ಅಲ್ಲ, ಇದರಲ್ಲಿ ಚಂಪತ್​ ರಾಯ್​​ರನ್ನೇ ನೇರವಾಗಿ ಹೊಣೆ ಮಾಡಲಾಗುತ್ತಿದೆ. ಈ ಮಧ್ಯೆ ಚಂಪತ್​ ರಾಯ್​ರನ್ನು ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆಯಲಾಗುತ್ತದೆ ಎಂಬುದೊಂದು ಮಾತೂ ಕೇಳಿಬರುತ್ತಿದೆ. ಆದರೆ ಇದನ್ನು ವಿಶ್ವ ಹಿಂದು ಪರಿಷತ್​ನ ಜಂಟಿ ಕಾರ್ಯದರ್ಶಿ ಸುರೇಂದರ್​ ಜೈನ್​ ತಳ್ಳಿ ಹಾಕಿದ್ದಾರೆ. ಶ್ರೀರಾಮಂದಿರ ನಿರ್ಮಾಣ ಕಾರ್ಯದಲ್ಲಿ ಚಂಪತ್ ರಾಯ್​ ಸಕ್ರಿಯರಾಗಿದ್ದಾರೆ. ಅವರನ್ನು ನೇಮಕ ಮಾಡಿದ್ದು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್. ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತಡೆಯುವುದು ಕಷ್ಟ, ಆದರೆ ನಮ್ಮ ಹೋರಾಟ ಮುಂದುವರಿಸುತ್ತೇವೆ; ಸಂಸದೆ ಸುಮಲತಾ

Ram Temple trust to set up economic legal advisory committees To oversee the transaction

Follow Us
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
ಹಿಮಾಚಲ ಪ್ರದೇಶದ ಚಿಂತ್‌ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು